Home / Uncategorized (page 20)

Uncategorized

ಭಾರತ ಧ್ವಜ ಹಾರಿಸುವ ಬದಲು ಭಗವಾಧ್ವಜ ಹಾರಿಸಿದ್ದು ತಪ್ಪು:C.M.

ಚಿತ್ರದುರ್ಗ: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ನಮ್ಮ ದೇಶದ ಬಾವುಟ ಹಾರಿಸಬೇಕು ಎಂದರು.   ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ …

Read More »

ಅಸ್ಸಾಂನ ಆಂತರಿಕ ಸಂಘರ್ಷ ಗೊತ್ತಿದ್ದರೂ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ:H.D.D.

ಹಾಸನ, ಜನವರಿ 25: ಅಸ್ಸಾಂನಲ್ಲಿ ಕೆಲವು ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಇದೆ, ಸಂಘರ್ಷದ ಪರಿಸ್ಥಿತಿ ಇದೆ. ಇದು ಗೊತ್ತಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅಲ್ಲಿಗೆ ಹೋಗಿದ್ದೇಕೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರು (HD Deve Gowda) ಪ್ರಶ್ನಿಸಿದರು. ಹಾಸನದಲ್ಲಿ ತಾಲೂಕುವಾರು ಸಭೆ ನಡೆಸಿ ಪಕ್ಷದ ಎಲ್ಲಾ ಹಂತದ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರ ಭೇಟಿಯಾಗುತ್ತಿರುವ ಸಂದರ್ಭ ದೇವೇಗೌಡರು ಮಾತನಾಡಿದರು. ರಾಹುಲ್ ಗಾಂಧಿಯ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ …

Read More »

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?

ತುಮಕೂರು,: ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿಕೊಬ್ಬರಿಗೆ (Copra/Coconut)ಬೆಂಬಲ ಬೆಲೆಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ …

Read More »

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ; ಪ್ರಧಾನಿ ಮೋದಿಗೆ ಇದುವೇ ವಿಶೇಷ ಉಡುಗೊರೆ

ದಾವಣಗೆರೆ, :ಅಯೋಧ್ಯೆ ಶ್ರೀರಾಮ ಮಂದಿರ(Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದೆ. ಈ ನಡುವೆ ಕರ್ನಾಟಕದಲ್ಲಿ ರಾಮ ಭಕ್ತರು ಅದರಲ್ಲೂ ಕಲಾವಿದರು ರಾಮ ಮಂದಿರದ ಸ್ಥಬ್ದಚಿತ್ರಗಳನ್ನು ರಚಿಸುತ್ತಿದ್ದಾರೆ. ಇತ್ತೀಚೆಗೆ ಪೆನ್ಸಿಲ್ ಲೆಡ್​ನಲ್ಲಿ ರಾಮನ ಕೆತ್ತನೆ, ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಜೈ ಶ್ರೀರಾಮ್ ಹೆಸರುಗಳಲ್ಲೇ ರಾಮನ ಚಿತ್ರ ಬಿಡಿಸಿರುವುದು ಸೇರಿದಂತೆ ಅನೇಕ ರೀತಿಯ ಚಿತ್ರಗಳನ್ನು ಬಿಡಿಸಲಾಗಿತ್ತು. ಇದೀಗ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ (Davanagere) ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ …

Read More »

ವಿವಾದ ಸೃಷ್ಟಿಸಿದ್ದ ಹುಬ್ಬಳ್ಳಿ MTS ಕಾಲೋನಿಯ 13 ಎಕರೆ ಜಮೀನು ಲೀಸ್ ಟೆಂಡರ್ ರದ್ದು: RLDA ಬೋರ್ಡ್​ ಆದೇಶ

ಹುಬ್ಬಳ್ಳಿ, ಜ.21: ಸಾಕಷ್ಟು ವಿವಾದ ಸೃಷ್ಟಿಸಿದ್ದಹುಬ್ಬಳ್ಳಿಯ (Hubballi)ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ (RLDA) ಬೋರ್ಡ್ ರದ್ದುಗೊಳಿಸಿ ಆದೇಶಿಸಿದೆ. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ MTS ಕಾಲೀನಿಯ 13 ಎಕರೇ ಜಮೀನನ್ನು 99 ವರ್ಷಗಳಿಗೆ ಲೀಸ್​ಗೆ ನೀಡಲು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ರೈಲ್ವೇ ಭೂಮಿ ಅಭಿವೃದ್ಧಿ ಪ್ರಾಧಿಕಾರವು 13 ಎಕರೇ ಜಮೀನು ಲೀಸ್​ಗೆ ಇದೆ ಎಂದು ಬೋರ್ಡ್ ಹಾಕಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ …

Read More »

ಬಳ್ಳಾರಿ: ಗುತ್ತಿಗನೂರು ಗ್ರಾಮದಲ್ಲಿ ಹೊಟೇಲ್​ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಣೆ, ಅಸ್ಪೃಶ್ಯತೆ ವಿಡಿಯೋ ವೈರಲ್

ಬಳ್ಳಾರಿ, : ಧಾರವಾಡದಲ್ಲಿ ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಬಳ್ಳಾರಿ (Ballari)ಅಸ್ಪೃಶ್ಯತೆ (Untouchability)ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ. ಊಟಕ್ಕೆಂದು ಹೊಟೇಲ್​ಗೆ ಬಂದ ದಲಿತ (Dalit) ಯುವಕರಿಗೆ “ಹೊಟೇಲ್ ಮುಚ್ಚುತ್ತೇನೆ, ಆದರೆ, ನಿಮಗೆ ಊಟ ಕೊಡಲ್ಲ” ಎಂದು ಮಹಿಳೆಯೊಬ್ಬಳು ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೊಟೇಲ್‌ನಲ್ಲಿ ಆಹಾರ ನೀಡಲು ಮಹಿಳೆ ನಿರಾಕರಣೆ ಮಾಡಿದ್ದಾರೆ. ಅಸ್ಪೃಶ್ಯತೆ ವಿರುದ್ಧ ಗರಂ ಆದ …

Read More »

ರೈಲಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು… ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕೇರಳದವರು ಎಂದು ಶಂಕಿಸಲಾಗಿದೆ. ಕೋಚ್ ಅನ್ನು ಪ್ರತ್ಯೇಕಿಸಲಾಗಿದ್ದು, ರೈಲು ಮೂರು ಗಂಟೆ …

Read More »

ಸದಾಶಿವ ಆಯೋಗ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಎಸ್‌ಸಿ ಸಮುದಾಯದ(SC community) ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ(Internal reservation) ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ವರದಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ವರದಿ ಜಾರಿಗೆ ಮುಂದಾಗಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ. …

Read More »

ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ; ಗೋಕಾಕದಲ್ಲಿ ಲಾರಿ ಚಾಲಕರ ಮುಷ್ಕರ…!

ಗೋಕಾಕ : 10 ವರ್ಷ ಜೈಲು ಶಿಕ್ಷೆಯೊಂದಿಗೆ ₹7 ಲಕ್ಷ ದಂಡ ವಿಧಿಸುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಕರ್ನಾಟಕ ಟ್ರಕ್ ಚಾಲಕರು ಇಂದು ಮುಷ್ಕರ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಹತ್ತಿರ ಲಕ್ಷ್ಮೀ ಲಾರಿ ಮಾಲೀಕರ ಹಾಗೂ ಚಾಲಕರ ಅಸೋಸಿಯೇಷನ್ ಗೋಕಾಕ ವತಿಯಿಂದ ಮುಷ್ಕರ ಆರಂಭವಾಗಿದೆ. ಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಮಧ್ಯರಾತ್ರಿಯಿಂದ ಕರೆ ನೀಡಲಾಗಿರುವ …

Read More »

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ: ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು-ಪ್ರಿಯಾಂಕ್​ ಖರ್ಗೆ

ಬೆಂಗಳೂರು, ಜನವರಿ 17: ಹೈದರಾಬಾದ್​ನಲ್ಲಿಮೈಸೂರು ಸ್ಯಾಂಡಲ್(Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ …

Read More »