ವಿಜಯಪುರ, ಮೇ.26: ಜಿಲ್ಲೆಯಲ್ಲಿ ಅನೇಕ ಕೆರೆಗಳು ಹಾಗೂ ಜಲ ಮೂಲಗಳು ಬತ್ತಿ ಹೋಗಿವೆ. ಸದ್ಯ ಮಳೆಗಾಲ ) ಆರಂಭವಾಗಿದ್ದರೂ ಕೆರೆಗಳಿಗೆ ನೀರು ಭರ್ತಿಯಾಗುವಷ್ಟು ಮಳೆಯಾಗಿಲ್ಲ. ಒಂದೆರೆಡು ಬಾರಿ ಮಳೆಯಾಗಿದ್ದರೂ ಮತ್ತೇ ಮಳೆ ಮಾಯವಾಗಿ ವಾರವೇ ಆಗಿದೆ. ವಿಜಯಪುರತಾಲೂಕಿನ ಜಂಬಗಿಗ್ರಾಮದಲ್ಲಿ 500 ಎಕರೆ ವಿಸ್ತಾರದಲ್ಲಿರುವ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆ, ನೀರಿಲ್ಲದೇ ಖಾಲಿ ಖಾಲಿಯಾಗಿದೆ. ಜಂಬಗಿ, ಆಹೇರಿ, ಶಿರಕನಹಳ್ಳಿ, ಅಂಕಲಗಿ, ಹೊನ್ನಳ್ಳಿ ಹಾಗೂ ಇತರೆ ಗ್ರಾಮಗಳ ಜನ-ಜಾನುವಾರುಗಳ ಹಾಗೂ ಪ್ರಾಣಿ-ಪಕ್ಷಿಗಳಿಗೆ ನೀರಿನ …
Read More »ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್ ಸುತ್ತ ಪೊಲೀಸರ ನಿಯೋಜನೆ
ಚಿಕ್ಕೋಡಿ, ಮೇ 26: ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬ್ಯಾರೇಜ್ ಬಳಿ ಪೊಲೀಸ್ ಇಲಾಖೆ ಹಾಗೂ ನೀರಾವರಿ ಇಲಾಖೆಯ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ನಾಲ್ವರು ಸಿಬ್ಬಂದಿಯ ಎರಡು ತಂಡ ಬ್ಯಾರೇಜ್ ಬಳಿ ನಿರಂತರವಾಗಿ ಗಸ್ತು ಹಾಕುತ್ತಿರುತ್ತದೆ.ಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದ ಕೃಷ್ಣ ನದಿಗೆ ಒಡಲಿಗೆ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ …
Read More »7 ವರ್ಷ ಬಳಿಕ 13 ಕೋಟಿ ರೂ. ವೆಚ್ಚದ ಗೋದಾಮು ಕಾಮಗಾರಿ ಆರಂಭ:
ಬೀದರ್, ಮೇ 26: ರೈತರು (Farmers) ಬೆಳೆಸಿದ ದವಸ ಧಾನ್ಯವನ್ನ ಸಂಗ್ರಹಿಸಲು ಬೃಹತ್ ಗೋದಾಮು ನಿರ್ಮಿಸಲಾಗುತ್ತಿತ್ತು. 13 ಕೋಟಿ ರೂ. ವೆಚ್ಚದ ಗೋದಾಮು (godown) ಕಾಮಗಾರಿ ಅರ್ಧಕ್ಕೆ ಬಿಟ್ಟು ಗುತ್ತಿಗೆದಾರ ಪಲಾಯನ ಮಾಡಿದ್ದ. ಸ್ಥಳೀಯ ನಿವಾಸಿಯೊಬ್ಬರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಎರಡು ವರ್ಷದ ಸತತ ಹೋರಾಟದ ಬಳಿಕ ಗೋದಾಮು ಕಾಮಗಾರಿ ಆರಂಭವಾಗಿದ್ದು ರೈತರ ಖಷಿ ಹೆಚ್ಚಿಸಿದೆ. ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ಗುತ್ತಿಗೆದಾರ ಪಲಾಯನ ರೈತರ ದವಸ ಧಾನ್ಯಗಳನ್ನ ಸಂಗ್ರಹ ಮಾಡುವ ಉದ್ದೇಶದಿಂದ ಬೀದರ್ ಜಿಲ್ಲೆಯ …
Read More »ಉಡುಪಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಉಡುಪಿ: ಉಡುಪಿ-ಮಣಿಪಾಲ ರಸ್ತೆಯ ನಡುರಸ್ತೆಯಲ್ಲೇ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. ಮೇ 18ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂದು ಗುರ್ತಿಸಲಾಗಿದೆ. ಈ …
Read More »ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ
ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ ಆಗಲಿದೆ ಎಂದರು. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ …
Read More »ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ನವಜಾತ ಶಿಶುಗಳು ಸಾವು
ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಹತ್ತಿ ಉರಿದು ಕನಿಷ್ಠ 7 ನವಜಾತ ಶಿಶುಗಳು ಮೃತಪಟ್ಟಿವೆ. ನಿನ್ನೆ ರಾತ್ರಿ 11:30 ರ ಸುಮಾರಿಗೆ ‘ಬೇಬಿ ಕೇರ್ ನ್ಯೂ ಬಾರ್ನ್ ಆಸ್ಪತ್ರೆ’ ಮತ್ತು ಅದರ ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಹದಾರದ ಕೃಷ್ಣ ನಗರದಲ್ಲಿನ ಬಹುಮಹಡಿ ವಸತಿ ಕಟ್ಟಡದಲ್ಲಿ ಮತ್ತೊಂದು ಬೆಂಕಿ ಕಾಣಿಸಿಕೊಂಡಿದ್ದು, ಮೂವರು …
Read More »ಕೂಲ್ ಕನ್ನಡತಿ ಅಕ್ಕ ಅನು ದಿಢೀರ್ ಸಿಟ್ಟಾಗಿದ್ದೇಕೆ?
ಸಾಮಾನ್ಯವಾಗಿ ಸಾಮಾಜಿಕ ಜಾಲತಾಣ ಬಳುಸುವವರಿಗೆ ಕನ್ನಡತಿ ಅಕ್ಕ ಅನು ಚಿರಪರಿಚಿತರು. ಸದಾ ಪ್ಯಾಂಟ್-ಶರ್ಟ್ ಧರಿಸಿ ತಲೆಗೆ ತುರುಬೋ ಅಥವಾ ಜುಟ್ಟೋ ಕಟ್ಟಿ ರಣ ಬಿಸಿಲಿಲೆನ್ನದೇ ಸರ್ಕಾರಿ ಶಾಲೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲೇ ಕಾಣಿಸಿಕೊಳ್ಳುವ ಅಕ್ಕ ಅನು ಅವರ ಕಾರ್ಯ ಇಂದಿನ ಯುವ ಜನತೆಗೆ ಮಾದರಿ. ಸರ್ಕಾರಿ ಶಾಲೆಗಳು, ಪಾಳು ಬೀಳುತ್ತಿರುವ ದೇವಸ್ಥಾನ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಬಣ್ಣ ಹಚ್ಚಿ ಹೊಸ ಲುಕ್ ನೀಡುವ ಅಕ್ಕ ಅನು ಅವರನ್ನು ಕಂಡರೆ ಕನ್ನಡಿಗರಿಗೆ …
Read More »ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಅನುಮಾನ ಮೂಡಿಸಿದ ಎಸ್ಐಟಿ ನಡೆ
ಹಾಸನ, ಮೇ.26: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಕೇಸ್ (Pendrive) ಸಂಬಂಧ ಎಸ್ಐಟಿ ಪೊಲೀಸರ ನಡೆ ಮೇಲೆ ಅನುಮಾನ ಮೂಡುತ್ತಿದೆ. ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದ ಐವರು ಪ್ರಮುಖ ಆರೋಪಿಗಳನ್ನು ಎಸ್ಐಟಿ ಬಂಧಿಸಿಲ್ಲ. ಹೀಗಾಗಿ ಎಸ್ಐಟಿ (SIT) ತನಿಖಾ ವೈಖರಿ ಅಚ್ಚರಿ ಮೂಡಿಸಿದೆ. ಪ್ರಕರಣದಲ್ಲಿ ಆರು, ಏಳು, ಎಂಟನೇ ಆರೋಪಿಗಳೆಂದು ಮೂವರನ್ನು ಬಂಧಿಸಲಾಗಿದೆ. ಪ್ರೀತಂಗೌಡ ಆಪ್ತ ಲಿಖಿತ್ ಗೌಡ, ಕಚೇರಿ ಸಹಾಯಕ ಚೇತನ್ ಹಾಗೂ ವಕೀಲ ದೇವರಾಜೇಗೌಡನನ್ನು ಬಂಧಿಸಲಾಗಿದೆ. ಆದರೆ …
Read More »ನಟೋರಿಯಸ್ ಕೊಲೆಗಾರ ಗಿರೀಶ್ನನ್ನು ಬೆಂಗಳೂರಿನಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ
ಬೆಂಗಳೂರು, ಮೇ 26: ನಟೋರಿಯಸ್ ಕೊಲೆಗಾರ ಗಿರೀಶ್ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು. ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …
Read More »ವಿಶ್ವ ದಾಖಲೆ ಬರೆದ ವಿಶ್ವದ ಅತಿ ಎತ್ತರದ ಗೂಳಿ ರೋಮಿಯೋ
ಈ ಗೂಳಿ ಹೋಲ್ಸ್ಟೈನ್ ಜಾತಿಯ ಗೂಳಿಯಾಗಿದ್ದು ಇದಕ್ಕೆ ಈಗ 6 ವರ್ಷ. ಇದರ ಹೆಸರು ರೋಮಿಯೋ. ‘1.94 ಮೀಟರ್ (6 ಅಡಿ 4.5 ಇಂಚು) ಎತ್ತರವಿರುವ ಈ ಗೂಳಿ ಗಿನ್ನೆಸ್ ವಿಶ್ವ ದಾಖಲೆ ಪುಟವನ್ನು ಸೇರಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಗೂಳಿಯೊಂದು ಚರ್ಚೆಯಲ್ಲಿದೆ ಏಕೆಂದರೆ ಈ ಗೂಳಿ ಗಿನ್ನೆಸ್ ವಿಶ್ವ ದಾಖಲೆ ಪುಟವನ್ನು ಸೇರಿದೆ. ವಾಸ್ತವವಾಗಿ, 6 ವರ್ಷದ ಹೋಲ್ಸ್ಟೈನ್ ಸ್ಟೀರ್ ರೋಮಿಯೋ ಅನ್ನು ವಿಶ್ವದ ಅತಿ ಎತ್ತರದ ಬುಲ್ ಎಂದು ಪರಿಗಣಿಸಲಾಗಿದೆ. …
Read More »
Laxmi News 24×7