Breaking News

Uncategorized

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣಕಾರ್ಯಕ್ರಮಕ್ಕೆ ನಾನು ಹೋಗಲ್ಲ.:C.T.RAVI

ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್​ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …

Read More »

ಟೈಗರ್​ 3’ಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​: ಮೊದಲ ದಿನವೇ 44 ಕೋಟಿ ಕಲೆಕ್ಷನ್​​!

ಸಲ್ಮಾನ್​ ಖಾನ್​ ಮತ್ತು ಕತ್ರಿನಾ ಕೈಫ್​ ನಟನೆಯ ‘ಟೈಗರ್​ 3’ ಚಿತ್ರ ಬಿಡುಗಡೆಯಾದ ಮೊದಲ ದಿನ 44.5 ಕೋಟಿ ರೂಪಾಯಿ ಗಳಿಸಿದೆ. ದೀಪಾವಳಿ ಹಬ್ಬದ ಉಡುಗೊರೆಯಾಗಿ ನವೆಂಬರ್​ 12ರಂದು ಬಾಲಿವುಡ್​ ನಟ​ ಸಲ್ಮಾನ್​ ಖಾನ್​ ಮತ್ತು ನಟಿ ಕತ್ರಿನಾ ಕೈಫ್​ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟೈಗರ್ 3’ ಬಿಡುಗಡೆ ಆಗಿದೆ. ಮನೀಶ್​ ಶರ್ಮಾ ನಿರ್ದೇಶನದ ಸ್ಪೈ ಥ್ರಿಲ್ಲರ್​ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್​ ಸಿಕ್ಕಿದ್ದು, ಮೊದಲನೇ ದಿನವೇ ಬಾಕ್ಸ್​ ಆಫೀಸ್​ ಕೊಳ್ಳೆ …

Read More »

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು. ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ …

Read More »

ಲಿಂಗಾಯತ ಮತ ಬ್ಯಾಂಕ್​ಗೋಸ್ಕರ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಲಿಂಗಾಯತ ಸಮುದಾಯದ ಮತ ಬ್ಯಾಂಕ್ ನೋಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ, ಅವರ ಆಯ್ಕೆ ಮಾಡಿರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಕೂಡ ಒಂದು ಕಾರಣ. ಇನ್ನು ಬಿಜೆಪಿಯಲ್ಲೂ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ …

Read More »

ದೀಪಾವಳಿಯಲ್ಲಿ ಬದುಕು ಕತ್ತಲಾಗದಿರಲಿ: ಪಟಾಕಿ ಹೊಡೆಯುವಾಗ ಮುಂಜಾಗ್ರತೆ ವಹಿಸಲು ನೇತ್ರತಜ್ಞರ ಸಲಹೆ

ದಾವಣಗೆರೆ: ದೀಪಾವಳಿ ಬೆಳಕಿನ‌ ಹಬ್ಬ. ಆದರೆ, ಈ ಬೆಳಕಿನ ಹಬ್ಬದಲ್ಲಿ ಸಾಕಷ್ಟು ಜನ ಪಟಾಕಿ ಹೊಡೆಯುವ ಸಾಹಸಕ್ಕೆ ಕೈ ಹಾಕಿ ತಮ್ಮ ಬದುಕು ಕತ್ತಲಾಗಿಸಿಕೊಂಡಿದ್ದಾರೆ. ಪಟಾಕಿ ಸಿಡಿದರೆ ಕಣ್ಣಿಗಾಗುವ ಹಾನಿ ಹಾಗೂ ಪಟಾಕಿ ಹೊಡೆಯುವ ಮುನ್ನ ಮುಖ್ಯವಾಗಿ ಮಕ್ಕಳು ಯುವಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂದು ನೇತ್ರತಜ್ಞ ರವೀಂದ್ರನಾಥ್ ಮಾಹಿತಿ ಕೊಟ್ಟಿದ್ದಾರೆ. ದೀಪಗಳ ಹಬ್ಬ ದೀಪಾವಳಿ. ಬೆಳಕಿನ ಹಬ್ಬದಲ್ಲಿ ಪಟಾಕಿ ಹೊಡೆದು ಸಂಭ್ರಮಿಸುವುದು ಯಾವ ಹಬ್ಬಗಳಲ್ಲೂ …

Read More »

ಇದು ಕುಟುಂಬ ರಾಜಕಾರಣವಲ್ಲ-ಯುವ ನಾಯಕತ್ವಕ್ಕೆ ಸಿಕ್ಕ ಆದ್ಯತೆ: ಬಿ.ವೈ. ವಿಜಯೇಂದ್ರ

ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ …

Read More »

2 ಸಾವಿರ ಎಕರೆಯಲ್ಲಿ ವಿಶ್ವ ದರ್ಜೆಯ ಕೆಹೆಚ್‌ಐಆರ್ ಸಿಟಿ ನಿರ್ಮಾಣ, 1 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್​

ಬೆಂಗಳೂರು: ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ ‘ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ’ (ಕೆಹೆಚ್‌ಐಆರ್)ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಉದ್ದೇಶಿತ ಕೆಹೆಚ್‌ಐಆರ್ ಸಿಟಿ ಬಗ್ಗೆ ಗಣ್ಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ಸಲಹೆ, …

Read More »

ಕರ್ನಾಟಕ ಬಿಜೆಪಿಯ ನೂತನ ಸಾರಥಿ ವಿಜಯೇಂದ್ರ

ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ …

Read More »

ಬೆಳಗಾವಿ ಪೌರಕಾರ್ಮಿಕರ ನೌಕರಿ ಕಾಯಮಾತಿ 15 ವರ್ಷಗಳಿಂದ ಕಾಯಮಾತಿ ಆದೇಶ ಸಿಕ್ಕಿಲ್ಲ.

ಬೆಳಗಾವಿ:ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡಲು ತಮ್ಮ ಜೀವನವನ್ನು ಮುಡಿಪಾಗಿಡುವ ಪೌರಕಾರ್ಮಿಕರಿಗೆ ಇನ್ನೂ ನೌಕರಿ ಕಾಯಮಾತಿ ಆದೇಶ ಸಿಕ್ಕಿಲ್ಲ. 2008ರಿಂದ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಆದೇಶವಿದ್ದರೂ ನೇಮಕ ಮಾಡದೇ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ. ಇನ್ನು ಅಧಿವೇಶನದೊಳಗೆ ಕಾರ್ಮಿಕರ ನೌಕರಿ ಕಾಯಂಗೊಳಿಸುವ ವಿಶ್ವಾಸವನ್ನು ಜಿಲ್ಲಾಧಿಕಾರಿ ಇಂದು ವ್ಯಕ್ತಪಡಿಸಿದ್ದು, ಪೌರ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದೆ‌. ಹೌದು.. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಕಾಯಮಾತಿ …

Read More »

ಶಾಲೆಯಲ್ಲಿ ಕುಕ್ಕರ್ ಬ್ಲಾಸ್ಟ್; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಡುಗೆ ಸಿಬ್ಬಂದಿ

ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿದೆ. ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂದಿದೆ. ಸದ್ಯ ಬಿಸಿಯೂಟ ತಯಾರಿಸುವ ಪಾತ್ರೆ, ಇತರ ಸಾಮಾನುಗಳು ತುಂಬಾ ಹಳೆದಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ. 600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ …

Read More »