Breaking News

Uncategorized

ನೇಹಾ ಕುಟುಂಬಸ್ಥರಿಗೆ ಭದ್ರತೆ, ನಿರಂಜನ್ ಹಿರೇಮಠ್‌ಗೆ ಅಂಗರಕ್ಷಕರ ನಿಯೋಜನೆ

ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣದ (Neha Hiremath Murder Case) ತನಿಖೆ ಚುರುಕುಗೊಂಡಿದೆ. ಈಗಾಗಲೇ ಸಿಐಡಿ (CID) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿ ಫಯಾಜ್‌ (Fayaz) ವಿಚಾರಣೆ ನಡೆಸಿದ್ದಾರೆ. ಈ ನಡುವೆ ನೇಹಾ ಕುಟುಂಬಕ್ಕೆ ಸರ್ಕಾರದಿಂದ ಭದ್ರತೆ ನೀಡಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿದ್ದ ಸಂದರ್ಭದಲ್ಲಿ ತಮಗೆ, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಹೀಗಾಗಿ ತಮಗೆ ಭದ್ರತೆ ಬೇಕು ಅಂತ ನೇಹಾ ತಂದೆ …

Read More »

ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ.   ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು …

Read More »

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ;C.M.

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು …

Read More »

ಚಿಕ್ಕಮಗಳೂರು. ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ.

ಚಿಕ್ಕಮಗಳೂರು: ವಿದೇಶದಿಂದ ಬಂದು ದಂಪತಿಗಳು ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಿದರು. ಕಡೂರು ತಾಲೂಕು ಪಂಚೇನಹಳ್ಳಿಯ ಸಾಫ್ಟ್‌ವೇರ್ ಇಂಜಿನಿಯರ್ ಮಧು ಮತ್ತು ಅವರ ಪತ್ನಿ ಪಿಳ್ಳೇನಹಳ್ಳಿಯ ತನುಶ್ರೀ ಅವರು ದುಬೈನಲ್ಲಿ ವಾಸವಾಗಿದ್ದು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದೂರದ ದುಬೈನಿಂದ ಬಂದು ಮತ ಚಲಾಯಿಸಿದ್ದಾರೆ. ದುಬೈನಲ್ಲಿ ಮಧು ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿಯಲ್ಲಿದ್ದು ಪತ್ನಿ ತನುಶ್ರೀ ಗೃಹಿಣಿಯಾಗಿ ದ್ದಾರೆ. ಮಧು ತನ್ನ ಊರಾದ ಪಂಚೇನಹಳ್ಳಿಯಲ್ಲಿನ ಮತಗಟ್ಟೆಯಲ್ಲಿ‌ ಮತ ಚಲಾಯಿಸಿದರು. ಪತ್ನಿ ತನುಶ್ರೀ …

Read More »

ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ …

Read More »

ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು

ನವದೆಹಲಿ: ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಮತಗಳ ಜೊತೆಗೆ ವಿವಿಪ್ಯಾಟ್​ ಚೀಟಿಯನ್ನು ಎಣಿಕೆ ಮಾಡುವಂತೆ ಕೋರಿ, ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರಿಂಕೋರ್ಟ್​ ಇಂದು (ಏಪ್ರಿಲ್​ 26) ವಜಾಗೊಳಿಸಿದೆ. ದೇಶದೆಲ್ಲೆಡೆ ಇಂದು ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂಕೋರ್ಟ್​ ಈ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸರ್ವಾನುಮತದಿಂದ ಈ ತೀರ್ಪನ್ನು ಪ್ರಕಟಿಸಿದೆ. ಸಮತೋಲಿತ …

Read More »

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ? ಚಿಕ್ಕಬಳ್ಳಾಪುರು: ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿರುವ ಘಟನೆ . ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರಲ್ಲಿ ನಡೆದಿದೆ. ಇಲ್ಲಿನ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ …

Read More »

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ. ತಾಳಿ ಕಟ್ಟುವ ಶುಭ ಗಳಿಗೆಗೂ ಮುನ್ನ ವರ ಚೇತನ್ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ ಒಂಬತ್ತು ಗಂಟೆಗೆ ತಾಳಿ ಕಟ್ಟುವ ಶುಭ ಮುಹೂರ್ತವಿತ್ತು.   ಹೀಗಾಗಿ ಇದಕ್ಕೂ ಮುನ್ನ ಮತಗಟ್ಟೆಗೆ ಓಡೋಡಿ ಬಂದ ವರ ಚೇತನ್ ಮತ ಹಾಕಿದರು. ಈ ವೇಳೆ ವರನ …

Read More »

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ. ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ …

Read More »

ಮತದಾನ ಮಾಡಿದವ್ರಿಗೆ ಫ್ರೀ ಮಸಾಲೆ ದೋಸೆ ,

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಶುಕ್ರವಾರ 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ಬಿರುಸಿನದ ಸಾಗಿದೆ. ಎರಡನೇ ಹಂತದಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವೂ ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.ಕೇರಳದ ಎಲ್ಲಾ 20 ಸ್ಥಾನಗಳ ಹೊರತಾಗಿ, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ತಲಾ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಅಸ್ಸಾಂ …

Read More »