ದಾವಣಗೆರೆ ಬೆನ್ನಲ್ಲೇ ಈಗ ಬಾಗಲಕೋಟೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪದಡಿ ಇಬ್ಬರು ಜನಪ್ರತಿನಿಧಿಗಳು ಸೇರಿದಂತೆ ಮೂವರು ಹಿರಿಯ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲು ಜಿಲ್ಲಾ ಘಟಕ ಮುಂದಾಗಿದೆ. ಬಾಗಲಕೋಟೆ ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡದೆ, ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯತಿಯ ಇಬ್ಬರು ಸದಸ್ಯರಾದ ರಮೇಶ್ …
Read More »ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರ್
ಹರಗಾಪುರಗುಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರಗುಡದ ಗ್ರಾಮ. ರಸ್ತೆ ಮಧ್ಯೆಯಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್. ಸೌರಭ ಕೊರಾಡೆ ಸಂಕೇಶ್ವರ ಗ್ರಾಮದ ನಿವಾಸಿಗೆ ಸೇರಿದ್ದ ಕಾರ್. ಘಟನೆಯಲ್ಲಿ ಕಾರ ಚಲಾಯಿಸುತ್ತಿದ್ಧ ಸೌರಭಗೆ ಚಿಕ್ಕ ಪುಟ್ಟ ಗಾಯ. ಗಾಯಾಳುಗಳನ್ನು ಚಿಕ್ಕಿತ್ಸಗಾಗಿ ಮಹಾರಾಷ್ಟ್ರದ ಗಡಹಿಂಗ್ಲಜ್. ಆಸ್ಪತ್ರೆಗೆ ರವಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡು, ಬೆಂಕಿ ನಂದಿಸಲು ಹರಸಾಹಸ. ಸಂಕೇಶ್ವರ ಪೊಲೀಸ್ …
Read More »ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ
ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಪ.ಪೂ.ಶ್ರೀ ಆನಂದ ದೇವರು, ಓಲೆಮಠ ಜಮಖಂಡಿ.ಪ.ಪೂ.ಶ್ರೀ ವೀರಬಸವ ದೇವರು,ಪ.ಪೂ.ಶ್ರೀ ಗುರುದೇವ ದೇವರು,ಶ್ರೀ ಅಕ್ಷಯ ಉಪಾಧ್ಯೆ,ಶ್ರೀ ಸದಾಶಿವ ಮಠಪತಿ,ಶ್ರೀ ಶಿವಾನಂದ ಮಲೆವಾಡಿ, ಅಧ್ಯಕ್ಷರು SDMC ಝುಂಜರವಾಡ,ಶ್ರೀ ಅಣ್ಣಾಸಾಬ ಸಂಕೋನಟ್ಟಿ, ಉಪಾಧ್ಯಕ್ಷರು SDMC ಝುಂಜರವಾಡ,ಶ್ರೀ …
Read More »ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ
ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಕಿರಿಕ್ ಉಂಟಾಗಿ ಗೆಳೆಯನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಬಳಿ ನಡೆದಿದೆ. ಮೋಹನ್(25) ಕೊಲೆಯಾದ ಯುವಕ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದವನಾದ ಮೋಹನ್ ಗುರುವಾರ ಸಂಜೆ ಸ್ನೇಹಿತನ ಜೊತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ. ಸ್ನೇಹಿತ ಮನೋಜ್ ಮತ್ತು ಮೋಹನ್ ಕಂಠಪೂರ್ತಿ ಕುಡಿದಿದ್ದರು. ಕುಡಿದ ನಶೆಯಲ್ಲಿ ಮೋಹನ್ ಮತ್ತು ಮನೋಜ್ ನಡುವೆ ಗಲಾಟೆ ನಡೆದಿದೆ. ಈ ವೇಳೆ …
Read More »ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು
ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಲ್ಲೆ ಬಿಸಿಲಿನ ಅಬ್ಬರ ಬಲು ಜೋರಾಗಿದೆ. ಗರಿಷ್ಠ ತಾಪಮಾನ ಈಗಲೇ ದಾಖಲಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ರೈತರ ಬಹುತೇಕ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿದ್ದು, ಬಿಸಿಲಿನ ಅಬ್ಬರಕ್ಕೆ ಅನ್ನದಾತರು ಹೈರಾಣಾಗಿದ್ದಾರೆ. ರಾಯಚೂರಿನ ಎಪಿಎಂಸಿಯಲ್ಲಿ ಸುಡುಬಿಸಿಲಿನಲ್ಲೇ ತಮ್ಮ ಉತ್ಪನ್ನಗಳ ಮಾರಾಟ ಮಾಡುತ್ತಿದ್ದಾರೆ. ರಾಯಚೂರು ಅಂದ್ರೆ ಬೇರೆ ಹೇಳಬೇಕಿಲ್ಲಾ ಇಲ್ಲಿ ಇರೋದೇ ಎರಡು ಕಾಲ. ಒಂದು ಬೇಸಿಗೆ ಕಾಲ, ಇನ್ನೊಂದು ಬಿರು ಬೇಸಿಗೆಕಾಲ. ಇಂತಹದ್ರಲ್ಲಿ ಈ …
Read More »ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್
ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯವಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮಹಾ ನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತ. ಹೀಗಾಗಿ ಚುನಾವಣೆ ನಡೆಸುತ್ತಿಲ್ಲ. ಸಿಎಂ ಹಾಗೂ ಸಿಎಂ ಪುತ್ರ ಮಾತ್ರ ಅಧಿಕಾರದಲ್ಲಿ ಇದ್ದರೆ ಸಾಲದು. ಸ್ಥಳೀಯ ಮುಖಂಡರಿಗೂ ಅಧಿಕಾರ ಬೇಕು ಎಂದು ಕಿಡಿಕಾರಿದರು. ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ. ಅವರ …
Read More »ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್
ಬೆಂಗಳೂರು: ಸ್ವಂತ ಅಕ್ಕ-ಭಾವನಿಂದಲೇ ತಂಗಿ-ಮೈದುನನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ ಆರೋಪ ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ನಡೆದಿದೆ. ಅಕ್ಕ ಪ್ರಫುಲ್ಲಾ ಎಂಬಾಕೆಯಿಂದ ತಂಗಿ ಪೃಥ್ವಿ ಎಂಬಾಕೆ 9.5 ಲಕ್ಷ ರೂ. ಸಾಲ ಪಡೆದಿದ್ದಳು. 5 ಲಕ್ಷ ಸಾಲ ಹಿಂತಿರುಗಿಸಿದ್ದು, ಇನ್ನು 4.5 ಲಕ್ಷ ರೂ. ಬಾಕಿ ನೀಡಬೇಕಿತ್ತು. ಈ ಸಾಲದ ಹಣಕ್ಕಾಗಿ ಅಕ್ಕನಿಂದ ತನ್ನ ತಂಗಿಯನ್ನ ಕಿಡ್ನ್ಯಾಪ್ ಜೊತೆಗೆ ಹಲ್ಲೆ ಆರೋಪ ಕೇಳಿಬಂದಿದೆ. ಕಳೆದ ಎರಡು ದಿನದ ಹಿಂದೆ ಅಕ್ಕ …
Read More »ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ
ಧಾರವಾಡ: ನಾನು ಹತ್ತು ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡುವೆ ಎಂದು ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಈ ಹಿನ್ನೆಲೆ ಇದೇ ಮೊದಲ ಬಾರಿಗೆ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಪತ್ನಿ ಮಲ್ಲಮ್ಮ, ನನಗೆ ಇದು ಸಮಾಧಾನ ತಂದಿಲ್ಲ. ನನ್ನ …
Read More »38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್ಸಿಬಿ
ಬೆಂಗಳೂರು: ವಿಶೇಷ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿದ್ದ ಭಾರೀ ಪ್ರಮಾಣದ ಡ್ರಗ್ಸ್ ಅನ್ನು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (NCB) ನಾಶಪಡಿಸಿದೆ. ಮಾದಕ ವಸ್ತುಗಳ ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆ ವೇಳೆ ಎನ್ಸಿಬಿ 38 ಕೋಟಿ ಮೌಲ್ಯದ ಮಾದಕ ವಸ್ತುವನ್ನ ಜಪ್ತಿ ಮಾಡಿತ್ತು. ಇಂದು ಹೊಸಕೋಟೆ ಬಳಿಯ ಸೆಂಚುರಿ ರಿಫೈನರಿ ಘಟಕದಲ್ಲಿ 128 ಕೆ.ಜಿ. ಡ್ರಗ್ಸ್ ನಾಶ ಮಾಡಿದೆ. ಹೈಡ್ರೋಗಾಂಜಾ, ಕೊಕೇನ್, ಮೆಥಾಂಪೈಟಮನ್ ಸೇರಿದಂತೆ ಒಟ್ಟು ಸುಮಾರು 38 ಕೋಟಿ ಮೌಲ್ಯದ ಹಲವು …
Read More »ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್ಗೆ 56 ಪೈಸೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದೆ. 2024-25 ಆರ್ಥಿಕ ವರ್ಷದಲ್ಲಿ 34,084 ಕೋಟಿ ಕೆಇಆರ್ಸಿ ಆದಾಯ ನಿರೀಕ್ಷೆ ಮಾಡಿತ್ತು. ಆದ್ರೆ 32,019 ಕೋಟಿಯಷ್ಟೇ ಆದಾಯ ಬಂದಿದೆ. ಹೀಗಾಗಿ 2,068 ಕೋಟಿ ಹಣದ ಕೊರತೆಯನ್ನ ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ. …
Read More »
Laxmi News 24×7