ಬೆಂಗಳೂರು: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಸರ್ಕಾರ ಹೊರಡಿಸಿರೋ ಭೂಸ್ವಾಧೀನ ಆದೇಶವನ್ನು ತಕ್ಷಣ ಕೈ ಬಿಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯ ಆದ್ಯತೆ ರೈತರಲ್ಲ. ರಾಜ್ಯದಲ್ಲಿ ಬಡವರಿಗೆ ಮನೆ ಕಟ್ಟುವುದು ಇವರ ಆದ್ಯತೆ ಅಲ್ಲ. ರಿಯಲ್ ಎಸ್ಟೇಟ್ ಇವರ ಆದ್ಯತೆ ಎಂದು ಸಿಎಂ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ತೋರಿಸಿದ್ದಾರೆ. ಬಿಡದಿಯಲ್ಲಿ ಬಲವಂತವಾಗಿ ರೈತರಿಂದ ಸರ್ಕಾರ ಜಮೀನು ಕಸಿಯುವ ಕೆಲಸ ಮಾಡುತ್ತಿದೆ. …
Read More »ಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್ಡಿಕೆ ಕಿಡಿ
ಬೆಂಗಳೂರು: ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಹೋಗಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಬಿಡದಿಯಲ್ಲಿ ಕುಮಾರಸ್ವಾಮಿ ಮತ್ತು ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ …
Read More »ಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆ
ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
Read More »ಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್ಶಿಪ್ ಜಟಾಪಟಿ – ಪೋಸ್ಟರ್ ವಾರ್
ರಾಮನಗರ: ಕಾಂಗ್ರೆಸ್ ಹಾಗೂ ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್ಶಿಪ್ ಜಟಾಪಟಿ ಜೋರಾಗಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದ ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಪೋಸ್ಟರ್ ವಾರ್ ಆರಂಭಿಸಿದೆ. ಇಂದು ಬಿಡದಿಗೆ ಬಿಜೆಪಿ ನಿಯೋಗ ಭೇಟಿ ಹಿನ್ನೆಲೆ ಕಾಂಗ್ರೆಸ್ ಪೋಸ್ಟರ್ಗಳನ್ನ (Poster) ಅಂಟಿಸಿ ಬಿಜೆಪಿಯನ್ನ ಟೀಕಿಸಿದೆ. ಯೋಜನೆ ವಿರುದ್ಧ ಪಾದಯಾತ್ರೆಗೆ ಕರೆ ನೀಡಿರುವ ಜೆಡಿಎಸ್ ವಿರುದ್ಧವೂ ಪೋಸ್ಟರ್ ಹಾಕಿ ವ್ಯಂಗ್ಯಮಾಡಿದೆ. ರೈತರ ಭೂಮಿ ಕದ್ದ ಆರ್.ಅಶೋಕ್, ಬಿರಿಯಾನಿ ಅಡ್ಡೆಯ ಚಿಲ್ಲರೆ ನಾರಾಯಣಸ್ವಾಮಿ, ಆರ್ಟಿಜಿಎಸ್ …
Read More »ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ – 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆ
ನವದೆಹಲಿ: ಭಾರತದ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಮಟ್ಟ ತಲುಪಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 15.6 ಪ್ರತಿಶತ ಹೆಚ್ಚಳವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಆತ್ಮನಿರ್ಭರ ಭಾರತದ ದೊಡ್ಡ ಸಾಧನೆ ಎಂದು ಬಣ್ಣಿಸಿದ್ದಾರೆ. ಹಿಂದಿನ ಹಣಕಾಸು ವರ್ಷ 2024-25ರಲ್ಲಿ ರಕ್ಷಣಾ ಉತ್ಪಾದನೆ 1.54 ಲಕ್ಷ ಕೋಟಿ ರೂ. ಇತ್ತು. 2020-21ರಲ್ಲಿ ಇದು 84,643 ಕೋಟಿ ರೂ. ಮಾತ್ರ ಇತ್ತು. …
Read More »ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್ ರಾಜ್
ಬೆಂಗಳೂರು: ಚಿನ್ನಯ್ಯನ ಜೊತೆಗೆ ಮಾತನಾಡಿದ್ದು ನಿಜ, ಆತ ನನ್ನೊಂದಿಗೆ ತಮಿಳಿನಲ್ಲಿ ಮಾತನಾಡಿದ್ದ ಎಂದು ನಟ ಪ್ರಕಾಶ್ ರಾಜ್ ಒಪ್ಪಿಕೊಂಡರು. ಬೆಂಗಳೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ತನ್ನ ಹೆಸರು ತಳುಕು ವಿಚಾರಕ್ಕೆ ಸ್ಪಷ್ಟನೆ ನೀಡಿದರು. ಕೋರ್ಟ್ ನಲ್ಲಿ ಚಿನ್ನಯ್ಯ ಹೇಳಿಕೆ ನೀಡಿದ್ದಾನೆ. ಗಿರೀಶ್ ಮಟ್ಟಣ್ಣನವರ್ ಹೇಳಿದ ರೀತಿಯಲ್ಲಿ ಕೇಳಿದ್ರೆ ನಾನು ನಿನ್ನ ಅಪ್ಪಿಕೊಳ್ತಿನಿ ಅಂದಿದ್ದೆ ಅಂತ ಹೇಳಿದ್ದಾನೆ. ಕೇರಳದಿಂದ ಹಣ ಬಂದಿದೆ ಅಂತಲೂ ಹೇಳಿ, …
Read More »ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ಗೆ ಸೇರ್ಪಡೆ
ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್ಗೆ ಸೇರ್ಪಡೆಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಧಿಕೃತವಾಗಿ ಪಕ್ಷ ಸೇರಲಿದ್ದಾರೆ.
Read More »ಬಿಡದಿ ಟೌನ್ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಬಿಜೆಪಿ ನಿಯೋಗವು ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ನಿಯೋಗವು ಮೊದಲು ಭೈರಮಂಗಲ ಗ್ರಾಮದ ಹಾಲಿನ ಡೈರಿಗೆ …
Read More »ಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ
ತಮ್ಮ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ಚಳಿ ಬಿಡಿಸಲು ನಟ ದೊಡ್ಡಣ್ಣ ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ರಾಜ್ಯ ಮಟ್ಟದಲ್ಲಿ ವೈರಲ್ ಆಗಿತ್ತು. ಅನೇಕರು ದೊಡ್ಡಣ್ಣ ಅವರಿಗೆ ಕಾಲ್ ಮಾಡಿ ವಿಚಾರಿಸಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ನಟ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದ ದಿನವೇ ವಿಡಿಯೋ ಮಾಡಿ ತಾವು ಆರೋಗ್ಯದಿಂದ ಇರುವುದಾಗಿ …
Read More »ಇಡೀ ಸಮಾಜವಾದಿ ಪಕ್ಷ ಬಿಜೆಪಿ ಜೊತೆ ಸೇರಲು ಕಾದು ಕುಳಿತಿದೆ – ಓಂ ಪ್ರಕಾಶ್ ರಾಜ್ಭರ್
ಲಕ್ನೋ: ಮಹಾರಾಷ್ಟ್ರ ಮತ್ತು ಪಶ್ಚಿಮಬಂಗಾಳ ರಾಜಕೀಯವನ್ನು ಮರೆತು ಬಿಡಿ. ಸಮಾಜವಾದಿ ಪಕ್ಷದಲ್ಲಿ ಶೀಘ್ರದಲ್ಲೇ ಒಡಕು ಉಂಟಾಗಲಿದೆ. ಇಡೀ ಸಮಾಜವಾದಿ ಪಕ್ಷವೇ ಭಾರತೀಯ ಜನತಾ ಪಕ್ಷ ಸೇರಲು ಸಿದ್ಧವಾಗಿ ಕುಳಿತಿದೆ ಎಂದು ರಾಜ್ಯ ಸಚಿವ ಹಾಗೂ ಎಸ್ಬಿಎಸ್ಪಿ (ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ) ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸಮಾಜವಾದಿ ಪಕ್ಷ ವಿಭಜನೆಯಾಗಲಿದ್ದು, ಪಕ್ಷದ ಪ್ರಮುಖ ನಾಯಕರಾದ ರಾಮ್ ಗೋಪಾಲ್ ಯಾದವ್ ಈಗಾಗಲೇ ಕೇಂದ್ರ ಗೃಹ ಸಚಿವ …
Read More »
Laxmi News 24×7