Breaking News

Uncategorized

ತಮಿಳುನಾಡಿಗೆ ನೀರು ಬಿಡಲು ಆದೇಶ; ಸರ್ವಪಕ್ಷ ಸಭೆ ಕರೆಯಲಿ: ಆರ್. ಅಶೋಕ್‌

ಬೆಂಗಳೂರು : ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಆದೇಶ  ಮಾಡಿರೋದು ರಾಜ್ಯ ಸರ್ಕಾರದ ವೈಫಲ್ಯ. ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ವಿಪಕ್ಷ ನಾಯಕ ಅಶೋಕ್  ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡಿಲ್ಲ. ನೀರಾವರಿ ಸಚಿವ ರಾಮಲಿಂಗಾ …

Read More »

ಎಸ್‌ಐಆರ್ 3 ತಿಂಗಳು ವಿಸ್ತರಿಸಿ – ದೇವನೂರು, ಗುಹಾ ಸಲ್ಲಿಸಿದ್ದ PIL ವಜಾ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯನ್ನ ಒಂದರಿಂದ ಮೂರು ತಿಂಗಳವರೆಗೆ ವಿಸ್ತರಣೆ ಕೋರಿ ಸಾಹಿತಿ ದೇವನೂರು ಮಹಾದೇವ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಸೇರಿದಂತೆ ಇನ್ನಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಕೆ.ಎಸ್.ಹೇಮಲತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಎಸ್‌ಐಆರ್ ಅವಧಿ ವಿಸ್ತರಣೆ ಕೇಂದ್ರ ಚುನಾವಣೆ ಆಯೋಗಕ್ಕೆ ಬಿಟ್ಟ ವಿಚಾರ. …

Read More »

ಪ್ರಧಾನ್‌ ಅವರನ್ನು ಹುದ್ದೆಯಿಂದ ತೆಗೆಯುವ ಮೂಲಕ ಪ್ರಧಾನಿಯನ್ನು ಬಚಾವ್‌ ಮಾಡಿದೆ: ಅಖಿಲೇಶ್‌ ಯಾದವ್‌

ನವದೆಹಲಿ: ಸರ್ಕಾರವು ಒಬ್ಬ ‘ಪ್ರಧಾನ್’ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಸ್ವತಃ ‘ಪ್ರಧಾನ ಮಂತ್ರಿ’ಯವರನ್ನು ಬಚಾವ್ ಮಾಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ, ಕನ್ನೌಜ್ ಸಂಸದ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಯುವಜನರ ಒಗ್ಗಟ್ಟು ಮತ್ತು ಮನೋಬಲಕ್ಕೆ ನಾನು ತಲೆಬಾಗುತ್ತೇನೆ. ಯುವಕರ ಆಕ್ರೋಶಕ್ಕೆ ಬೆದರಿ ಸರ್ಕಾರ …

Read More »

ಆ.1 ರಿಂದ ವಾಹನಗಳ ಬೆಲೆ ದುಬಾರಿ – ಬಾಡಿಗೆದಾರರಿಗೂ ತಟ್ಟಲಿದೆ ಬೆಲೆ ಏರಿಕೆ ಬಿಸಿ

ನವದೆಹಲಿ: ದಿನಕ್ಕೊಂದು ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರ ಜೇಬು ಸುಡುತ್ತಿದೆ. ಇದರ ನಡುವೆ ಆ.1ರಿಂದ ಹೊಸ ವಾಹನಗಳ ಬೆಲೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಟ್ರಾವೆಲ್ಸ್ ಮಾಲೀಕರ ಅಸೋಸಿಯೇಷನ್‌ಗಳು ಕೂಡ ತಮ್ಮ ಬಾಡಿಗೆಯನ್ನ ಹಚ್ಚಳ ಮಾಡಲು ಮುಂದಾಗಿವೆ. ವಾಹನ ತಯಾರಕ ಕಂಪನಿಗಳು ವಾಹನಗಳ ಬೆಲೆಗಳನ್ನು ಏರಿಕೆ ಮಾಡಲು ಮುಂದಾಗಿವೆ. ಯುದ್ದದಿಂದ ಜಾಗತಿಕ ಮಟ್ಟದಲ್ಲಿ ಆದ ಬದಲಾವಣೆ, ಹಣದುಬ್ಬರ, ಉಕ್ಕು, ಅಲ್ಯೂಮಿನಿಯಂ, ರಬ್ಬರ್, ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ಚಿಪ್‌ಗಳು, ಬ್ಯಾಟರಿಗಳು ಹಾಗೂ ಬಿಡಿಭಾಗಗಳ ದರ …

Read More »

‌ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆ ಮಹಿಳೆಗೆ 1.75 ಕೋಟಿ ನಾಮ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ  ಪರಿಚಯವಾದ ವ್ಯಕ್ತಿಯೊಬ್ಬನ ಮಾತು ನಂಬಿ ಯಶವಂತಪುರದ ಮಹಿಳೆಯೊಬ್ಬರು ದುಬಾರಿ ಸೀರೆ ಹಾಗೂ ವಜ್ರಾಭರಣದ ಗಿಫ್ಟ್ ಆಸೆಗೆ ಬಿದ್ದು ಬರೋಬ್ಬರಿ 1.75 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸಾಹಿಲ್ ಜುಗ್ಗಲ್ ಎಂಬಾತ ಫೇಸ್‌ಬುಕ್ ಮೂಲಕ ಮಹಿಳೆಗೆ ಪರಿಚಯವಾಗಿದ್ದಾನೆ. ಬಳಿಕ ಇಬ್ಬರೂ ಮೊಬೈಲ್ ನಂಬರ್‌ ಪಡೆದು ಸಂಪರ್ಕ …

Read More »

ಆ.1 ರಂದು ಮೈಸೂರಿಗೆ ಮೋದಿ – 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ, ಸಾಂಸ್ಕೃತಿಕ ಯುವಕೇಂದ್ರ ಉದ್ಘಾಟನೆ

ಮೈಸೂರು: ಆಗಸ್ಟ್‌ 1 ರಂದು ಪ್ರಧಾನಿ ನರೇಂದ್ರ ಮೋದಿ  ಅವರು ಮೈಸೂರಿಗೆ ಭೇಟಿ ನೀಡಲಿದ್ದು, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ಇಲ್ಲಿ ನೆಲೆಸಿದ್ದರು ಎನ್ನುವ ನೆನಪಿಗಾಗಿ ಸ್ಮಾರಕ  ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದ್ದು, …

Read More »

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ (CBI) ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಹಗರಣವು ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದೊಡ್ಡ ಆಘಾತ ನೀಡಿವೆ. ಇಂತಹ ಸಂದರ್ಭದಲ್ಲಿ ಕೆಪಿಎಸ್‍ಸಿಯೇ ತನ್ನ ವಿರುದ್ಧದ ಆರೋಪಗಳನ್ನು ಆಂತರಿಕವಾಗಿ ತನಿಖೆ ನಡೆಸುವುದರಿಂದ ಸತ್ಯ ಹೊರಬರುವುದಿಲ್ಲ. ಸಾರ್ವಜನಿಕರ ವಿಶ್ವಾಸವೂ ಮೂಡುವುದಿಲ್ಲ ಎಂದು …

Read More »

ದಸರಾ ಉದ್ಘಾಟನೆ ರೇಸ್‌ನಲ್ಲಿ ಕ್ರಿಕೆಟ್ ಸಾಧಕರ ಹೆಸರು – ಸಿಎಂ ನಿರ್ಧಾರವೇ ಅಂತಿಮ: ಯತೀಂದ್ರ

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರ ಹೆಸರನ್ನು ಸಿಎಂ ಡಿಕೆ ಶಿವಕುಮಾರ್ ಅವರೇ ಆಯ್ಕೆ ಮಾಡಲಿದ್ದು, ಅವರ ನಿರ್ಧಾರವೇ ಅಂತಿಮ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಸಿದ್ಧತಾ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆ ವಿಚಾರದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ನಿರ್ಧಾರ ಅಂತಿಮ. ನಾವೆಲ್ಲರೂ ಉದ್ಘಾಟಕರ ಆಯ್ಕೆಯನ್ನು ಅವರಿಗೆ ಬಿಟ್ಟಿದ್ದೇವೆ. ಶಾಸಕರು ಒಂದಷ್ಟು ಸಲಹೆ ಕೊಟ್ಟಿದ್ದಾರೆ. ಯಾವುದೇ ಹೆಸರನ್ನು ಆಯ್ಕೆ ಮಾಡಿದ್ರು …

Read More »

ಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರು ಕೇಳಿದ ಪ್ರಶ್ನೆಗೆ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು ಲಿಖಿತ ಉತ್ತರ ನೀಡಿದ್ದಾರೆ. ಕಾವೇರಿ ನದಿ ನೀರು (Cauvery River) ವಿವಾದಕ್ಕೆ ಸಂಬಂಧಿಸಿದಂತೆ 2018ರಲ್ಲಿ ನೀಡಲಾದ ಸುಪ್ರೀಂ ಕೋರ್ಟ್ (Suprme Court) ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣ ಕಾರ್ಯ …

Read More »

ಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು: ಶಿವಲಿಂಗೇಗೌಡ ಭವಿಷ್ಯ

ಚಿಕ್ಕಬಳ್ಳಾಪುರ: ಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು ಎಂದು ಶಾಸಕ ಶಿವಲಿಂಗೇಗೌಡ  ಅವರು ಭವಿಷ್ಯ ನುಡಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ದೂರ ಆಗುತ್ತೇನೆ ಎಂದು ಹೇಳಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ, ರಾಜ್ಯ ಸಭೆಗೆ ಆಯ್ಕೆ ಮಾಡುತ್ತಾರೆ. ಖರ್ಗೆ ಬಿಟ್ಟ ಮೇಲೆ ಅವರು ವಿರೋಧ ಪಕ್ಷದ ನಾಯಕರೇ ಆಗಬಹುದು. ಒಂದು ದೊಡ್ಡ …

Read More »