Breaking News

Uncategorized

ರಾಧಾಕೃಷ್ಣ ಯೋಜನೆಗೆ ಹೆಚ್ಚಿದ ವಿರೋಧ

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಹಿನ್ನೀರನ್ನು ಇಚಲಕರಂಜಿಗೆ ಸಾಗಿಸಲು ಮಹಾರಾಷ್ಟç ಸರ್ಕಾರ ಯೋಜನೆ ರೂಪಿಸಿದೆ. ಕಲ್ಲೋಳ ಬ್ಯಾರೇಜ್ ಹಿನ್ನೀರಿನ ಕರ್ನಾಟಕದ ಗಡಿ ಗ್ರಾಮಗಳಿಗೆ ಆಯ್ತು, ಮಹಾರಾಷ್ಟçದ ಕೊಲ್ಲಾಪುರ ಜಿ±್ಲೆ ಶಿರೋಳ ತಾಲೂಕಿನ ದಾನವಾಡ, ದತ್ತವಾಡ, ಸೈನಿಕ ಟಾಕಳಿ, ಟಾಕಳಿವಾಡಿ, ಅಕ್ಕಿವಾಟ, ಖಿದರಾಪುರ, ಘೋಸರವಾಡ, ರಾಜಾಪುರ, ಮಧುರೇವಾಡಿ, ಹೆರವಾಡ ​​ಮತ್ತು ತೆರವಾಡ ​​ಸೇರಿದಂತೆ ಹತ್ತಾರು ಗ್ರಾಮಗಳಿಗೆ ಜಲ ಮೂಲವಾಗಿದೆ. ಜಾರಿಯಾದರೆ ಈ ಎಲ್ಲ ಗ್ರಾಮಗಳಲ್ಲಿ ನೀರಿನ ಕೊರತೆಯಾಗಲಿದೆ ಎಂಬ ಆಕ್ರೋಶ ಗಡಿ …

Read More »

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ

 ಬೆಳಗಾವಿ: 2026-27 ನೇ ಸಾಲಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಟ್ಗಳನ್ನು ಅನುಷ್ಠಾನ ಮಾಡಲು ಚಾಲ್ತಿಯಲ್ಲಿರುವ ನೋಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ)/ಯಂತ್ರ ಧಾರೆ ಕೇಂದ್ರಗಳು/ ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲು అభి ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಷ್ಟ 31, 2026 ಕೊನೆಯ ದಿನವಾಗಿರುತ್ತದೆ, ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ. ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು. ಬೆಳಗಾವಿ ಜಿಲ್ಲೆಗೆ …

Read More »

ಕೇವಲ ಅಕ್ಷರ ಕಲಿಯುವುದಷ್ಟೇ ಶಿಕ್ಷಣವಲ್ಲ; ಸನಾತನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವುದೇ ಜೊಲ್ಲೆ ಎಜುಕೇಶನ್ ಸೊಸೈಟಿಯ ಶಾಲೆಯ ಮೂಲ ಉದ್ದೇಶ: ಶಾಸಕಿ ಶಶಿಕಲಾ ಜೊಲ್ಲೆ

ನಿಪ್ಪಾಣಿಯ ಶ್ರೀ ಶಿವಶಂಕರ ಜೊಲ್ಲೆ ಆಂಗ್ಲ ಮಾಧ್ಯಮ ಶಾಲೆ ನಿಪ್ಪಾಣಿ ನಾಂಗನೂರ ಶಾಲೆಯಲ್ಲಿ “ತಂದೆ-ತಾಯಿಯೇ ಪ್ರತ್ಯಕ್ಷ ದೇವರು” ಎಂಬ ನಂಬಿಕೆಗೆ ಸಾಕ್ಷಿಯಾಯಿತು.ಗುರು ಪೂರ್ಣಿಮಾ ಆಚರಣೆ ನಿಮಿತ್ಯ ವಿದ್ಯಾದೇವಿ ಸರಸ್ವತಿ ಮಾತೆ ಹಾಗೂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ,ಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಈ ಶುಭ ಸಂದರ್ಭದಲ್ಲಿ ನಮ್ಮ ಪ್ರೀತಿಯ ಸುಪುತ್ರ ಜ್ಯೋತಿಪ್ರಸಾದ ಮತ್ತು ಸೊಸೆ ಪ್ರಿಯಾ ಅವರು ಶಶಿಕಲಾ ಜೊಲ್ಲೆ ಯವರು …

Read More »

ಕಿತ್ತೂರು ರಾಣಿ ಚೆನ್ನಮ್ಮ ವಿವಿಗೆ 26 ನೇ ಸ್ಥಾನ

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ  ಗ್ರೀನ್ ಮೆಂಟರ್ಸ್ ಸಂಸ್ಥೆಯು ನಡೆಸಿದ ರಾಷ್ಟ್ರೀಯ ಹಸಿರು ವಿಶ್ವವಿದ್ಯಾಲಯ ಶ್ರೇಯಾಂಕ 2026 ರಲ್ಲಿ ಭಾಗವಹಿಸಿ, 100 ಅಂಕಗಳಲ್ಲಿ 90.7 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 26ನೇ ಸ್ಥಾನವನ್ನು ಪಡೆದು ಗಮನಾರ್ಹ ಸಾಧನೆ ಮಾಡಿದೆ. ಈ ಮಹತ್ವದ ಸಾಧನೆಯನ್ನು ಸಂಭ್ರಮಿಸುವ ಸಲುವಾಗಿ, ವಿಶ್ವವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ ಎನ್‌ಐಆರ್‌ಎಫ್/ಎನ್‌ಜಿಯುಆರ್ ಸಮಿತಿಯು ಕುವೆಂಪು ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು …

Read More »

ಮೀಟ‌ರ್ ಆಧಾರಿತ ಆಟೋ ಸಂಚಾರ ಕಡ್ಡಾಯ: ಡಿಸಿ ಮೊಹಮ್ಮದ್ ರೋಷನ್

ಬೆಳಗಾವಿ: ಬೆಳಗಾವಿ ನಗರದಲ್ಲಿ ಆಟೋ ರಿಕ್ಷಾಗಳು ಕಡ್ಡಾಯವಾಗಿ ಮೀಟ‌ರ್ ಆಧಾರದಲ್ಲಿ ಸಂಚರಿಸಬೇಕು. ನಗರ ವ್ಯಾಪ್ತಿಯಲ್ಲಿ ಪ್ರಾರಂಭಿಕವಾಗಿ 1.6 ಕಿಲೋ ಮೀಟ‌ರ್ಗೆಗೆ ₹37 ತದನಂತರ ಪ್ರತಿ ಕಿಲೋ ಮೀಟರ್‌ಗೆ 15 ರೂ. ದರವನ್ನು ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳಬೇಕು; ರವಿ ಕೋಟಾರಗಸ್ತಿ

ಬೆಳಗಾವಿ: ವಿದ್ಯಾರ್ಥಿಗಳು ಜಾನಪದ ಕಲೆ, ಸಾಹಿತ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಬಿಡುವಿನ ಸಮಯದಲ್ಲಿ ಮನರಂಜನೆಗಾಗಿ ಜಾನಪದ ಸಾಹಿತ್ಯ, ನೃತ್ಯ ನಾಟಕಗಳನ್ನು ಮಾಡುತ್ತಿದ್ದರು. ಇದು ಕೇವಲ ಮನರಂಜನೆಯಾಗಿರದೇ ನಮ್ಮ ನಾಡಿನ ನಡೆ ನುಡಿ ಆಚಾರ ವಿಚಾರ ಹಾಗೂ ಹಳ್ಳಿಯ ಸೊಗಡನ್ನು ಸಾರುವಂತಾಗಿರುತ್ತದೆ ಎಂದು ಹಿರಿಯ ಸಾಹಿತಿ ರವಿ ಕೋಟಾರಗಸ್ತಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಾಂತೇಶ ನಗರ ರಹವಾಸಿ ಸಂಘದ ಶಿಕ್ಷಣ ಮಹಾವಿದ್ಯಾಲಯ …

Read More »

ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ

ಕೋಲಾರ: ಜಿಲ್ಲೆಯ ಗಡಿ ಭಾಗದಲ್ಲಿ ಪೆಟ್ರೋಲ್‌ ಮಾಫಿಯಾ  ಎಗ್ಗಿಲ್ಲದೆ ನಡೆಯುತ್ತಿದೆ. ಮಾಲೂರು ತಾಲೂಕು ಆಲಂಬಾಡಿ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಗುಂದಿಯಿಂದ ಬರುವ ಪೆಟ್ರೋಲ್ ಟ್ಯಾಂಕರ್‌ಗಳಿಂದ ಪೆಟ್ರೋಲ್ ಕಳ್ಳತನ ನಡೆಯುತ್ತಿದೆ. ಪೆಟ್ರೋಲ್ ಟ್ಯಾಂಕರ್‌ಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪೆಟ್ರೋಲ್‌ ಹಾಗೂ ಡೀಸೆಲ್‌ನ್ನು ದುಷ್ಕರ್ಮಿಗಳ ಗ್ಯಾಂಗ್‌ ಕಳ್ಳತನ ಮಾಡುತ್ತಿದೆ. ಪ್ರತಿನಿತ್ಯ ಪೆಟ್ರೋಲ್‌ ಬಂಕ್‌ಗಳಿಗೆ ಬರುವ ಟ್ಯಾಂಕರ್‌ಗಳಿಂದ ಹೀಗೆ ವ್ಯವಸ್ಥಿತವಾಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಕಳ್ಳತನ ಮಾಡಿದ ಪೆಟ್ರೋಲ್ ಹಾಗೂ ಡೀಸೆಲ್ …

Read More »

2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿ

ಬೆಂಗಳೂರು: 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಸಿದ್ದರಾಮಯ್ಯನವರು  ತಿಳಿಸಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿದೆ ಎಂದಿದ್ದಾರೆ. ಸೂಚನೆಗೂ ಮೊದಲೇ ನೀರು ಬಿಟ್ಟಿದ್ದ ಕರ್ನಾಟಕ: ಕಾವೇರಿ ನದಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸಿಡಬ್ಲ್ಯುಆರ್‍ಸಿಯಲ್ಲಿ ವಾದ ಮಾಡುವ ನಮ್ಮ ವಕೀಲರು …

Read More »

ನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿ

ಬೆಂಗಳೂರು: ನಮಗೇ ಕುಡಿಯೋಕೆ ನೀರಿಲ್ಲ, ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಎಂದು ಡಿಸಿಎಂ ಪರಮೇಶ್ವರ್ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಕಾವೇರಿ ನೀರು  ತಮಿಳುನಾಡಿಗೆ ಹರಿಸುವ ವಿಚಾರವಾಗಿ ಮಾತನಾಡಿದ ಅವರು, ನಮಗೇ ಕುಡಿಯಲು ನೀರಿಲ್ಲ. ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಇದರ ಬಗ್ಗೆ ಚರ್ಚೆಗೆ ಸಿಎಂ ಸರ್ವಪಕ್ಷದ ಸಭೆ ಕರೆಯುತ್ತಾರೆ. ಸೋಮವಾರ (ಆ.3) ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಬರ್ತಾರೆ, ಅವರ …

Read More »

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

ಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ  ನೀಡಿರುವ ಆದೇಶದ ವಿರುದ್ಧ ಶಾಸಕ ದರ್ಶನ್ ಪುಟ್ಟಣ್ಣಯ್ಯ  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಈ ಕುರಿತು ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ನೀರು ಬಿಟ್ಟರೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾವೇರಿ ಜಲಾನಯನ …

Read More »