ಬೆಳಗಾವಿ: 5G ಕಾಲಕ್ಕೆ ನಾವೆಲ್ಲ ಬಂದಿದ್ದರೂ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾತ್ರ ಇನ್ನೂ 2ಜಿ ಜಾಮರ್ ಕಾರ್ಯನಿರ್ವಹಿಸುತ್ತಿದೆ. ತಂತ್ರಜ್ಞಾನ ಅಪ್ಡೇಟ್ ಮಾಡದ ಕಾರಣ ಖೈದಿಗಳು ಅಕ್ರಮ ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದಾರೆ. ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋದ ಹಿನ್ನೆಲೆಯಲ್ಲಿ ತನಿಖೆ ನಡೆದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದು ಎಲ್ಲರನ್ನೂ ಆಶ್ಚರ್ಯಕ್ಕೆ ಈಡು ಮಾಡಿದೆ. ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮಂಗಳೂರು ಮೂಲದ …
Read More »ಬೆಳಗಾವಿ-ಸಿಕಂದರಾಬಾದ್ ರೈಲು, ಮಂತ್ರಾಲಯ ಭಕ್ತರಿಗೆ ಅನುಕೂಲ
ಬೆಳಗಾವಿ, ಜನವರಿ 15; ನೈಋತ್ಯ ರೈಲ್ವೆಬೆಳಗಾವಿ-ಸಿಕಂದರಾಬಾದ್-ಬೆಳಗಾವಿ ವಿಶೇಷ ರೈಲು ಘೋಷಣೆ ಮಾಡಿದೆ. ಈ ರೈಲು ಸೇವೆಯಿಂದಾಗಿ ಪುಣ್ಯ ಕ್ಷೇತ್ರ ಮಂತ್ರಾಲಯಕ್ಕೆ ಪ್ರಯಾಣ ಮಾಡಲು ಭಕ್ತರಿಗೆ ಅನುಕೂಲವಾಗಲಿದೆ. ಬೆಳಗಾವಿಯ ಬಿಜೆಪಿ ಸಂಸದೆ ಮಂಗಲ ಸುರೇಶ್ ಅಂಗಡಿ ರೈಲು ಸಂಚಾರದ ಬಗ್ಗೆ ಫೇಸ್ಬುಕ್ ಮೂಲಕ ಮಾಹಿತಿ ನೀಡಿದ್ದಾರೆ. ಬೆಳಗಾವಿ-ಸಿಕಂದರಾಬಾದ್-ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 17ರಂದು ಪ್ರಾರಂಭವಾಗಲಿದೆ. ಮಂಗಲ ಸುರೇಶ್ ಅಂಗಡಿ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಬೆಳಗಾವಿ-ಸಿಕಂದರಾಬಾದ್ ನಡುವೆ …
Read More »ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. C.M.
ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, …
Read More »ಬಿಜೆಪಿಗೆ ಬಿಗ್ ಶಾಕ್ : ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್..!
ರಾಯಚೂರು : ಬಿಜೆಪಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath ) ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ . ಈ ಕುರಿತು ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ. ಉತ್ತರಾಯಣದಂದು …
Read More »ಸಿದ್ದರಾಮಯ್ಯ ಕ್ಷೇತ್ರ ಘೋಷಣೆ: ಕೋಲಾರವೇ ಅಂತಿಮ?
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು(ಜ.8) ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಆಪ್ತ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆ ಬಳಿಕ ನೇರವಾಗಿ ಕೋಲಾರಕ್ಕೆ ತೆರಳಲಿದ್ದಾರೆ. ಆ ಬಳಿಕ ಅಲ್ಲಿನ ಸ್ಥಳೀಯ ಮುಖಂಡರ ಜತೆ ಸೇರಿ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಲಿದ್ದಾರೆ …
Read More »ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಯಾದವಾಡ. (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತೀಚಿಗೆ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಪರಿಶೀಲನೆ ಮಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮದಲ್ಲಿ ಹೊಸ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಯಾದವಾಡ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಈ …
Read More »ಲೀವರ್ ಫೇಲ್,ಆಪರೇಷನ್ ಸಕ್ಸೆಸ್, ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಕೀರ್ತಿ…!!
ಬೆಳಗಾವಿ-ಅನೇಕ ವರ್ಷಗಳಿಂದ ಲೀವರ ವೈಫಲ್ಯದಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಲೀವರ ಕಸಿ ಮಾಡುವದರ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವದಲ್ಲದೇ, ಉತ್ತರ ಕರ್ನಾಟಕದಲ್ಲಿಯೇ ದ್ವಿತೀಯ ಯಶಸ್ವಿ ಯಕೃತ್ತಿನ ಕಸಿ ಮಾಡುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಾನಾಪೂರ ತಾಲೂಕಿನ ಕುಪ್ಪತಗಿರಿ ಗ್ರಾಮದ ನಿವಾಸಿಯಾದ 50 ವರ್ಷದ ನರಸಿಂಗ …
Read More »ಸವದತ್ತಿ ಯಲ್ಲಮ್ಮ ಜಾತ್ರೆಯಲ್ಲಿ ನಕಲಿ ವೈದ್ಯರ ಹಾವಳಿ. 10ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಶುರು..!
ಬೆಳಗಾವಿ: ಬೆಳಗಾವಿ ಸವದತ್ತಿ ಯಲ್ಲಮ್ಮ ಜಾತ್ರೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರುಕ್ಲಿನಿಕ್ ಓಪನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಯಲ್ಲಮ್ಮನಗುಡ್ಡದಲ್ಲಿ 10ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಶುರುವಾಗಿದ್ದು, ಭಕ್ತಾಧಿಗಳ ಜೀವದ ಮೇಲೆ ಆಟ ಆಡುತ್ತಿದ್ದಾರೆ. ಈ ಹಿನ್ನೆಲೆ ಕ್ಲಿನಿಕ್ ತೆಗೆಯಲು ಸವದತ್ತಿ THO ಅನುಮತಿ ಕೊಟ್ರಾ..? ಸವದತ್ತಿ THO ಮಹೇಶ್ ಚಿತ್ತರಗಿ ಪರ್ಮಿಷನ್ ನೀಡಿದ್ರಾ..? ಎಂಬ ಶಂಕೆ ಶುರುವಾಗಿದೆ. ನಕಲಿ ವೈದ್ಯರ ಹಾವಳಿಗೆ ತಾಲೂಕು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಭಾರತ್ ಜೋಡೋ ಯಾತ್ರೆಯಲ್ಲಿ ಇಬ್ಬರು ರಾಹುಲ್ ಗಾಂಧಿ.. ಡುಪ್ಲಿಕೆಟ್ ರಾಹುಲ್ ಜೊತೆ ಸೆಲ್ಫಿಗೆ ಮುಗಿ ಬಿದ್ದ ಜನ!
ಬಾರತ್ ಜೋಡೋ ಯಾತ್ರೆಯಲ್ಲಿ ಇಬ್ಬರು ರಾಹುಲ್ ಗಾಂಧಿ ನೋಡಿ ಅಚ್ಚರಿಗೊಂಡ ಜನರು.. ಥೇಟ್ ರಾಹುಲ್ ಗಾಂಧಿಯಂತೆ ಕಾಣುವ ಫೈಸಲ್ ಜೊತೆ ಈಟಿವಿ ಭಾರತ ಮಾತುಕತೆ.. ಮೀರತ್, ಉತ್ತರಪ್ರದೇಶ: ಯುಪಿಯಲ್ಲಿ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಭರದಿಂದ ಸಾಗಿದೆ. ರಾಹುಲ್ ಗಾಂಧಿಯೊಂದಿಗೆ ಸಾವಿರಾರೂ ಜನರ ಜತೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಈ ಪಯಣದಲ್ಲಿ ರಾಹುಲ್ ಗಾಂಧಿ ಹೊಲಿಕೆಯ ವ್ಯಕ್ತಿಯಿದ್ದು, ಅವರು ಹೋದಲ್ಲೆಲ್ಲಾ ಜನ ಹಿಂಬಾಲಿಸುತ್ತಿದ್ದರು. ಕೆಲವರು ಸೆಲ್ಫಿ ತೆಗೆಸಿಕೊಂಡರು, ಕೆಲವರು ಕೈಕುಲುಕಿದರು …
Read More »