ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ. ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ …
Read More »ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್ ಮಾಡ್ತಿದ್ರು?
ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ …
Read More »ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್. ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ. ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ …
Read More »ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ
ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾವು ನುಡಿದಂತೆ …
Read More »ಪ್ರಭಾಕರ ಕೋರೆ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರ್ಣ
ಬೆಳಗಾವಿ: ‘ದಾನ ಪಡೆಯುವ ಕೈಗಳು ಶುದ್ಧವಾಗಿದ್ದರೆ ಮಾತ್ರ ದಾನ ನೀಡುವ ಕೈಗಳು ಮುಂದೆ ಬರುತ್ತವೆ. ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್ಇ) ಸಂಸ್ಥೆ ವಿಶ್ವಮಟ್ಟಕ್ಕೆ ಬೆಳೆಯಲು ಇಂಥ ಶುದ್ಧ ಕೈಗಳೇ ಕಾರಣ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಪ್ರಭಾಕರ ಕೋರೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂಸ್ಥೆಯ ಪರಿವಾರದವರು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬ್ರಿಟಿಷ್ ಆಡಳಿತದಲ್ಲಿ ಉನ್ನತ ಶಿಕ್ಷಣ ಪಡೆದಿದ್ದ …
Read More »ಹಿಂದೂಗಳನ್ನು ರಕ್ಷಿಸುವ ಪಕ್ಷಗಳನ್ನು ಆಯ್ಕೆ ಮಾಡಿ: ದಿಲೀಪ ಪರಾಂಡೆ
ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. …
Read More »ನೀರು ಬಿಡುಗಡೆಗೆ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ಗೆ ಜೊಲ್ಲೆ ಮನವಿ
ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು. ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು. …
Read More »ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ
ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ …
Read More »ಬಸವಣ್ಣ ಪಾವಿತ್ರ್ಯತೆ ಕಲಿಸಿದ ಪುರುಷೋತ್ತಮ: ಸಿದ್ಧಬಸವ ದೇವರು
ಬೆಳಗಾವಿ: ‘ಸಮಾನತೆ ತತ್ವ, ಸಾಮಾಜಿಕ ಕ್ರಾಂತಿ ಹಾಗು ಅನುಭವ ಮಂಟಪದ ಮುಖಾಂತರ ಪ್ರಜಾಪ್ರಭುತ್ವದ ಕಲ್ಪನೆ ನೀಡಿ, ಸೂಳೆ ಸಂಕವ್ವ ಸೇರಿದಂತೆ ಎಲ್ಲ ವೃತ್ತಿಯವರಿಗೆ ಸಮಾನವಾಗಿ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಬಸವಣ್ಣ ಎಲ್ಲರಿಗೂ ಪಾವಿತ್ರ್ಯತೆ ಕಲಿಸಿದ ಪುರುಷೋತ್ತಮ’ ಎಂದು ಯಮಕನಮರಡಿಯ ಹುಣಸಿಕೊಳ್ಳ ಮಠದ ಸಿದ್ಧಬಸವ ದೇವರು ಶ್ಲಾಘಿಸಿದರು. ಇಲ್ಲಿನ ಶಿವಬಸವ ನಗರದ ಪ್ರಭುದೇವ ಸಭಾಗೃಹದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ನಾಗನೂರು ರುದ್ರಾಕ್ಷಿಮಠದ ಸಹಯೋಗದಲ್ಲಿ ಬಸವ ಜಯಂತ್ಯುತ್ಸವದ ಎರಡನೇ ದಿನವಾದ …
Read More »ಚಿಕ್ಕೋಡಿ: ಯಮ ಸಲ್ಲೇಖನ ವ್ರತ ಕೈಗೊಂಡ ಮುನಿ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೋಥಳಿಯ ದೇಶಭೂಷಣ ಮುನಿಗಳ ಜೈನ ಆಶ್ರಮದಲ್ಲಿ ಸಮಾಧಿ ಸೇನ ಮುನಿಗಳು(79) ಮೇ 17ರಿಂದ ನಾಲ್ಕು ಪ್ರಕಾರದ ಆಹಾರ(ಲೇಹ, ಪೇಯ, ಸ್ವಾದ್ಯ ಮತ್ತು ಖಾದ್ಯ) ತ್ಯಾಗ ಮಾಡಿ, ಯಮ ಸಲ್ಲೇಖನ ವ್ರತ ಕೈಗೊಂಡಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲ್ಲೂಕು, ಪಕ್ಕದ ಮಹಾರಾಷ್ಟ್ರದ ಕೊಲ್ಹಾಪೂರ ಮತ್ತು ಸಾಂಗ್ಲಿ ಜಿಲ್ಲೆಯಿಂದ ಅಪಾರ ಸಂಖ್ಯೆಯಲ್ಲಿ ಜನರು ಆಶ್ರಮಕ್ಕೆ ಆಗಮಿಸಿ, ಮುನಿಗಳ ದರ್ಶನ ಪಡೆಯುತ್ತಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡದವರಾದ ಸಮಾಧಿ …
Read More »
Laxmi News 24×7