Breaking News

Uncategorized

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ. ವಿವರ: ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ ನವಭಾಗ್ …

Read More »

ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ.:B.S.Y.

ಬೆಂಗಳೂರು: “ರಾಜ್ಯ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಖಂಡಿಸಿ ಜನಜಾಗೃತಿ ಮೂಡಿಸಲು ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಇಂದು ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ ಬರುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಡಿನ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ. ಇವತ್ತು ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ದರ್ಶನ ಮಾಡಲು ನಾವೆಲ್ಲ ಒಟ್ಟಾಗಿ ಹೋಗುತ್ತಿದ್ದೇವೆ. …

Read More »

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಹೈದ್ರಾಬಾದ್​ ಕರ್ನಾಟಕ ವಿಮೋಚನಾ ರೂವಾರಿ ಸರ್ಧಾರ್​ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಯೋಜನೆಗಳ ಬಗ್ಗೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳ ಕುರಿತು ವಿವರಿಸಿದರು. ಅಲ್ಲದೆ ನೂತನ ಸಾರಿಗೆ ಬಸ್, ಹೆಲ್ತ್ ಎಟಿಎಂ ಲೋಕಾರ್ಪಣೆ …

Read More »

ಮಂಗಳೂರಿನಲ್ಲಿ ಸ್ಪೋಟಗೊಂಡ ಕುಕ್ಕರ್ ಬಾಂಬ್​​ ಅನ್ನು ಸುಪ್ರಸಿದ್ದ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸಲು ಯೋಜನೆ ರೂಪಿಸಲಾಗಿತ್ತು ಎಂಬ ಅಂಶ ಬಯಲಾಗಿದೆ.

ಮಂಗಳೂರು: ಕಳೆದ ವರ್ಷ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್​ನ್ನು ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸಲು ಉದ್ದೇಶಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ. 2022ರ ನವೆಂಬರ್ 19 ರಂದು ಮಂಗಳೂರಿನಲ್ಲಿ ‌ಕುಕ್ಕರ್‌ ಬಾಂಬ್ ಸ್ಪೋಟ ನಡೆದಿತ್ತು. ಉಗ್ರ ಶಾರೀಕ್ ನಗರದ ಪಡೀಲ್ ನಲ್ಲಿ ರಿಕ್ಷಾವೊಂದನ್ನು ಹತ್ತಿ ಪ್ರಯಾಣ ಬೆಳೆಸುತ್ತಿದ್ದಾಗ ನಾಗುರಿ ಬಳಿ‌ ಆತನ ಬಳಿಯಿದ್ದ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಸಂಚರಿಸುತ್ತಿದ್ದ ರಿಕ್ಷಾ ದಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾದ ಕಾರಣ ಆರೋಪಿ ಶಾರೀಕ್ ಮತ್ತು ರಿಕ್ಷಾ …

Read More »

ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಿಸುತ್ತಿದ್ದಾರೆ. ಜಾನುವಾರು ಪೋಷಣೆಗೆ ಬದುಕನ್ನೇ ಮುಡಿಪಾಗಿಟ್ಟ ವೈದ್ಯ ದಂಪತಿ

ದಾವಣಗೆರೆ : ಬಸನಗೌಡ ಕುಸುಗೂರು ಮತ್ತು ವಿಜಯಲಕ್ಷ್ಮಿ ಬಿ.ಕುಸುಗೂರು ವೃತ್ತಿಯಲ್ಲಿ ವೈದ್ಯ ದಂಪತಿ. ವೃತ್ತಿ ಜೀವನದಲ್ಲಿ ಬಿಡುವು ಮಾಡಿಕೊಂಡು ತಮ್ಮ ಕೈಲಾದಷ್ಟು ಸಮಾಜಸೇವೆ ಮಾಡುತ್ತಿದ್ದಾರೆ. ಕಳೆದ ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಣೆ ಮಾಡುತ್ತಿದ್ದಾರೆ. ಹೀಗೆ ಪೋಷಿಸಿದ ಜಾನುವಾರುಗಳನ್ನು ಬಡ ರೈತರಿಗೆ ಉಚಿತವಾಗಿ ಉಳುಮೆಗೆ ಕೊಡುತ್ತಿದ್ದಾರೆ. ಚನ್ನಗಿರಿ ತಾಲೂಕಿನ ಬಸವಪಟ್ಟಣ ಎಂಬ ಪುಟ್ಟ ಗ್ರಾಮದಲ್ಲಿ ಇವರು ಕುಸುಗೂರು ಡಾಕ್ಟರ್ ಎಂದೇ ಪರಿಚಿತರು. ದಶಕಗಳಿಂದ ವೈದ್ಯ ವೃತ್ತಿ ಮಾಡುತ್ತಾ ಅದರೊಂದಿಗೆ ಜಾನುವಾರುಗಳ …

Read More »

ಬಳ್ಳಾರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 9 ಜನರಿಗೆ ಗಾಯ

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ. ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸಾರಿಗೆ ಬಸ್‌ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸುಮಾರು 50 ಕ್ಕೂ ಹೆಚ್ಚು ಜನರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ …

Read More »

ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ!

ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. …

Read More »

ಬೆಂಗಳೂರಿನ 12 ಆರ್​​ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್​ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್​​ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್​​ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಯನಗರ ಹಾಗೂ ರಾಜಾಜಿನಗರದ ಆರ್​​ಟಿಓ …

Read More »

ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಅವರ ತಂದೆ, ತಾಯಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದರು

ರಾಯಚೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್, ತಾಯಿ ಉಷಾ ಸುನಕ್ ಹಾಗೂ ಇನ್ಫೋಸಿಸ್​​ ಫೌಂಡೇಶನ್​ ಸಂಸ್ಥಾಪಕಿ ಸುಧಾ ಮೂರ್ತಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದರು. ಆರಂಭದಲ್ಲಿ ಗ್ರಾಮದ ಅಧಿದೇವತೆ ಶ್ರೀಮಂಚಾಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಯರ ಮೂಲಬೃಂದಾವನ ದರ್ಶನ ಪಡೆದು, ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ​ ರಿಷಿ ಸುನಕ್‌ …

Read More »

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಲು ನೆರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಬಾಲಕನೊಬ್ಬ ಶಾಲೆಗೆ ಹೋಗದೇ ಕುರಿ ಕಾಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಬಾಲಕನನ್ನು ಮತ್ತೆ ಶಾಲೆಗೆ ಸೇರಲು ನೆರವಾಗಿದ್ದಾರೆ. ಬಸಾಪುರ ಗ್ರಾಮದ ಯೋಗೇಶ್ ಎಂಬ ಬಾಲಕನನ್ನು ಮರಳಿ ಶಾಲೆಗೆ ಸೇರಿಸಲಾಗಿದೆ. ಈತನನ್ನು ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ಕಳುಹಿಸಿದ್ದರು.     ಈ ಬಗ್ಗೆ ಸ್ಥಳೀಯರಾದ ಮಹೇಂದ್ರ ಎಂಬವರು ತಮ್ಮ …

Read More »