ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಚಿಕ್ಕಬಳ್ಳಾಪುರ ಜೆಡಿಎಸ್ ಕಾರ್ಯಕರ್ತರು ದೇವರಿಗೆ ಪ್ರಾರ್ಥನೆ ಮಾಡಿ, 108 ತೆಂಗಿನಕಾಯಿ ಒಡೆದು ಹರಕೆ ಹೊತ್ತರು. ದೇವೇಗೌಡರ ಹೆಸರಲ್ಲಿ ಅರ್ಚನೆ: ಚಿಕ್ಕಬಳ್ಳಾಪುರ ನಗರ ಹೊರವಲಯದ ಸೋಲಾಲಪ್ಪ ದಿನ್ನೆಯ ವೀರಾಂಜನೇಯ ದೇವಾಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿ ಮಾಜಿ ಪ್ರಧಾನಿಗಳ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ …
Read More »ಬೆಳಗಾವಿ–ಮೀರಜ್–ಬೆಳಗಾವಿ ಪ್ಯಾಸೆಂಜರ್ ವಿಶೇಷ ರೈಲುಗಳ ಖಾಯಂಗೆ ರೈಲ್ವೆ ಮಂಡಳಿ ಅನುಮೋದನೆ
ಹುಬ್ಬಳ್ಳಿ: ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ರೈಲು ಸಂಖ್ಯೆ 07301/07302 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 07303/07304 ಬೆಳಗಾವಿ–ಮೀರಜ್–ಬೆಳಗಾವಿ ಕಾಯ್ದಿರಿಸದ ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ಅನುಮೋದನೆ ನೀಡಿದೆ. ಅದರಂತೆ ಈ ರೈಲುಗಳು 51461/51462 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 51463/51464 ಬೆಳಗಾವಿ–ಮೀರಜ್–ಬೆಳಗಾವಿ ಎಂದು ಮರು-ಸಂಖ್ಯೆ ಪಡೆಯಲಿವೆ. ರೈಲು ಸಂಖ್ಯೆ 51461 ಬೆಳಗಾವಿ-ಮೀರಜ್ ಡೈಲಿ ಪ್ಯಾಸೆಂಜರ್ ಬೆಳಗಾವಿಯಿಂದ ಬೆಳಗ್ಗೆ 05:45ಕ್ಕೆ ಹೊರಟು, ಅದೇ ದಿನ ಬೆಳಗ್ಗೆ …
Read More »ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ನನ್ನ ಮೊದಲ ಹೆಜ್ಜೆಯನ್ನು ಇಟ್ಟಿದ್ದೇನೆ. ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಹಿರಿಯ ನಾಯಕರು ಶ್ರೀ ಬಾಲಚಂದ್ರ ಜಾರಕಿಹೊಳಿ, ಶ್ರೀ ಅಣ್ಣಾಸಾಹೇಬ ಜೊಲ್ಲೆ, ಶ್ರೀ ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು. ಸಹಕಾರದ ಸಿದ್ಧಾಂತಗಳನ್ನು ಬೆಂಬಲಿಸಿ ಜನರ ಸೇವೆಗೆ ಸಮರ್ಪಿತರಾಗಿರುವ ನನ್ನ ಪ್ರಯತ್ನಕ್ಕೆ ಎಲ್ಲರ ಆಶೀರ್ವಾದ ಹಾಗೂ …
Read More »ನೈಋತ್ಯ ರೈಲ್ವೆಗೆ ಸೆಪ್ಟೆಂಬರ್ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ
ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ಅತೀ ಹೆಚ್ಚು ಸರಕು ಸಾಗಣೆಯನ್ನು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಇದು ನಿರಂತರ ಮತ್ತು ಬಲವಾದ ಬೆಳವಣಿಗೆಯ ಸೂಚಕವಾಗಿದೆ. ಈ ಅವಧಿಯಲ್ಲಿ ನೈಋತ್ಯ ರೈಲ್ವೆ ಒಟ್ಟು 4.17 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ರೈಲ್ವೆ ಮಂಡಳಿಯ 4.15 MT ಗುರಿಯನ್ನು ಮೀರಿಸಿದೆ. …
Read More »ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ
ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು ಅವುಗಳ ಅಭಿವೃದ್ಧಿ ಆಗಬೇಕು ಎಂಬ ವಿಷಯ ಪ್ರಸ್ತಾಪಿಸಿದರು. ಆಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಅಧಿಕಾರಿಗಳಿಗೆ …
Read More »DCC ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಸವದಿ, ಕಾಗೆ
ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ರಾಜು ಕಾಗೆ ಹಾಗೂ ನಾನು ಕೂಡಿ ಒಂದು ಬಣ ಮಾಡಿದ್ದೇವೆ. ನಮ್ಮಲ್ಲಿಗೆ ಬರುವವರನ್ನು ಸ್ವಾಗತಿಸುತ್ತೇವೆ. ಹೋಗುತ್ತೇವೆ ಎನ್ನುವವರಿಗೆ ಧನ್ಯವಾದ ಸಲ್ಲಿಸುತ್ತೇವೆ ಎನ್ನುವ ಮೂಲಕ ನಾವು ರೇಸ್ನಲ್ಲಿದ್ದೇವೆ ಎಂಬ ಸಂದೇಶವನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಪ್ರತಿದಿನ ಘಟಾನುಘಟಿ ನಾಯಕರು ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಶುಕ್ರವಾರ ಅಥಣಿ ತಾಲೂಕಿನಿಂದ ಲಕ್ಷ್ಮಣ ಸವದಿ, ಕಾಗವಾಡ ತಾಲೂಕಿನಿಂದ ರಾಜು ಕಾಗೆ ತಮ್ಮ ಉಮೇದುವಾರಿಕೆ …
Read More »ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ.
ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ. ಹಾರೂಗೇರಿ ಕ್ರಾಸನಲ್ಲಿ ರಸ್ತೆ ತಡೆದು ಅನ್ನದಾತರಿಂದ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿ ಕ್ರಾಸ. ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ರೈತರು ಭಾಗಿ. ಪ್ರತಿ ಟನ್ ಕಬ್ಬಿಗೆ 4500 ರೂಪಾಯಿ ಬಿಲ್ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ. ಅಹಿತಕರ ನಡೆಯದಂತೆ ಪೊಲೀಸರಿಂದ ಬೀಗಿ ಬಂದೊಬಸ್ತ.
Read More »ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಭೂ ಪರಿಹಾರಕ್ಕೆ ಏಕರೂಪ ದರ ನಿಗದಿಪಡಿಸಿ ಸರ್ಕಾರ ಆದೇಶ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಲಮಟ್ಟಿ ಜಲಾಶಯ ಎತ್ತರವನ್ನು 519.60 ಮೀಟರ್ನಿಂದ 524.256 ಮೀಟರ್ವರೆಗೆ ಎತ್ತರಿಸಲು ಅನುಮತಿ ನೀಡಲಾಗಿದೆ. ಇದರಿಂದ ಹಿನ್ನೀರಿನಲ್ಲಿ 75,563 ಎಕರೆ ಭೂಮಿ ಮುಳುಗಡೆಯಾಗಲಿದೆ. ಈ ಭೂಮಿಗೆ ಒಂದೇ ಹಂತದಲ್ಲಿ ಒಪ್ಪಂದದ ದರ ಅಥವಾ ಭೂ ಖರೀದಿ ಮೂಲಕ ಭೂಸ್ವಾಧೀನ ಮಾಡಲು …
Read More »ಚಿಕ್ಕೋಡಿ ಆಸ್ತಿ ವಿವಾದ, ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ: ಆಸ್ತಿ ವಿವಾದ ಹಿನ್ನೆಲೆ ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೋಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವನಗೌಡ ಪಾಟೀಲ್ ಮತ್ತು ಪತ್ನಿ ಸಾವಿತ್ರಿ ಪಾಟೀಲ್ ನಡುವೆ ಕೌಟುಂಬಿಕ ಕಲಹ ಇತ್ತು. ಒಂದೇ ಮನೆಯಲ್ಲಿದ್ರೂ ಆಸ್ತಿ ಹಣಕ್ಕಾಗಿ ಗಂಡ ಹೆಂಡತಿ ಕಿತ್ತಾಟ ನಡೆಸುತಿದ್ರು. ಇಂದು ಇಬ್ಬರ ನಡುವಿನ ಕಿತ್ತಾಟ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿಗೆ ಪತ್ನಿ ಗಂಡನ ಕಾರಿಗೆ ಬೆಂಕಿ ಇಟ್ಟಿದ್ದಾಳೆ. ಪೆಟ್ರೋಲ್ …
Read More »ಬೆಳಗಾವಿ DCC ಬ್ಯಾಂಕ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧ:ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಇದೇ ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧಗೊಂಡಿದ್ದು, ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲು ಸನ್ನದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಗುರುವಾರದಂದು ಇಲ್ಲಿನ ಬಿಡಿಸಿಸಿ ಬ್ಯಾಂಕಿಗೆ ತಮ್ಮ ಬೆಂಬಲಿಗರಿಂದ ನಾಮಪತ್ರಗಳನ್ನು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ, ನಮ್ಮ ಗುಂಪಿಗೆ ಬಹುಮತ ಪಡೆಯಲು ಮತದಾರರ …
Read More »