Breaking News

Uncategorized

ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಕೇಸ್: ಹನೂರಿನ ರಾಮಪುರದಲ್ಲಿ ಕಾರು ಪತ್ತೆ

ಚಾಮರಾಜನಗರ: ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸಂಬಂಧಿಯ ಕಾರು ಹನೂರು ತಾಲೂಕಿನ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ದೊರೆತಿದೆ. ಯೋಗೇಶ್ವರ್ ಅವರ ಭಾವ ಚಕ್ಕರೆ ಗ್ರಾಮದ ಮಹದೇವಯ್ಯ ಮೂರು ದಿನಗಳ ಹಿಂದೆ ಬಿಳಿ ಬಣ್ಣದ ಬ್ರಿಜಾ ಕಾರುಸಮೇತ (KA-42 N0012) ಕಾಣೆಯಾಗಿದ್ದರು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ …

Read More »

2024ರ ಲೋಕಸಭೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ಚುನಾವಣಾ ಫಲಿತಾಂಶ ಮತ್ತು ಇದಕ್ಕಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವು. ಸಬ್ಕಾ ಸಾಥ್​ ಸಬ್ಕಾ ವಿಕಾಸ್​ ಎಂಬ ಭಾವನೆ ಇಂದು ಗೆದ್ದಿದೆ. ಈ ಗೆಲುವು ಸ್ವಾವಲಂಬಿ …

Read More »

ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿ

ಮೂಡಲಗಿ: ‘ಮನಸ್ಸಿದ್ದರೆ ಏನೆಲ್ಲ ಮಾಡಬಹುದು, ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಯುವ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿಯಾಗಿದ್ದಾರೆ. 2008ರಲ್ಲಿ ಬಿಎ ಪದವಿ ಮುಗಿಸಿ ನೌಕರಿ ದೊರೆಯದಿದ್ದಾಗ ಒಂದೇ ಆಕಳು ಸಾಕಿ ಹೈನುಗಾರಿಕೆ ಆರಂಭಿಸಿ ಹೊನ್ನಪ್ಪ ಅವರ ಹೊಲದಲ್ಲಿ ಇಂದು 20ಕ್ಕೂ ಅಧಿಕ ಎಚ್‌ಎಫ್‌ ತಳಿಯ ಹಸುಗಳು ಇವೆ. ಪ್ರತಿ ದಿನ ಬೆಳಿಗ್ಗೆ 100 ಲೀಟರ್‌, ಸಂಜೆ 100 ಲೀಟರ್‌ ಹೀಗೆ ನಿತ್ಯ 200 …

Read More »

ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು?

ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು? ಗೋಕಾಕ: ನಗರದ ಕಡಬಗಟ್ಟಿ ರಸ್ತೆಯಲ್ಲಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ರಸ್ತೆಯಲ್ಲಿ ಭಾಗಶಃ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ.   ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ಇದರಿಂದ ವಾಯುವಿಹಾರಕ್ಕೆ ಹೋಗುವ ಜನರಿಗೆ ಸಾಕಷ್ಟು …

Read More »

ರಿಸಲ್ಟ್​ ಬಳಿಕ ತೆಲಂಗಾಣ ಕಾಂಗ್ರೆಸ್​ ಶಾಸಕರು ಬೆಂಗ್ಳೂರಿಗೆ ಸ್ಥಳಾಂತರ ಸಾಧ್ಯತೆ! ಡಿಸಿಎಂ ಡಿಕೆಶಿ

ಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್​ಎಸ್​ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್​ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್​ ಹೈಕಮಾಂಡ್​ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.   ತೆಲಂಗಾಣ ಕಾಂಗ್ರೆಸ್​ ಘಟಕದ ಮುಖ್ಯಸ್ಥ ರೇವಂತ್​ ರೆಡ್ಡಿ …

Read More »

ಸಿಲಿಂಡರ್ ಬೆಲೆಯಲ್ಲಿ 21 ರೂ.ಹೆಚ್ಚಳ

ನವದೆಹಲಿ : ಪಂಚ ರಾಜ್ಯಗಳ ಚುನಾವಣೆ ಮುಗಿದ ಕೂಡಲೇ ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳು ದುಬಾರಿಯಾಗಿವೆ. ಡಿಸೆಂಬರ್ 1, 2023 ರಿಂದ 19 ಕೆಜಿ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 21 ರೂ. ಹೆಚ್ಚಳ ಮಾಡಲಾಗಿದೆ. ಇಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯ ನ್ನು 21 ರೂ.ಗೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ, 19 ಕೆಜಿ ಎಲ್ಪಿಜಿ ಸಿಲಿಂಡರ್ 1775.50 ರೂ.ಗಳ ಬದಲು 1796.50 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ, ಇದು 1885.50 …

Read More »

ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಲಿವೆ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆಗಳು!

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಶುರುವಾಗಿದ್ದು, ಸುವರ್ಣ ವಿಧಾನಸೌಧದ ಮುಂದೆ ತಲೆ ಎತ್ತಿರುವ ಮೂರು ಮಹನೀಯರ ಪ್ರತಿಮೆಗಳ ಸೌಂದರ್ಯೀಕರಣ ಕಾಮಗಾರಿ ಭರದಿಂದ ಸಾಗಿದೆ.   ಹೌದು ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕ‌ರ್ ಅವರ ಪ್ರತಿಮೆಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಿಲ್ಲಿಸಿ ಲೋಕಾರ್ಪಣೆಗೊಳಿಸಿತ್ತು. ಪ್ರತಿಮೆಗಳ ಸುತ್ತಲೂ ಯಾವುದೇ ರೀತಿ ರಕ್ಷಣಾ ಗೋಡೆ, ಹುಲ್ಲುಹಾಸು, ಬೆಳಕಿನ ವ್ಯವಸ್ಥೆ …

Read More »

ಯಾವುದನ್ನೂ ಉಚಿತವಾಗಿ ನೀಡಬಾರದು: ನಾರಾಯಣ ಮೂರ್ತಿ

ಬೆಂಗಳೂರು: ”ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳನ್ನು ಪಡೆಯುವ ಜನರು ಸಮಾಜದ ಒಳಿತಿಗಾಗಿ ಮತ್ತೆ ಕೊಡುಗೆ ನೀಡಬೇಕು” ಎಂದು ಇನ್ಫೋಸಿಸ್ ಸಹಸಂಸ್ಥಾಪಕರಾದ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.   ಬೆಂಗಳೂರು ಟೆಕ್ ಸಮ್ಮಿಟ್ 2023ರ 26ನೇ ಆವೃತ್ತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕೆ ತಲುಪಿದರೆ, ನಾವು ನಿಮಗೆ ಉಚಿತ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ನೀವು ಹೇಳಬೇಕು. ಇದರಿಂದ …

Read More »

ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್​ಗಳನ್ನು ಅಳವಡಿಸಿದ್ದರಿಂದ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು

ಬೆಳಗಾವಿ: ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್​ಗಳನ್ನು ಅಳವಡಿಸಿದ್ದರಿಂದ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು ಬ್ಯಾನರ್​ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಣಿ ಚನ್ನಮ್ಮ ವೃತ್ತದ ಬಳಿಯಿದ್ದ ಬ್ಯಾನರ್​ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಾರಾಯಣಗೌಡ ಬಣದ ಕಾರ್ಯಕರ್ತರು ಮೊದಲು ಧರಣಿ ನಡೆಸಿದರು. ಬಳಿಕ ಒಂದೊಂದೇ ಬ್ಯಾನರ್​​ಗಳನ್ನು ಹರಿದು ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದರು. ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋದ ಕೆಲ ಕಾರ್ಯಕರ್ತರು, ಬ್ಯಾನರ್​ಗಳನ್ನು ಹರಿದು ಹಾಕಿದರು. ಕಪ್ಪು ಮಸಿ ಬಳಿಯಲು ತಂದಿದ್ದ ಬಾಟಲಿಗಳನ್ನು …

Read More »

ಎಲ್​ಐಸಿಯಿಂದ ಹೊಸ ಪಾಲಿಸಿ: 5 ವರ್ಷ ಕಟ್ಟಿದ್ರೆ ಸಾಕು, ಜೀವನ ಪೂರ್ತಿ ಆದಾಯ!

ಹೈದರಾಬಾದ್​: ನೀವು ಕಷ್ಟಪಟ್ಟು ದುಡಿದ ಹಣಕ್ಕೆ ಭದ್ರತೆ ಮತ್ತು ಪ್ರತಿಫಲವನ್ನು ಬಯಸುವುದು ಸಹಜ. ಆದರೆ ಕುಟುಂಬದ ಹಿರಿಯ ವ್ಯಕ್ತಿಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ಅಥವಾ ಆತನಿಂದ ಕುಟುಂಬ ಪೋಷಿಸಲು ಸಾಧ್ಯವಾಗದೇ ಇದ್ದರೆ ಅವರ ಜೀವನ ತುಂಬಾ ಕಷ್ಟಕರವಾಗುತ್ತದೆ. ಅದಕ್ಕಾಗಿ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ವಿಮೆ ಮಾಡಿಸುವುದು ಅತಿ ಅಗತ್ಯ. ಸರ್ಕಾರಿ ಸ್ವಾಮ್ಯದ ಜೀವ ವಿಮಾ ಕಂಪನಿ LIC ಈಗಾಗಲೇ ಅನೇಕ ಪಾಲಿಸಿಗಳನ್ನು ಈ ನಿಟ್ಟಿನಲ್ಲಿ ಹೊರತಂದಿದೆ. ಆದರೂ ಹೂಡಿಕೆದಾರರು …

Read More »