Breaking News

Uncategorized

10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ

ಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ  ಹಸಾಳ ಗ್ರಾಮದಲ್ಲಿ ನಡೆದಿದೆ. ಸಹನಾ (24) ಪತಿಯಿಂದ ಹತ್ಯೆಯಾದ ಮಹಿಳೆ. ಮಂಜುನಾಥ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ 5 ವರ್ಷ ಕಳೆದಿದ್ದು, ಇಬ್ಬರು ಗಂಡುಮಕ್ಕಳಿದ್ದಾರೆ. ಈತ ಮದುವೆಯಾದಾಗಿನಿಂದ ಪದೇ ಪದೇ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಈ ಹಿಂದೆ ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ ಎಂದು 2 ಲಕ್ಷ ರೂ. ಪಡೆದಿದ್ದನಂತೆ. …

Read More »

ನೀಟ್ ಮರುಪರೀಕ್ಷೆಗೂ ಮುನ್ನ ಡೆತ್‌ನೋಟ್‌ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

ಡೆಹ್ರಾಡೂನ್: ನೀಟ್  ಮರುಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 23 ವರ್ಷದ ಯುವತಿ  ಡೆತ್‌ನೋಟ್‌  ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ. ಮೃತ ಯುವತಿಯನ್ನು ರಿಯಾ ಕುಮಾರಿ ಎಂದು ಗುರುತಿಸಲಾಗಿದೆ. ರಿಯಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಪಿಯುಸಿಯಲ್ಲಿ ಶೇ.96.7 ಅಂಕ ಗಳಿಸಿ ಕಾಲೇಜ್‌ ಟಾಪರ್‌ ಕೂಡ ಆಗಿದ್ದರು. ನೀಟ್‌ ಮರುಪರೀಕ್ಷೆ ಕುರಿತು ಒತ್ತಡದಲ್ಲಿದ್ದಳು ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.  ಘಟನೆ ನಡೆದ ದಿನ ತಾಯಿ ಊಟಕ್ಕೆ ಕರೆಯಲು ಹೋದಾಗ ಬಾಗಿಲು …

Read More »

ಮೇಕೆದಾಟು ಹಾರ್ಟ್‌ ಆಫ್‌ ಡಿ.ಕೆ.ಶಿವಕುಮಾರ್‌ ಅಲ್ಲ, ಹಾರ್ಟ್‌ ಆಫ್‌ ದಕ್ಷಿಣ ಭಾರತ: ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆ ( ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್  ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, ʼಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು …

Read More »

ತೋಟಕ್ಕೆ ವಾಕಿಂಗ್ ತೆರಳಿದ್ದ ವೃದ್ಧೆಯ ಭೀಕರ ಕೊಲೆ

ತುಮಕೂರು: ತೋಟಕ್ಕೆ ವಾಕಿಂಗ್‌ಗೆಂದು  ತೆರಳಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಮಂಗಳವಾರ ಸಂಜೆ ವಾಕಿಂಗ್‌ಗೆಂದು ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಈ ಹಿನ್ನೆಲೆ ಅನುಮಾನಗೊಂಡ ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು ರತ್ನಮ್ಮನಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಮನೆಯಿಂದ ಒಂದು ಕಿ.ಮಿ ದೂರದ ತೋಟದ ಮನೆ ಬಳಿ ರತ್ನಮ್ಮ …

Read More »

ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ  ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ. ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ. 2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. …

Read More »

ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ – ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ದೇವರಾಜನ್ ತಂಗುದೊರೈ  ವಿರುದ್ಧ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಮುನ್ನ ಎಬಿವಿಪಿ  ಕಾರ್ಯಕರ್ತರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಆರೋಪಗಳ ಪ್ರಕಾರ, ಪ್ರೊ. ತಂಗುದೊರೈ ತಮ್ಮ ಬಳಿ ಪಿಹೆಚ್‌ಡಿ ಮಾಡಲು ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ವೈಯಕ್ತಿಕ …

Read More »

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

ಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  ತಿರುಗೇಟು ನೀಡಿದ್ದಾರೆ. ವಿಧಾನ ಪರಿಷತ್  ಚುನಾವಣೆಗಾಗಿ ಜೆಡಿಎಸ್‌ನಿಂದ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಸೆಳೆಯೋ ಪ್ರಯತ್ನ ನಡೆಯುತ್ತಿದೆ ಎಂಬ ಸಿಎಂ ಡಿಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ. ನಮ್ಮ ಪಕ್ಷದಲ್ಲಿ, ನಮ್ಮ ಕೈಯಲ್ಲಿ ಮಾಡೋಕೆ ಏನಿದೆ? ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ …

Read More »

ರಾಜ್ಯದಲ್ಲಿ SIRಗೆ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ – ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯದಲ್ಲಿ SIRಗೆ ರಾಜ್ಯ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ಎಸ್ಐಆರ್  ವಿಚಾರದಲ್ಲಿ ದ್ವಂದ್ವ ನಿಲುವು ತೋರುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರವೇ ಎತ್ತಿ ಕಟ್ಟುತ್ತಿದೆ. BLOಗಳು ಪ್ರತಿಭಟನೆ ಮಾಡ್ತಾರಂತೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡ್ತಿದೆ ಎಂದಿದ್ದಾರೆ. ವಾಸ್ತವ ಸತ್ಯವನ್ನು ಸಿಎಂ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳ್ತೀನಿ. ನಿಮ್ಮ ಕಾಂಗ್ರೆಸ್ ಮಹಾನ್ ನಾಯಕ …

Read More »

ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ರಾಮನಗರ: ಬಿಡದಿ ಟೌನ್‌ಶಿಪ್  ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಬಿಜೆಪಿ ನಿಯೋಗವು  ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ನಿಯೋಗವು ಮೊದಲು ಭೈರಮಂಗಲ ಗ್ರಾಮದ ಹಾಲಿನ ಡೈರಿಗೆ …

Read More »

ರಾಜ್ಯ ಸರ್ಕಾರದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ವಿಶೇಷ ಲೋಕ ಅದಾಲತ್ ಉತ್ತಮ ವೇದಿಕೆ – ಶಾಲಿನಿ ರಜನೀಶ್

ಬೆಂಗಳೂರು: ಭಾರತ ಸರ್ವೋಚ್ಛ ನ್ಯಾಯಾಲಯ  ಆ.21ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿರುವ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್‌ನಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಪ್ರತಿಯೊಂದು ಇಲಾಖೆ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮುಖಾ-ಮುಖಿಯಾಗಿ ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿದ್ದಾರೆ. ಭಾರತ ಸರ್ವೋಚ್ಛ ನ್ಯಾಯಾಲಯದ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್  ಕುರಿತಂತೆ ಇಂದು (ಜೂ.17) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ …

Read More »