Breaking News

Uncategorized

ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ

ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಯತ್ನದಿಂದ ಕಾರ್ಯಾರಂಭ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ಮಂಜೂರು ಸಚಿವೆ ಹೆಬ್ಬಾಳ್ಕರ ಅಭಿವೃದ್ಧಿ ಕಾರ್ಯಕ್ಕೆ ನಾಗರಿಕರಿಂದ ಕೃತಜ್ಞತೆ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಯ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು ಕಳೆದ ಏಳು ವರ್ಷಗಳಿಂದ ಈ ಪ್ರದೇಶದಲ್ಲಿ ಅನೇಕ …

Read More »

ಹಾವು ಕಡಿತಕ್ಕೆ ನೂತನ ಚಿಕಿತ್ಸಾ ಕ್ರಮ ಕಂಡುಹಿಡಿದ ಹುಬ್ಬಳ್ಳಿ ಕೆಎಂಸಿಆರ್​​ಐ ವೈದ್ಯರು

ಹುಬ್ಬಳ್ಳಿ : ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್​​ಐ) ಹಾವು ಕಡಿತಕ್ಕೊಳಗಾದವರಿಗೆ ಸುಧಾರಿತ ಚಿಕಿತ್ಸಾ ಕ್ರಮವನ್ನು‌ ಕಂಡುಹಿಡಿದಿದೆ. ಹಾವಿನ ವಿಷ ಅರಿತು ಚಿಕಿತ್ಸೆ ನೀಡುವ ಸಂಶೋಧನೆ ಮಾಡಲಾಗಿದ್ದು, ಇದು ದೇಶದಲ್ಲಿಯೇ ಪ್ರಥ‌ಮ ಸಂಶೋಧನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಕ್ತ ಪರಿಶೀಲಿಸಿ ಚಿಕಿತ್ಸೆ: ಹಾವು ಕಡಿತಕ್ಕೊಳಗಾಗಿ ಕೆಎಂಸಿಆರ್​​ಐಗೆ ಬರುವವರಲ್ಲಿ ಕೆಲವರು ಕಚ್ಚಿದ ಹಾವಿನೊಟ್ಟಿಗೆ ಬರುತ್ತಿದ್ದರು. ವೈದ್ಯರಿಗೆ ತಾವು ತಂದ ಹಾವು ನೀಡಿ ಗಾಬರಿ ಹುಟ್ಟಿಸುತ್ತಿದ್ದರು. ಈಗ ಹಾಗೇನಿಲ್ಲ, ಹಾವು ಕಡಿದ ವ್ಯಕ್ತಿಯಿಂದ …

Read More »

ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯ ಮನೆ ಮುಂದೆ ಹೈಡ್ರಾಮ ಮಾಡಿರುವ ಯುವಕನೋರ್ವ ಯುವತಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಆನಂದ್ ಕುಮಾರ್ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದಾನೆ. ಆ್ಯಸಿಡ್ ದಾಳಿಗೆ ತುತ್ತಾದ ಯುವತಿ ಪ್ರಾಣಾಪಾಯದಿಂದ …

Read More »

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ ಬೆಳಗಾವಿಯ ಕಾರಂಜಿ ಮಠದಲ್ಲಿ 288ನೆಯ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ “ಶರಣರ ವಚನಗಳಲ್ಲಿ ಆತ್ಮವಿಮರ್ಶೆ”ವಿಷಯ ಕುರಿತು ಉಪನ್ಯಾಸ ನೀಡಲಾಯಿತು ಸೋಮವಾರ ಬೆಳಗಾವಿ ಕಾರಂಜಿ ಮಠದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಶಿವಾನುಭವ ಘೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಮೂಡಲಗಿ ದಂತ ವೈದ್ಯ ಡಾ. ಸಂಜಯ ಸಿಂಧೆಹಟ್ಟಿ, ಶರಣರ ವಚನಗಳಲ್ಲಿರುವ ಜೀವನದ ಮೌಲ್ಯಗಳು ಬದುಕಿಗೆ ಸ್ಪೂರ್ತಿ ನೀಡಿ …

Read More »

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.

ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..! ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್. ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ . ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.

Read More »

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. ಇನ್ನೇನು ಶ್ರಾವಣ ಮಾಸವು ಸಮೀಪಸುತ್ತಿದೆ. ಹಬ್ಬಹರಿದಿಗಳಿಗೆ ಬಟ್ಟೆಗಳನ್ನು ವಿಶೇಷ ಧಮಾಕಾ ಆಫರ್’ನಲ್ಲಿ ಖರೀದಿಸಬೇಕೆಂದು ಯೋಚಿಸುತ್ತಿದ್ದರೇ, ಬೆಳಗಾವಿಯ ಕಾರ್ತಿಕಾ ಸಾರೀಸ್’ಗೆ ಭೇಟಿ ನೀಡಿರಿ. ಮಾನ್ಸೂನ್ ಧಮಾಕಾ ಆಫರ್ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಜನರ ಪ್ರೀತಿ ವಿಶ್ವಾಸಕ್ಕೆ ಕಾರಣವಾದ ಬೆಳಗಾವಿಯ ಕಾರ್ತಿಕಾ ಸಾರೀಜ್ ಪ್ರತಿವರ್ಷದಂತೆ …

Read More »

ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ – ಶೀಘ್ರದಲ್ಲೇ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೃಹತ್‌ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ …

Read More »

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

ಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 40 ದಿನಗಳ ಅಂತರದಲ್ಲಿ ಬರೋಬ್ಬರಿ 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವಿಗೀಡಾಗುವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿಯವರು ತಜ್ಞರ ಸಮಿತಿ ರಚಿಸಿದ್ದು, ಸರಣಿ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಡಿಸಿ ಲತಾ ಕುಮಾರಿ ಮಾತನಾಡಿ, ಚಿಕ್ಕ …

Read More »

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ ಗ್ರೀನ್ ಹೋಟೆಲ್ ಸಮೀಪ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಟ್ಟಲವಾಡಿ ಗ್ರಾಮದ ವಿನಾಯಕ ವಿಜಯ ಕದಮ (21) ಎಂಬ ಟೆಂಪೋ ಚಾಲಕ, ಚೋರ್ಲಾ ಮೂಲಕ ಜಾಂಬೋಟಿ-ಬೆಳಗಾವಿ ಕಡೆಗೆ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಕ್ಯಾಂಟರ್ …

Read More »

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ ಕುಪ್ಪಟಗಿರಿ ಕ್ರಾಸ್ ಬಳಿ ನೂತನ ಟ್ರಾನ್ಸಫಾರ್ಮರ್’ನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ತಾಂತ್ರಿಕ ತೊಂದರೆ ನಿವಾರಣೆಗೆ ಈ ಟ್ರಾನ್ಸಫಾರ್ಮರ್ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಜನಪ್ರತಿನಿಧಿಗಳು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಡಿಗುಂಜಿ ಪಿಕೆಪಿಎಸ್ ಅಧ್ಯಕ್ಷ ಪ್ರಕಾಶ …

Read More »