Breaking News

Uncategorized

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಚಿಕ್ಕಬಳ್ಳಾಪುರ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿಯಾಗಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ …

Read More »

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ. ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು …

Read More »

5 ವರ್ಷದವರೆಗೆ ಯಾಕೆ ಬಾಯಿ ಮುಚ್ಚಿಕೊಂಡಿದ್ರು? ‘ ಸಂತ್ರಸ್ತೆ ವಿರುದ್ಧ ತಿರುಗಿಬಿದ್ದ ಕುಟುಂಬ

ಹಾಸನ : ಲೈಂಗಿಕ ದೌರ್ಜನ್ಯ ಆರೋಪ(Sexual harassment case) ವಿಚಾರದಲ್ಲಿ ಟ್ವಿಸ್ಟ್‌ ಸಿಕ್ಕಿದ್ದು ಸಂತ್ರಸ್ತೆ(Victim) ದೂರಿನ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಘೋಷ್ಟಿ ನಡೆಸಿದ ಸಂತ್ರಸ್ತೆಯ ಗಂಡನ ತಾಯಿ ಮತ್ತು ಕುಟುಂಬಸ್ಥರು, ಸಂತ್ರಸ್ತೆ ಹಾಗೂ ದೂರುದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದೇವೇಗೌಡರು ಕುಟುಂಬದವರು ನಮಗೆ ಎಂದೂ ಮೋಸ ಮಾಡಿಲ್ಲ, ನಮಗೆ ಒಳ್ಳೆಯದನ್ನೇ ಮಾಡಿದ್ದಾರೆ, ಭವಾನಿ ಅಮ್ಮ ನಮಗೆ ತುಂಬಾ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ದೂರು ನೀಡಿದ ಮಹಿಳೆ …

Read More »

ಚಿನ್ನದ ಬೆಲೆ ಭರ್ಜರಿ ಇಳಿಕೆ

ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿರುವ ಮಹಿಳೆಯರಿಗೆ ಹಾಗೂ ಚಿನ್ನವನ್ನು ತುಂಬಾ ಇಷ್ಟಪಡುವ ಜನರಿಗೆ ಇಲ್ಲಿದೆ ಗುಡ್‌ನ್ಯೂಸ್. ಯಾಕಂದ್ರೆ ದಿಢೀರ್ ಚಿನ್ನದ ಬೆಲೆ ಇಳಿಕೆ ಆಗಿದೆ. ಹಾಗಾದ್ರೆ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ? ಸದ್ಯ ಚಿನ್ನವನ್ನ ಖರೀದಿ ಮಾಡಬಹುದಾ? ಬನ್ನಿ ತಿಳಿಯೋಣ. ಏಪ್ರಿಲ್ ತಿಂಗಳಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಬಂದಿತ್ತು, ಹಾಗೇ ಭರ್ಜರಿ ಏರಿಕೆಯನ್ನ ಕೂಡ ಕಂಡಿತ್ತು ಚಿನ್ನ. ಆದ್ರೆ ಇದೀಗ ನಿಧಾನವಾಗಿ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ …

Read More »

ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ರಂಗೇರಿದ ಜಂಗೀ ಕುಸ್ತಿಗಳು

ಮೂಡಲಗಿ: ಎತ್ತ ಕಣ್ಣು ಹಾಯಿಸಿದರೂ ಕುಸ್ತಿ ಪೈಲ್ವಾನರು ಮತ್ತು ಪೈಲ್ವಾನರನ್ನು ಹುರದುಂಬಿಸುವ ಕುಸ್ತಿ ಅಭಿಮಾನಗಳು. ಒಂದೊಂದು ಜೋಡಿಗಳು ಕುಸ್ತಿ ಅಖಾಡಕ್ಕೆ ಇಳಿಯುತ್ತಿದ್ದಂತೆ ಸೇರಿದ ಜನರು ಹೋ ಎಂದು ಚಪ್ಪಾಳೆಯೊಂದಿಗೆ ಪೈಲ್ವಾನರನ್ನು ಬರಮಾಡಿಕೊಳ್ಳುತ್ತಿದ್ದರು. ‘ಹಾಕು ಪೇಚು, ಒಗಿ ಡಾವು, ಚಿತ್ ಮಾಡು ಎಂದೆಲ್ಲ ಚಪ್ಪಾಳೆ ತಟ್ಟೆ, ಸಿಳ್ಳೇ ಹಾಕಿ ಜಟ್ಟಿಗಳನ್ನು ಸೇರಿದ ಪ್ರೇಕ್ಷಕರು ಹುರುದುಂಬಿಸುತ್ತಿದ್ದರು’ ಇದು ಮೂಡಲಗಿ ತಾಲ್ಲೂಕಿನ ಪವಾಡ ಪ್ರಸಿದ್ಧಿಯ ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಹಣಹಣಿಯ ಚಿತ್ರಣ. …

Read More »

ಮೇ.10ರಂದು SSLC ರಿಸಲ್ಟ್

ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ. 2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು. ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 …

Read More »

ಪ್ರಜ್ವಲ್ ರೇವಣ್ಣ ಬಗ್ಗೆ ಅಮಿತ್ ಶಾ ಕೆಂಡಾಮಂಡಲ,

ಗುವಾಹಟಿ: ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣದ (Prajwal Revanna Sex Scandal Case) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೆಂಡಾಮಂಡಲವಾಗಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣವನ್ನು ನಾವು ಸಹಿಸಲ್ಲ, ಇದೊಂದು ಆಘಾತಕಾರಿ ಘಟನೆ” ಎಂದು ಸ್ಪಷ್ಟಪಡಿಸಿದ್ದಾರೆ.   ಬಿಜೆಪಿಯ ನಿಲುವು ಬಹಳ ಸ್ಪಷ್ಟವಾಗಿದ್ದು, ಭಾರತೀಯ ಸ್ತ್ರೀಯರ ಬಗ್ಗೆ ನಮ್ಮ …

Read More »

ಮಹಿಳಾ ಹೋರಾಟಗಾರ್ತಿ ‘ಪ್ರಿಯಾ ಸವದಿ’ ಪೆನ್‌ ಡ್ರೈವ್‌ಕೇಸ್‌ನಲ್ಲಿ ಹೋರಾಟ ಮಾಡಲು ಹಾಸನಕ್ಕೆ ಎಂಟ್ರಿ?

ಬೆಂಗಳೂರು: ನಾಡಿನ ಹೆಮ್ಮೆಯ ನಟಿ, ಟಿಕ್‌ ಟಾಕ್‌ ಸ್ಟಾರ್‌, ಮಹಿಳಾ ಪರಹೋರಾಟಗಾರ್ತಿ, ನೇಹಾ ಪ್ರಕರಣದಲ್ಲಿ ದೊಡ್ಡದಾಗಿ ಗುರುತಿಸಿಕೊಂಡಿದ್ದ ಪ್ರಿಯಾ ಸವದಿ ಅವರು ಹಾಸನ ಪೆನ್‌ ಡ್ರೈವ್‌ ಕೇಸ್‌ನಲ್ಲಿ ನೊಂದ ಮಹಿಳೆಯರ ಪರ ಹೋರಾಟ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನೇಹಾ ಹತ್ಯೆಯಾದ ಬಳಿಕ ಹತ್ಯೆ ವಿರುದ್ದ, ಹಿಂದೂ ಪರವಾಗಿ ಮಾತನಾಡಿ ಎಲ್ಲರ ಚಪ್ಪಳ ಗಿಟ್ಟಿಸಿಕೊಂಡಿದ್ದ ಪ್ರಿಯ ಸವದಿ ಅವರು ಈಗ ಹಾಸನದಲ್ಲಿ ಆಗಿರುವ ಮಹಿಳೆಯರ ಪರವಾಗಿ ಹೋರಾಟ ನಡೆಸಲಿ ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ …

Read More »

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು ಇದಕ್ಕಾಗಿ ಪ್ರತಿ ವರ್ಷ NCERT ಪಠ್ಯಪುಸ್ತಕ ಪರಿಷ್ಕರಿಸಿ ಹೊಸ ವಿಚಾರಗಳನ್ನು ಸೇರಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗೆ ಕೇಂದ್ರ ಶಿಕ್ಷಣ ಇಲಾಖೆ ಸಲಹೆ ನೀಡಿದೆ. ಹಿಂದಿನಿಂದಲೂ NCERT ಪಠ್ಯಕ್ರಮದಲ್ಲಿ ಕಾಲಕಾಲಕ್ಕೆ ಪಠ್ಯ ಪರಿಷ್ಕರಣೆಯಂತಹ ಪದ್ಧತಿ ಇರಲಿಲ್ಲ. ಈಗ ಕಾಲ …

Read More »

ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ. ಅಪಾರ ಸೊತ್ತು ನಾಶ

ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು‌.ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.

Read More »