Breaking News

Uncategorized

ರಕ್ತದಾನದಿಂದ ಆರೋಗ್ಯ ವೃದ್ಧಿ’

ಉಪ್ಪಿನಬೆಟಗೇರಿ: ನಿಯಮಿತ ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಧಾರವಾಡ ರಕ್ತನಿಧಿ ಕೇಂದ್ರದ ಆರೋಗ್ಯಾಧಿಕಾರಿ ಎಂ.ಎಂ.ಹಿರೇಮಠ ಹೇಳಿದರು. ಗ್ರಾಮದ ಮೂರುಸಾವಿರ ವಿರಕ್ತಮಠದಲ್ಲಿ ಶುಕ್ರವಾರ ಬಸವ ಜಯಂತಿ ಹಾಗೂ ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಪೀಠಾಧಿಪತಿ ಕುಮಾರ ವಿರೂಪಾಕ್ಷ ಸ್ವಾಮೀಜಿ ಅವರ 50ನೇ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು ಸರ್ಕಾರ ಪ್ರಾಥಮಿಕ ಹಂತದ ಶಿಕ್ಷಣದ ಪಠ್ಯ ಪುಸ್ತಕದಲ್ಲಿ ರಕ್ತದಾನದ ಕುರಿತ ವಿಷಯ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದರು. …

Read More »

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು:ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಸಂಘಗಳಿಂದ ಆಹ್ವಾನಿಸಿದ ಅರ್ಜಿಗಳಲ್ಲಿ ಶೇ.90 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ರಾಜ್ಯ ಸಂಘಕ್ಕೆ ಕಳುಹಿಸಿಕೊಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಸಂಘದ ಸದಸ್ಯರ ಮಕ್ಕಳಾಗಿದ್ದು ಉತ್ತಮ ಸಾಧನೆ …

Read More »

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್​

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಬಳಿ ಬಂಧಿಸಿದ್ದು, ಬಂಧಿತನನ್ನು ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಕರಣದ ಹಿನ್ನೆಲೆ? 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ …

Read More »

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲಿಸಿದ ಎಸ್‌ಐಟಿ!

ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್​​ ರೇವಣ್ಣ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮೂರನೇ ಎಫ್​ಐಆರ್ ದಾಖಲಾಗಿರುವ ಸೆಕ್ಷನ್​ ಪ್ರಜ್ವಲ್​ಗೆ ಕಾನೂನು ಕಂಟಕ ಎದುರಾಗಿದೆ.   ಸಂತ್ರಸ್ತೆಯೊಬ್ಬರ ಹೇಳಿಕೆ ಆಧರಿಸಿ ಅತ್ಯಾಚಾರ ಪ್ರಕರಣ ದಾಖಲು ಮಾಡಲು ವಿಶೇಷ ತನಿಖಾ ತಂಡ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಒಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು …

Read More »

ಕಸದ ರಾಶಿಯಲ್ಲಿ ವೋಟರ್ ಐಡಿ

ಮುಂಬೈ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನ ವಿವಿಧ ಹಂತಗಳಲ್ಲಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಸದ ರಾಶಿಯಲ್ಲಿ ಬಿದ್ದಿದ್ದ ಮತದಾರರ ಗುರುತಿನ ಚೀಟಿಯನ್ನು ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಕೂಡಲೇ ಈ ವಿಷಯವನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು. ಇದರಿಂದ ಹಿರಿಯ ಅಧಿಕಾರಿಗಳು ಆ ವೋಟರ್ ಐಡಿಗಳನ್ನು ವಶಕ್ಕೆ ಪಡೆದು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಕಸದ ರಾಶಿಯಲ್ಲಿ ವೋಟರ್ ಐಡಿ ಇರುವ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣಕಾಂತ್ …

Read More »

SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ಆಕೆಯ ರುಂಡವನ್ನು ಕೊಂಡೊಯ್ದಿದ್ದ ಆರೋಪಿ ಮೊನ್ನಂಡ ಪ್ರಕಾಶ್​ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಬಾಲಕಿಯ ತಲೆ ಪತ್ತೆಯಾಗಿಲ್ಲ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಮೃತದೇಹ ಪತ್ತೆಯಾಗಿದೆ. ಇನ್ನು ಬಾಲಕಿಯ ರುಂಡಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. 16 ವರ್ಷದ ಬಾಲಕಿಗೂ 35 ವರ್ಷದ ಆರೋಪಿಗೂ ಮದುವೆ ಮಾಡಿಸಲು …

Read More »

ಪೆನ್ ಡ್ರೈವ್’ ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್ : ಬಿಜೆಪಿ ಮುಖಂಡ ದೇವರಾಜೇಗೌಡ ನಾಪತ್ತೆ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುಗುಗಳನ್ನು ಪಡೆಯುತ್ತಿದ್ದು, ಇದೀಗ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್‌ಐಆರ್ ದಾಖಲಾದ ಬೆನ್ನಲ್ಲಿಯೇ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಸಿಎಂ ಡಿಕೆ …

Read More »

ಅರವಿಂದ್ ಕೇಜ್ರಿವಾಲ್‌’ಗೆ ಮಧ್ಯಂತರ ಜಾಮೀನು:

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ 2024 ರ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಹಾಗಾದ್ರೆ ಸುಪ್ರೀಂ ಕೋರ್ಟ್ ಜಾಮೀನು ನೀಡೋದಕ್ಕಾಗಿ ವಿಧಇಸಿದಂತ ಷರತ್ತುಗಳೇನು ಅಂತ ಮುಂದೆ ಓದಿ.   ಜೂನ್ 5 ರಂದು ಮಧ್ಯಂತರ ಜಾಮೀನು ನೀಡುವಂತೆ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮೂಲಕ …

Read More »

ಸೋಲಿನ ಭೀತಿಯಿಂದ ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ ಮೋದಿ, ಶಾಗೆ ಆತಂಕ : ಖರ್ಗೆ

ಹೈದರಾಬಾದ್: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿ ಅಮಿತ್ ಶಾ ‘ಆತಂಕ’ಕ್ಕೆ ಒಳಗಾಗಿದ್ದು, ಕಾಂಗ್ರೆಸ್ ಪಕ್ಷವನ್ನು ನಿಂದಿಸಲು ಪ್ರಾರಂಭಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.   ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಮತ ಕೇಳುವ ಬದಲು ಕಾಂಗ್ರೆಸ್ ನಾಯಕರನ್ನು ದೂಷಿಸುತ್ತಿದ್ದಾರೆ. ಮಾತ್ರವಲ್ಲ, ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ತಿರುಚುವ …

Read More »

ಶೇ 20ರಷ್ಟು ಕುಸಿತ: ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಕಳಪೆ ಸಾಧನೆ

ಬೆಳಗಾವಿ/ ಚಿಕ್ಕೋಡಿ: ‘ಶೈಕ್ಷಣಿಕ ಹಬ್‌’ ಎಂದು ಗುರುತಿಸಿಕೊಂಡ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗಣನೀಯವಾಗಿ ಇಳಿಕೆಯಾಗಿದ್ದು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆಯೇ ಎಂಬ ಆತಂಕ ತಲೆದೋರಿದೆ. ಪ್ರತಿಬಾರಿ ಪರೀಕ್ಷೆ ಫಲಿತಾಂಶದಲ್ಲಿ ಸಣ್ಣ-ಪುಟ್ಟ ವ್ಯತ್ಯಾಸ ಇರುತ್ತಿತ್ತು. ಆದರೆ, ಈ ಬಾರಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಫಲಿತಾಂಶ ಪ್ರಮಾಣ ಶೇ 20ಕ್ಕಿಂತ ಹೆಚ್ಚು ಕಡಿಮೆಯಾಗಿರುವುದು ನಿರಾಸೆಗೆ ಕಾರಣವಾಗಿದೆ. 2021-22ನೇ ಸಾಲಿನ ಪರೀಕ್ಷೆಯಲ್ಲಿ …

Read More »