Breaking News

Uncategorized

ಬೈಲಹೊಂಗಲದಲ್ಲಿ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

ಬೈಲಹೊಂಗಲ: ಬಸವ ತತ್ತ್ವದಡಿ ನಡೆಯುವ ಮೂಲಕ ಸದಸ್ಯರ ಅಭಿವೃದ್ಧಿ ಜತೆಗೆ ಅಲ್ಪಾವಧಿಯಲ್ಲೇ ಹೆಮ್ಮರವಾಗಿ ಬೆಳೆದಿರುವ ನಗರದ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ಮಾದರಿಯಾಗಿದೆ ಎಂದು ಮುರಗೋಡ ಮಹಾಂತ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ ಹೇಳಿದರು. ನಗರದಲ್ಲಿ ಬುಧವಾರ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಸ್ಥಳಾಂತರಿಸಿದ ನೂತನ ಕಚೇರಿ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಾಜಿ ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಸಂಘದ ಸಂಸ್ಥಾಪಕ ವಿಜಯ ಮೆಟಗುಡ್ಡ …

Read More »

ಐಪಿಎಲ್‌ ವೀಕ್ಷಕರ ಸಂಖ್ಯೆ ಭಾರೀ ಹೆಚ್ಚಳ – ದಾಖಲೆ ಬರೆದ ಜಿಯೋಸ್ಟಾರ್

ಮುಂಬೈ: 2026ರ ಐಪಿಎಲ್ ಟೂರ್ನಿ ಪ್ಲೇ ಆಫ್ ಹಂತ ತಲುಪುತ್ತಿದ್ದು, ತಂಡಗಳ ನಡುವಿನ ಹಣಾಹಣಿ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಅಧಿಕೃತ ಪ್ರಸಾರ ಸಂಸ್ಥೆಗಳಾದ ಜಿಯೋಸ್ಟಾರ್, ಟಿವಿ ಮತ್ತು ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಾದ್ಯಂತ ವೀಕ್ಷಕರ ಸಂಖ್ಯೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಟೂರ್ನಿಯ ಒಟ್ಟಾರೆ ವೀಕ್ಷಕರ ಸಂಖ್ಯೆ ಬರೋಬ್ಬರಿ 110 ಕೋಟಿ ದಾಟಿದೆ. ಟಿವಿ ವೀಕ್ಷಣೆಯಲ್ಲಿ ಉತ್ತಮ ದಾಖಲೆ ಬರೆದಿದ್ದು, 50 ಕೋಟಿ ವೀಕ್ಷಕರ ಗಡಿಯತ್ತ ಮುನ್ನಡೆಯುತ್ತಿದೆ. ಇದೇ ವೇಳೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ …

Read More »

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

ನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ಸಿಜೆಐ ಸೂರ್ಯ ಕಾಂತ್‌  ಅವರು ಕಿಡಿಕಾರಿದ್ದಾರೆ. ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ವಕೀಲರೊಬ್ಬರನ್ನು ಹಿರಿಯ ವಕೀಲರನ್ನಾಗಿ ನೇಮಿಸುವ ಬಗ್ಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ …

Read More »

ಇಡೀ ಕುಟುಂಬಕ್ಕೆ ವಾರಕ್ಕೆ 500 ರೂ. ಸಂಬಳ, ಶೆಡ್‌ನಲ್ಲಿ ಕೂಡಿ ಹಾಕಿ ಕೆಲಸ – 37 ಮಂದಿ ಜೀತದಿಂದ ಮುಕ್ತಿ

ಬಳ್ಳಾರಿ: ಹೊಸಪೇಟೆ  ತಾಲೂಕಿನ ನಂದಿಬಂಡಿಯಲ್ಲಿ ಜೀತಕ್ಕೆ ನೇಮಿಸಿಕೊಂಡಿದ್ದ ಒಡಿಶಾದ 37 ಮಂದಿಯನ್ನು ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ.ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಬೆಳಗಾವಿಯ ಸ್ಪಂದನ ಸಂಸ್ಥೆ ವಿಜಯನಗರ  ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿ, ಕಾರ್ಮಿಕರನ್ನು ಜೀತದಿಂದ ಮುಕ್ತಿಗೊಳಿಸಿದ್ದಾರೆ. ಪ್ರತಿ ಕುಟುಂಬಕ್ಕೆ 40,000 ರೂ. ಹಣ …

Read More »

ಕೇಸರಿ ಶಾಲು ಹಾಕೊಂಡು ಶಾಲಾ-ಕಾಲೇಜಿಗೆ ಬನ್ನಿ – ಬಿಜೆಪಿಗರಿಗೆ ಮಂಥರ್ ಗೌಡ ಸವಾಲ್‌

ಮಡಿಕೇರಿ: ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ  ಅಚ್ಚರಿಯ ಹೇಳಿಯನ್ನು ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಹಿಜಬ್‌ಗೆ ಅವಕಾಶ ನೀಡಿ, ಕೇಸರಿ ಶಾಲು ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರಾಜ್ಯಾದ್ಯಂತ ಪರ ವಿರೋಧಗಳು ಚರ್ಚೆ ನಡೆಯುತ್ತಿದೆ. ಇದರ ನಡುವೆ ಶಾಸಕ ಮಂಥರ್ ಗೌಡ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿ, ದಯವಿಟ್ಟು ಮಕ್ಕಳು ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಹಾಕಿಕೊಂಡೆ ಬನ್ನಿ …

Read More »

ಧಾರಾಕಾರ ಮಳೆಗೆ ನಾಲ್ವರು ದುರ್ಮರಣ – ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ (Sindagi) ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್‌ ಲಕ್ಷ ಪರಿಹಾರ ಘೋಷಿಸಿದ್ದಾರೆ. ಸಿಂದಗಿ  ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ. …

Read More »

KRS ಜಲಾಶಯ ನೀರಿನ ಮಟ್ಟ ಕುಸಿತ – 3 ವರ್ಷಗಳ ನಂತ್ರ ಪುರಾತನ ದೇವಾಲಯ ಗೋಚರ

ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೆ.ಆರ್ ಸಾಗರ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಶ್ರೀ ನಾರಾಯಣಸ್ವಾಮಿ ದೇಗುಲ  2023ರ ನಂತರ ಮತ್ತೆ ಸಂಪೂರ್ಣ ಗೋಚರವಾಗಿದೆ. ಕೆ.ಆರ್ ಸಾಗರ  ಹಿನ್ನೀರಿನ ಬೋರೆ ಆನಂದೂರು ಬಳಿಯ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಶ್ರೀ ನಾರಾಯಣಸ್ವಾಮಿ ದೇವಾಲಯ 3 ವರ್ಷಗಳ ನಂತರ ಕಾಣಿಸುತ್ತಿದೆ. ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣ ಸಂದರ್ಭದಲ್ಲಿ ಸ್ಥಳಾಂತರವಾಗಿದ್ದ ದೇಗುಲದ ಗೋಪುರ ಮತ್ತು ಕಂಬಗಳು ಉಳಿದಿವೆ. …

Read More »

ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ …

Read More »

ಟ್ರ‍್ಯಾಕ್ಟರ್-ಲಾರಿ ನಡುವೆ ಭೀಕರ ಅಪಘಾತ – ಮಗು ಸೇರಿ ಏಳು ಮಂದಿಯ ದುರಂತ ಅಂತ್ಯ

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ  ಜಿಲ್ಲೆಯ ಮುನಿರಾಬಾದ್  ಬಳಿ ನಡೆದಿದೆ.ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತರು. 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ …

Read More »

ತೈಲ ಮಿತ ಬಳಕೆಗೆ ಮೋದಿ ಕರೆ – ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿನ ಅಶಾಂತಿಯಿಂದಾಗಿ, ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಜೊತೆಗೆ, ತೈಲದ ಅಭಾವವೂ ಎದುರಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ಅವರು ಮಿತವ್ಯಯದ ಕರೆ ನೀಡಿದ್ದರು. ಪ್ರಧಾನಿಯವರ ಕರೆಗೆ ರಾಜ್ಯದ ನಾಯಕರು ಸ್ಪಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ತಮ್ಮ ಬೆಂಗಾವಲು ವಾಹನಗಳನ್ನ ಕಡಿತ ಮಾಡಿದ್ದಾರೆ. ಕೊಡಗು ಜಿಲ್ಲೆಯ ಪೊಲೀಸ್‌ ಇಲಾಖೆಯು ಕ್ಯಾಬಿನೆಟ್‌ ದರ್ಜೆಯ ಭದ್ರತೆ ಒದಗಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು …

Read More »