Breaking News

Uncategorized

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ; ಪ್ರಧಾನಿ ಮೋದಿಗೆ ಇದುವೇ ವಿಶೇಷ ಉಡುಗೊರೆ

ದಾವಣಗೆರೆ, :ಅಯೋಧ್ಯೆ ಶ್ರೀರಾಮ ಮಂದಿರ(Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದೆ. ಈ ನಡುವೆ ಕರ್ನಾಟಕದಲ್ಲಿ ರಾಮ ಭಕ್ತರು ಅದರಲ್ಲೂ ಕಲಾವಿದರು ರಾಮ ಮಂದಿರದ ಸ್ಥಬ್ದಚಿತ್ರಗಳನ್ನು ರಚಿಸುತ್ತಿದ್ದಾರೆ. ಇತ್ತೀಚೆಗೆ ಪೆನ್ಸಿಲ್ ಲೆಡ್​ನಲ್ಲಿ ರಾಮನ ಕೆತ್ತನೆ, ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಜೈ ಶ್ರೀರಾಮ್ ಹೆಸರುಗಳಲ್ಲೇ ರಾಮನ ಚಿತ್ರ ಬಿಡಿಸಿರುವುದು ಸೇರಿದಂತೆ ಅನೇಕ ರೀತಿಯ ಚಿತ್ರಗಳನ್ನು ಬಿಡಿಸಲಾಗಿತ್ತು. ಇದೀಗ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ (Davanagere) ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ …

Read More »

ವಿವಾದ ಸೃಷ್ಟಿಸಿದ್ದ ಹುಬ್ಬಳ್ಳಿ MTS ಕಾಲೋನಿಯ 13 ಎಕರೆ ಜಮೀನು ಲೀಸ್ ಟೆಂಡರ್ ರದ್ದು: RLDA ಬೋರ್ಡ್​ ಆದೇಶ

ಹುಬ್ಬಳ್ಳಿ, ಜ.21: ಸಾಕಷ್ಟು ವಿವಾದ ಸೃಷ್ಟಿಸಿದ್ದಹುಬ್ಬಳ್ಳಿಯ (Hubballi)ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ (RLDA) ಬೋರ್ಡ್ ರದ್ದುಗೊಳಿಸಿ ಆದೇಶಿಸಿದೆ. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ MTS ಕಾಲೀನಿಯ 13 ಎಕರೇ ಜಮೀನನ್ನು 99 ವರ್ಷಗಳಿಗೆ ಲೀಸ್​ಗೆ ನೀಡಲು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ರೈಲ್ವೇ ಭೂಮಿ ಅಭಿವೃದ್ಧಿ ಪ್ರಾಧಿಕಾರವು 13 ಎಕರೇ ಜಮೀನು ಲೀಸ್​ಗೆ ಇದೆ ಎಂದು ಬೋರ್ಡ್ ಹಾಕಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ …

Read More »

ಬಳ್ಳಾರಿ: ಗುತ್ತಿಗನೂರು ಗ್ರಾಮದಲ್ಲಿ ಹೊಟೇಲ್​ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಣೆ, ಅಸ್ಪೃಶ್ಯತೆ ವಿಡಿಯೋ ವೈರಲ್

ಬಳ್ಳಾರಿ, : ಧಾರವಾಡದಲ್ಲಿ ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಬಳ್ಳಾರಿ (Ballari)ಅಸ್ಪೃಶ್ಯತೆ (Untouchability)ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ. ಊಟಕ್ಕೆಂದು ಹೊಟೇಲ್​ಗೆ ಬಂದ ದಲಿತ (Dalit) ಯುವಕರಿಗೆ “ಹೊಟೇಲ್ ಮುಚ್ಚುತ್ತೇನೆ, ಆದರೆ, ನಿಮಗೆ ಊಟ ಕೊಡಲ್ಲ” ಎಂದು ಮಹಿಳೆಯೊಬ್ಬಳು ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೊಟೇಲ್‌ನಲ್ಲಿ ಆಹಾರ ನೀಡಲು ಮಹಿಳೆ ನಿರಾಕರಣೆ ಮಾಡಿದ್ದಾರೆ. ಅಸ್ಪೃಶ್ಯತೆ ವಿರುದ್ಧ ಗರಂ ಆದ …

Read More »

ರೈಲಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು… ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕೇರಳದವರು ಎಂದು ಶಂಕಿಸಲಾಗಿದೆ. ಕೋಚ್ ಅನ್ನು ಪ್ರತ್ಯೇಕಿಸಲಾಗಿದ್ದು, ರೈಲು ಮೂರು ಗಂಟೆ …

Read More »

ಸದಾಶಿವ ಆಯೋಗ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಎಸ್‌ಸಿ ಸಮುದಾಯದ(SC community) ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ(Internal reservation) ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ವರದಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ವರದಿ ಜಾರಿಗೆ ಮುಂದಾಗಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ. …

Read More »

ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ; ಗೋಕಾಕದಲ್ಲಿ ಲಾರಿ ಚಾಲಕರ ಮುಷ್ಕರ…!

ಗೋಕಾಕ : 10 ವರ್ಷ ಜೈಲು ಶಿಕ್ಷೆಯೊಂದಿಗೆ ₹7 ಲಕ್ಷ ದಂಡ ವಿಧಿಸುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಕರ್ನಾಟಕ ಟ್ರಕ್ ಚಾಲಕರು ಇಂದು ಮುಷ್ಕರ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಹತ್ತಿರ ಲಕ್ಷ್ಮೀ ಲಾರಿ ಮಾಲೀಕರ ಹಾಗೂ ಚಾಲಕರ ಅಸೋಸಿಯೇಷನ್ ಗೋಕಾಕ ವತಿಯಿಂದ ಮುಷ್ಕರ ಆರಂಭವಾಗಿದೆ. ಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಮಧ್ಯರಾತ್ರಿಯಿಂದ ಕರೆ ನೀಡಲಾಗಿರುವ …

Read More »

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ: ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು-ಪ್ರಿಯಾಂಕ್​ ಖರ್ಗೆ

ಬೆಂಗಳೂರು, ಜನವರಿ 17: ಹೈದರಾಬಾದ್​ನಲ್ಲಿಮೈಸೂರು ಸ್ಯಾಂಡಲ್(Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ …

Read More »

ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ …

Read More »

ಶಿಷ್ಯನ ಸಿನಿಮಾಕ್ಕೆ ಶಬ್ಬಾಷ್‌ ಎಂದ ಸಾಯಿ ಪ್ರಕಾಶ್‌!

ಬೆಂಗಳೂರು: ಸಂಕ್ರಾಂತಿಯ (Makara sankranti) ಶುಭ ಸಂದರ್ಭದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ರುದ್ರಶಿವ ನಿರ್ದೇಶನದ (Director Rudrashiva) ಶಬ್ಬಾಷ್‌ ಚಿತ್ರದ (Shabaah Movie) ಮುಹೂರ್ತ ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Director OM Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಬ್ಬಾಷ್‌ ಚಿತ್ರದ …

Read More »

ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್​​ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ

ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್‌ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ …

Read More »