ಬೆಂಗಳೂರು: ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಯನ್ನು ಅರಸೀಕೆರೆ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಮೌಸಮ್ ಪಹಡಿ (25) ಬಂಧಿತ ಆರೋಪಿ. ಫೆಬ್ರವರಿ 13ರಂದು ಹಾಸನದ ರೈಲ್ವೆ ಜಂಕ್ಷನ್ ಸಮೀಪದ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಸಕಲೇಶಪುರದಲ್ಲಿ ರಸ್ತೆ ಕಾಮಗಾರಿ ಕೆಲಸದಲ್ಲಿದ್ದ ಆರೋಪಿ, ಫೆಬ್ರವರಿ 13ರಂದು ನೇಪಾಳಕ್ಕೆ ತೆರಳಲು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ. ಹಾಸನದ ರೈಲ್ವೆ ಜಂಕ್ಷನ್ ಸಮೀಪದ ಶೆಡ್ ಬಳಿ …
Read More »ಗ್ರಾಮ ಆಡಳಿತ ಅಧಿಕಾರಿಗಳಿಗೆ 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸ ಸುಗಮಗೊಳಿಸಲು 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಸಾವಿರ ಲ್ಯಾಪ್ಟಾಪ್ ನೀಡಲು ಸರ್ಕಾರ ಅನುಮೋದಿಸಿದ್ದು, ಇನ್ನು 6 ತಿಂಗಳಲ್ಲಿ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಛಾವಾಡಿಗಳು ಶಿಥಿಲಗೊಂಡಿದ್ದು, ಅವುಗಳ ಪುನರ್ ನಿರ್ಮಾಣಕ್ಕೆ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು. …
Read More »ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ
ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಗುತ್ತಿಗೆದಾರ ಬಾಕಿ ಬಿಲ್ಲನ್ನು ಶೀಘ್ರ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಸದನದಲ್ಲಿ ಸಚಿವರನ್ನು ಆಗ್ರಹಿಸಿದರು ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಪ್ರಶ್ನೆ ಮಾಡಿದ ಅವರು 2024-25 ಸಾಲಿನಲ್ಲಿ ಇಲಾಖೆಯಿಂದ ಮೀಸಲಿಟ್ಟ ಅನುದಾನ10 ಸಾವಿರದ23 ಕೋಟಿ ಎಂದು ತೋರಿಸಲಾಗಿದೆ 25 ಫೆಬ್ರುವರಿವರೆಗೆ ಬಿಡುಗಡೆಯಾದ ಹಣ ಎಷ್ಟು ಬಾಕಿ …
Read More »ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್.
ಬೆಂಗಳೂರು : “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ …
Read More »45 ದಿನಗಳಲ್ಲಿ ನಾವಿಕರ ಕುಟುಂಬ ಗಳಿಸಿದ್ದು ಬರೋಬ್ಬರಿ 30 ಕೋಟಿ ರೂ.
ಪ್ರಯಾಗ್ರಾಜ್, ಮಾರ್ಚ್ 05: ಮಹಾಕುಂಭ ಮೇಳವು ನಿಜವಾಗಿಯೂ ಕೋಟ್ಯಂತರ ಜನರ ಮನಸ್ಸಿನಲ್ಲಿ ಅಳಿಸಲಾಗದ ನೆನಪಾಗಿ ಉಳಿದಿದೆ. ಈ ಮಹಾ ಕುಂಭದಲ್ಲಿ ಒಂದೆಡೆ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಚರ್ಚೆ ನಡೆಯಿತು. ಮತ್ತೊಂದೆಡೆ, ಮಹಾ ಕುಂಭವು ಜನರಿಗೆ ಆದಾಯದ ಮೂಲವೂ ಆಗಿತ್ತು. ನಾವಿಕ ಕುಟುಂಬವೊಂದು 45 ದಿನಗಳಲ್ಲಿ ಬರೋಬ್ಬರಿ 30 ಕೋಟಿ ರೂ.ಗಳನ್ನು ಗಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕುರಿತು ಮಾತನಾಡಿದ್ದಾರೆ. ನಾವಿಕ ಕುಟುಂಬವು ಪ್ರಯಾಗ್ರಾಜ್ನ ನೈನಿಯ ಅರೈಲ್ನವರು. ಈ …
Read More »ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ …
Read More »ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಮಹಿಳೆ ಹೊಟ್ಟೆಯಲ್ಲಿತ್ತು 5 ಕೆ.ಜಿ ಗೆಡ್ಡೆ
ದೊಡ್ಡಬಳ್ಳಾಪುರ: ಹೊಟ್ಟೆನೋವು ಎಂದು 45 ವರ್ಷದ ಮಹಿಳೆಯೊಬ್ಬರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಆಕೆಯ ಉದರದಲ್ಲಿದ್ದ 5 ಕೆ.ಜಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಆಕೆ, ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಡಾ.ಅರ್ಚನಾ ಅವರು ಪರೀಕ್ಷೆ ನಡೆಸಿದ್ದು, ಸ್ಕ್ಯಾನಿಂಗ್ನಲ್ಲಿ ಹೊಟ್ಟೆಯಲ್ಲಿ 5 ಕೆ.ಜಿ ಗಾತ್ರದ ಗೆಡ್ಡೆ ಇರುವುದು …
Read More »ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು : ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್ ಲರ್ನಿಂಗ್ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಜವಾಹರ್ಲಾಲ್ ನೆಹರು …
Read More »ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು
ಬೆಂಗಳೂರು : “ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. …
Read More »ಬಜೆಟ್ ಅಧಿವೇಶನ ಪ್ರಾರಂಭ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ
ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಸತತ 2-3 ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ. ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ …
Read More »