ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು. ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ …
Read More »ಅಂತ್ಯ ಸಂಸ್ಕಾರದ ವೇಳೆ ಮರುಜೀವ ಪಡೆದ ಎಳೆಮಗು, ಬಾಗಲಕೋಟೆಯಲೊಂದು ಅಚ್ಚರಿ
ಬಾಗಲಕೋಟೆ, ಮೇ 24- ಎಳೆಯ ಮಗುವೊಂದು ಮೃತಪಟ್ಟಿದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಮಗು ಕೆಮ್ಮಿದ್ದು ಪೋಷಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಮೃತ ಪಟ್ಟಿದೆ ಎಂದು ಭಾವಿಸಿದ್ದ ಮಗು. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು …
Read More »ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಎರಡು ಗುಂಪುಗಳ ಮಧ್ಯೆ ಗಲಾಟೆ, ಕಲ್ಲು, ತಲ್ವಾರ್ ತೂರಾಟ
ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಉಂಟಾದಂತ ಜಗಳ, ತಾರಕಕ್ಕೆ ಏರಿದ ಪರಿಣಾಮ, ಬೆಳಗಾವಿಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ, ತಲ್ವಾರ್ ಗಳನ್ನು ಎಸೆದು ಬೆಚ್ಚಿ ಬೀಳಿಸುವಂತೆ ಮಾಡಿರುವ ಘಟನೆ ನಡೆದಿದೆ. ಮನೆಯ ಮುಂದಿನ ವಾಹನಗಳು ಕಿಡಿಗೇಡಿಗಳ ದಾಳಿಯಲ್ಲಿ ಜಖಂ ಗೊಂಡಿದ್ದಾರೆ. ಬೆಳಗಾವಿ ಆಳ್ವಾಸ್ ಓಣಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿದ ಪರಿಣಾಮ, ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನೆಡಸಿದ್ದಾರೆ. ಅಲ್ಲದೇ …
Read More »ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಹೋರಾಟ ನಡೆಯಲಿದೆ. ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್ಗಳನ್ನೂ ಬಿಡುಗಡೆ ಮಾಡಲಾಗಿದೆ. ಸಂಘಟನೆಯ ಮುಖಂಡ ದರ್ಮೇಶ್ ಇಂದು ಹಾಸನ ಚಲೋ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. …
Read More »ಕುಟುಂಬದಿಂದ ಹೊರಹಾಕುತ್ತೇವೆ ಎಂದ ದೇವೇಗೌಡರಿಗೆ ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ವ? ಸಿಎಂ
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಈ ಕುರಿತಂತೆ ನಿನ್ನೆ ಎಚ್ ಡಿ ದೇವೇಗೌಡರು ಪ್ರಜ್ವಲ್ ಗೆ ಪತ್ರ ಬರೆದಿದ್ದು ಎಲ್ಲೇ ಇದ್ದರೂ ಬಂದು ಶರಣಾಗು ಎಂದು ತಿಳಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ಸಿದ್ದು ಪ್ರಜ್ವಲ್ ಅನ್ನು ಕುಟುಂಬದಿಂದ ಹೊರ ಹಾಕುತ್ತೇವೆ ಎಂದು ದೇವೇಗೌಡರಿಗೆ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿರುವ …
Read More »ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ
ಧಾರವಾಡ: ಬೈಕ್ ನಲ್ಲಿ ಹೊರಟಿದ್ದ ವ್ಯಕ್ತಿಯನ್ನು ದೋಚಿ ಪರಾರಿಯಾದ ಇಬ್ಬರು ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಧಾರವಾಡ ಗ್ರಾಮೀಣ ಠಾಣೆಯ ಪಿಎಸ್ಐ ರೇಣುಕಾ ಐರಾಣಿ ನೇತೃತ್ವದಲ್ಲಿ ಬಂಧಿಸಲಾಗಿದ್ದು, ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅಳ್ನಾವರ ರಸ್ತೆಯ ಮಂಡಿಹಾಳ ಗ್ರಾಮದ ಹತ್ತಿರ 4 ಜನ ದರೋಡೆಕೋರರು ಬೈಕ್ ನಲ್ಲಿ ಹೋಗುತ್ತಿದ್ದವನನ್ನ ನಿಲ್ಲಿಸಿ, ಅವನಿಂದ ಮೊಬೈಲ್, ಹಣದ ಪರ್ಸ್ ದೋಚಿಕೊಂಡು ಹೊರಟಿದ್ದಾರೆ. ಈ ಬಗ್ಗೆ ಸ್ಥಳೀಯರು ಕೂಡಲೇ ಮಹಿಳಾ ಪಿಎಸ್ಐ …
Read More »ಚಾಕೊಲೇಟ್ ಗ್ಯಾಂಗ್ ಬೆನ್ನಲ್ಲೇ ಆಯಕ್ಟೀವ್ ಆಯ್ತು ಜ್ಯೂಸ್ ಗ್ಯಾಂಗ್:
ಬೆಳಗಾವಿ, ಮೇ 22: ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಭಾರಿ ಸದ್ದು ಮಾಡಿತ್ತು. ಕಳೆದ ಕೆಲ ತಿಂಗಳ ಹಿಂದೆ ರೈಲಿನಲ್ಲಿ ಮತ್ತು ಬರುವ ಚಾಕಲೇಟ್ ನೀಡಿ ನಗನಾಣ್ಯವನ್ನು ಗ್ಯಾಂಗ್ ದೋಚಿತ್ತು. ಇದೀಗ ಆ ಗ್ಯಾಂಗ್ ಬಳಿಕ ಬಸ್ನಲ್ಲಿ ಜ್ಯೂಸ್ ಗ್ಯಾಂಗ್(Juice gang)ಆಯಕ್ಟೀವ್ ಆಗಿದೆ. ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ …
Read More »ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ
ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ ಬೆಳಗಾವಿ:ಜಿಲ್ಲೆಯ ಪ್ರಮುಖ ರೈತ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ನಿಧನ ಹೊಂದಿದ್ದಾರೆ. ಅನಾರೋಗ್ಯ ನಿಮಿತ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲ ಸ್ಪಷ್ಟಪಡಿಸಿದೆ. ಕಬ್ಬಿನ ಬೆಲೆ, ಬೆಳೆಗಳಿಗೆ ಬೆಂಬಲ ಬೆಲೆ, ರೈತರ ಹೊಲಗಳಿಗೆ ರಸ್ತೆ, ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಕಾರ್ಮಿಕರ ಬದುಕು ಭವನೆಗಳ ಬಗೆಗೆ ಜಯಶ್ರೀ ತೀವ್ರ ಹೋರಾಟ ನಡೆಸಿ ಗಮನ …
Read More »ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!
ಬೆಂಗಳೂರು : ರಾಜ್ಯಾದ್ಯಂತ ಮಳೆ ಶುರುವಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಿದೆ. ಈ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಎಚ್ಚರಿಕೆ ನೀಡಿದೆ. ಮಳೆಗಾಲದಲ್ಲಿ ಹರಡುವ ರೋಗಗಳು 1) ಕಾಲರಾ 2) ಮಲೇರಿಯಾ 3) ಡೆಂಗ್ಯೂ 4) ಚಿಕುನ್ ಗುನ್ಯಾ 5) ವಿಷಮಶೀತ ಜ್ವರ 6) ಕಾಮಾಲೆ ಮನೆಯ ಸುತ್ತ ನಿಲ್ಲುವ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಇದರಿಂದ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ಮಲೇರಿಯಾ, ಡೆಂಗ್ಯೂ, …
Read More »ಕಾಂಗ್ರೆಸ್ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ; ಪ್ರಧಾನಿ ಮೋದಿ ಆರೋಪ
ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಪಶ್ಚಿಮ ದೆಹಲಿಯ ದ್ವಾರಕಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದರು. 60 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
Read More »
Laxmi News 24×7