Breaking News

Uncategorized

ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ‘ಕೈ’ ಶಾಕ್

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಕಣಕ್ಕಿಳಿದಿದ್ದಾರೆ .ಸಹಜವಾಗಿಯೇ ಇದು ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೆ …

Read More »

ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ ಮತಾಂತರವಾಗಲು ಒಪ್ಪದಿದ್ದಕ್ಕೆ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಸರಿಯಾಗಿ ನ್ಯಾಯ ಸಿಗಬೇಕು ಎಂದರೆ ಸಿಬಿಐಗೆ ವಹಿಸಬೇಕು. ಆಗ ಅನ್ಯಾಯ ಮಾಡಿದವರನ್ನು ತಲೆ ಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದರು.  ಅಮಿತ್ ಶಾ, ನೇಹಾ ಪ್ರಕರಣವನ್ನು ಭಾಷಣದಲ್ಲಿ ಉಲ್ಲೇಖಿಸಿದರು. ನೇಹಾ ಹಿರೇಮಠ ಕೇಸ್ ವೈಯಕ್ತಿಕ ವಿಚಾರ ಅಂತ ಕಾಂಗ್ರೆಸ್ ನವರು ಹೇಳಿದ್ದರು‌. ಇದು ವೈಯಕ್ತಿಕ ಅಲ್ಲ. ಮತಾಂತರ …

Read More »

ಭವಾನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್..!

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭವನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್ ನೀಡಿದೆ. ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಇಂದು ಸ್ಥಳೀಯರ ಪೊಲೀಸರು ಹಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಮನೆಗೆ ನೋಟಿಸ್ ನೀಡಿ ಹೋಗಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದು, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಸದ ಪ್ರಜ್ವಲ್ …

Read More »

ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

ಶಿವಮೊಗ್ಗ: ಈಶ್ವರಪ್ಪ ಮೋದಿ ಫೋಟೋವನ್ನು ಬಳಕೆ ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಬಿಜೆಪಿಯವರು ಕೋರ್ಟ್‌ ಹಾಗೂ ಚುನಾವಣೆ ಆಯೋಗಕ್ಕೆ ದೂರು ಕೊಟ್ಟಿದ್ದರು. ಆದರೆ ಚುನಾವಣೆ ಆಯೋಗ ಮತ್ತು ಕೋರ್ಟ್‌ ಬಿಜೆಪಿಯ ಆಕ್ಷೇಪಕ್ಕೆ ಸೊಪ್ಪು ಹಾಕಿಲ್ಲ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ವಿಶ್ವ ನಾಯಕರಾಗಿರುವ ಅವರ ಫೋಟೋ ಬಳಸಿಕೊಳ್ಳುವ ಅಧಿಕಾರ ಈಶ್ವರಪ್ಪಗೆ ಮಾತ್ರ ಅಲ್ಲ, ದೇಶದ …

Read More »

ಯತ್ನಾಳಮೂರು ಬಾರಿ ನಮಸ್ಕಾರ ಮಾಡಿದರೂ ಮೋದಿ ಇವರತ್ತ ತಿರುಗಿಯೂ ನೋಡಲಿಲ್ಲ : ಶಿವಾನಂದ ಪಾಟೀಲ

ಬಾಗಲಕೋಟೆ: ವಿಜಯಪುರದವರು ಇಲ್ಲಿನ ಡಿಸಿಸಿ, ಸಕ್ಕರೆ ಕಾರ್ಖಾನೆ ಮೇಲೆ ಕಣ್ಣಿಟ್ಟು ಬಂದಿದ್ದಾರೆ ಎಂಬ ಬಿಜೆಪಿ ಶಾಸಕ ಯತ್ನಾಳ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶಿವಾನಂದ ಪಾಟೀಲ, ನಾನು ಯಾವುದೇ ಸಂಘ-ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಬಂದಿಲ್ಲ.ಈ ಜಿಲ್ಲೆಯ ಜನರ ಸೇವೆ ಮಾಡಲು ಬಂದಿದ್ದೇನೆ ಎಂದು ತಿರುಗೇಟು ನೀಡಿದರು.   ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ 1987ರಿಂದ ರಾಜಕೀಯದಲ್ಲಿ ಇದ್ದೇನೆ. ಒಂದು ಸಣ್ಣ ಟಿಎಪಿಸಿಎಂಎಸ್‌ ನಿಂದ ರಾಜಕೀಯ ಆರಂಭಿಸಿದ್ದು, ಅದಕ್ಕೆ …

Read More »

‘ಇಂಡಿಯಾ’ ಅಧಿಕಾರಕ್ಕೆ; 10ರಿಂದ 15 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಪತನ: ಖೇರಾ

ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, 10 ರಿಂದ 15 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪವನ್‌ ಖೇರಾ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾಂತರವನ್ನು ರದ್ದುಗೊಳಿಸಲು ಮತ್ತು ಪಕ್ಷಗಳನ್ನು ಬದಲಾಯಿಸುವ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಂವಿಧಾನದ 10ನೇ ಷೆಡ್ಯೂಲ್‌ಗೆ ತಿದ್ದುಪಡಿಯನ್ನು ಇಂಡಿಯಾ ಮೈತ್ರಿಕೂಟ ಮಾಡಲಿದೆ’ ಎಂದು ತಿಳಿಸಿದ್ದಾರೆ. ಪಕ್ಷಾಂತರಿಗಳನ್ನು ಅನರ್ಹಗೊಳಿಸಲಾಗುವುದು. ಜುಲೈ 4ರಂದು …

Read More »

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್‌.ಡಿ. ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿನ್ನ ಮಗನಿಂದ ತಲೆ ತಗ್ಗಿಸಬೇಕಾಗಿ ಬಂತು. ನಿನ್ನ ಮಗನಿಂದ ಇಂತಹ ಕಪ್ಪು ಚುಕ್ಕೆ ಬಂತು ಎಂದು …

Read More »

ಗೃಹ ಸಚಿವ ಜಿ.ಪರಮೇಶ್ವರ ಆಪ್ತನ ಮನೆ ಮೇಲೆ ಐ.ಟಿ ದಾಳಿ

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ ಆಪ್ತ ಎಂ.ಸಿ ವೇಣುಗೋಪಾಲ್‌ ಅವರ ಮನೆ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.   ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ನ ಮಾಜಿ ಸದಸ್ಯರೂ ಆದ ವೇಣುಗೋಪಾಲ್‌ ಅವರ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಮನೆಗೆ ಮುಂಜಾನೆ 6ಕ್ಕೆ ನಾಲ್ಕು ಇನ್ನೋವಾ ಕಾರಿನಲ್ಲಿ ಬಂದ 15ಕ್ಕೂ ಹೆಚ್ಚು ಮಂದಿ ಇದ್ದ ಅಧಿಕಾರಿಗಳ ತಂಡ ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತು.ದಾಳಿ ವೇಳೆ ವೇಣುಗೋಪಾಲ್ …

Read More »

ಪ್ರಜ್ವಲ್‌ನನ್ನು ತುಂಡರಿಸಬೇಕು: ನೇಹಾ ತಂದೆ ಆಕ್ರೋಶ

ಬೆಳಗಾವಿ: ಲೈಂಗಿಕ ದೌರ್ಜನ್ಯದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತುಂಡರಿಸಬೇಕು..’ ಎಂದು ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಜ್ವಲ್ ವಿಚಾರದಲ್ಲಿ ನಾನೂ ಹೋರಾಟ ಮಾಡುವೆ.ಸ್ವಯಂ ಪ್ರೇರಿತವಾಗಿ ದೂರು ನೀಡಿ ಎಂದರೂ ಅಲ್ಲಿನ ಸಂತ್ರಸ್ತೆಯರು ಹೆದರುತ್ತಿದ್ದಾರೆ. ಪ್ರಜ್ವಲ್‌ಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ. ಅವರನ್ನು ತುಂಡರಿಸಿದರೆ ಮಾತ್ರ ಸಂತ್ರಸ್ತೆಯರ ಮನಸ್ಸು ಶಾಂತವಾಗುತ್ತದೆ’ ಎಂದರು. ಇದಕ್ಕೂ …

Read More »

ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಿಬಿಎಂಪಿ

ಬೆಂಗಳೂರು: ಮಳೆ ಬಂದಾಗ ರಾಜಕಾಲುವೆ ಹುಳು ತೆಗೆಯಲು ಮುಂದಾಗಿ ಜನರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದ್ದ ಬಿಬಿಎಂಪಿ, ಈ ಬಾರ ಎಚ್ಚೆತ್ತುಕೊಂಡು ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಪೂರ್ವದಿಂದ ಆಗ್ನೇಯ ಬೆಂಗಳೂರಿಗೆ ಹರಿಯುವ ಚಲ್ಲಘಟ್ಟ ವ್ಯಾಲಿಯನ್ನು ಸಂಪರ್ಕಿಸುವ ರಾಜಕಾಲುವೆಯಲ್ಲಿ ಬಿಬಿಎಂಪಿ ಬೃಹತ್ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಂಡಿದೆ.

Read More »