ಬೆಳಗಾವಿ: ಈ ಬಾರಿ ಬರಗಾಲದ ನಡುವೆಯೂ ಕಬ್ಬು ರೈತರ ಕೈ ಹಿಡಿದಿದೆ. ಇಳುವರಿಯೂ ಹೆಚ್ಚಳವಾಗಿದೆ. ಎಫ್ಆರ್ಪಿ ಕೂಡ ಏರಿಕೆಯಾಗಿದ್ದರಿಂದ ಬೆಳೆಗಾರರ ಜೇಬು ಭರ್ತಿಯಾಗಿದೆ. ರಾಜ್ಯದಲ್ಲಿ ಈ ಹಂಗಾಮಿನಲ್ಲಿ 76 ಕಾರ್ಖಾನೆಗಳು ಕಬ್ಬು ನುರಿಸಿವೆ. ಏಪ್ರಿಲ್ 30ರ ವರೆಗೆ 586 ಲಕ್ಷ ಟನ್ ಕಬ್ಬು ನುರಿಸಲಾಗಿದೆ. ಒಟ್ಟು 52.91 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, 9.04 ರಿಕವರಿ ಬಂದಿದೆ. 2023ರಲ್ಲಿ 600 ಲಕ್ಷ ಮೆಟ್ರಿಕ್ ಟನ್ ಮತ್ತು 2022ರಲ್ಲಿ 600 ಲಕ್ಷ …
Read More »ಬೆಳಗಾವಿ: ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ
ಬೆಳಗಾವಿ: ‘ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ. ‘ಪುದುಚೇರಿ- ದಾದರ್ ಎಕ್ಸ್ಪ್ರೆಸ್ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ …
Read More »ಮಳೆ.. ಮಳೆ.. ಆರ್ಸಿಬಿ VS ಚೆನ್ನೈ ಮ್ಯಾಚ್ ರದ್ದು?
ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು ಮಹತ್ವದ ಐಪಿಎಲ್ ಪಂದ್ಯ ನಡೆಯುವ ಸಮಯದಲ್ಲಿ ಮಳೆರಾಯ ಕಾಟ ಕೊಡಲು ಶುರು ಮಾಡಿದ್ದಾನೆ. ಹೀಗಿದ್ದಾಗ ಇಂದು ಆರ್ಸಿಬಿ VS ಸಿಎಸ್ಕೆ (RCB VS CSK) ಮ್ಯಾಚ್ ನಡೆಯುವುದೇ ಅನುಮಾನ ಎನ್ನುವಂತಾಗಿದೆ. ಇದೇ ಸಮಯದಲ್ಲಿ ಆರ್ಸಿಬಿ ಅಭಿಮಾನಿಗಳಿಗೆ ಮತ್ತೊಂದು ಆಘಾತದ ಸುದ್ದಿ ಸಿಕ್ಕಿದೆ. ಹೌದು, ಬೆಂಗಳೂರಲ್ಲಿ ಈಗಾಗಲೇ ಮಳೆ ಶುರುವಾಗಿದ್ದು ಇಂದು ಪೂರ್ತಿ ದಿನ …
Read More »ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
ಬೆಳಗಾವಿ : ಮಹಾರಾಷ್ಟ್ರದ ಕಾಗಲ್ ಬಳಿ ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾಗಿದ್ದಾರೆ. ಇನ್ನುಳಿದ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದ ಬಳಿ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ. ಜಿತೇಂದ್ರ ವಿಲಾಸ ಲೋಕ್ರೆ (36), ರೇಷ್ಮ ದೀಪಕ ಏಳಮಲೆ (34), ಸವಿತಾ ಅಮರ ಕಾಂಬಳೆ (27) ಹಾಗೂ ಯಶ್ ದಿಲೀಪ ಕಾಂಬಳೆ …
Read More »ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಸಿಎಸ್ …
Read More »ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ, : ನಿತಿನ್ ಗಡ್ಕರಿ
ಮುಂಬೈ: ನಾಸಿಕ್ ಲೋಕಸಭಾ ಕ್ಷೇತ್ರದ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ಶುಕ್ರವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಡಾ.ಭೀಮ್ ರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನು ಬದಲಾಯಿಸಲು ಬಿಜೆಪಿ ಯೋಜಿಸುತ್ತಿದೆ ಎಂದು ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ …
Read More »ಜರ್ಮಿನಿಯಿಂದ ಲಂಡನ್ಗೆ ಹಾರಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ, ಲಂಡನ್ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಇಂಗ್ಲೆಂಡ್ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತರ ಜೊತೆ ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್ಗೆ ಹೋಗಿರುವ …
Read More »ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು
ಬೆಳಗಾವಿ: ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಅಣೆಕಟ್ಟಿನಲ್ಲಿ ವೇದಗಂಗಾ ನದಿಯಲ್ಲಿ ನಡೆದಿದೆ. ಜಿತೇಂದ್ರ ವಿಲಾಸ್ ಲೋಕ್ರೆ (36), ರೇಷ್ಮಾ ದಿಲೀಪ್ ಏಳಮಲ್ಲೆ (34), ಸವಿತಾ ಅಮರ್ ಕಾಂಬಳೆ (27), ಯಶ್ ದಿಲೀಪ್ ಏಳಮಲ್ಲೆ (17) ಮೃತ ದುರ್ದೈವಿಗಳು. ಮೃತರಲ್ಲಿ ಇಬ್ಬರು ಬೆಳಗಾವಿಯ ಅಥಣಿ ತಾಲೂಕಿನವರು ಎಂದು ತಿಳಿದುಬಂದಿದೆ.ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಶವಗಳನ್ನು …
Read More »ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಳಗಾವಿ: ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೋರಿದ್ದು, ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ತೀವ್ರ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ಮನವಿ ಮಾಡಿದ್ದೇವೆ. ಮಹಾರಾಷ್ಟ್ರ ಸರ್ಕಾರ ನೀರು …
Read More »3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!
ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್ ಸಾವಂತ್ ಅನ್ನು ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್ನನ್ನು ಬಂಧಿಸಲಾಗಿದೆ. ಬಂಧಿತ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಳೆದ ಮೂರು ತಿಂಗಳಿನಿಂದ ಅಂಜಲಿಯನ್ನು ಕೊಲೆ ಮಾಡುವ ಯೋಜನೆ ಹಾಕಿಕೊಂಡಿದ್ದು , ಈ ವಿಷಯವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಗಿ …
Read More »
Laxmi News 24×7