ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚನ್ನಮ್ಮನ ರಾಜ್ಯ ಮಟ್ಟದ ಕಿತ್ತೂರು ಉತ್ಸವ-2023ರ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಬೆಳಿಗ್ಗೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆ ಸಂಚರಿಸಿ ಬೈಲಹೊಂಗಲದಲ್ಲಿ ಇರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಆಗಮಿಸಿ ಬಂದ ವಿಜಯಜ್ಯೋತಿಯನ್ನು ಕಿತ್ತೂರಿನ ಚನ್ನಮ್ಮ ವೃತ್ತದಲ್ಲಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ವಿಜಯಜ್ಯೋತಿಯನ್ನು ಸ್ವಾಗತಿಸಿ, ಸಂಸ್ಥಾನದ ಧ್ವಜಾರೋಹಣವನ್ನು ಸತೀಶ್ ಜಾರಕಿಹೊಳಿ ನೆರವೇರಿಸಿದರು. ನಂತರ ಚನ್ನಮ್ಮ ಪುತ್ಥಳಿಗೆ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದೆ …
Read More »ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.5 ಕೋಟಿ ವಂಚನೆ ಆರೋಪ: ಚೈತ್ರಾ ಮಾದರಿ ಮತ್ತೊಂದು ಕೇಸ್ ಬೆಳಕಿಗೆ
ವಿಜಯನಗರ : ಕಳೆದ ಕೆಲವು ದಿನಗಳ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಚೈತ್ರಾ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 2.5 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮಾಜಿ ಮುಖಂಡ ಹಾಗೂ ಬಿಜೆಪಿಯ ಪ್ರಮುಖ ರಾಜ್ಯ ನಾಯಕರೊಬ್ಬರ ಆಪ್ತರ ವಿರುದ್ಧ ವಂಚನೆ ಆರೋಪ ಕೇಳಿ …
Read More »ಸಿಯಾಚಿನ್ನಲ್ಲಿ ಅಗ್ನಿವೀರ್ ಅಕ್ಷಯ್ ಹುತಾತ್ಮ: ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಸಿಯಾಚಿನ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ‘ಅಗ್ನಿವೀರ್’ ಗವಟೆ ಅಕ್ಷಯ್ ಲಕ್ಷ್ಮಣ್ ಎಂಬುವರು ಹುತಾತ್ಮರಾಗಿದ್ದಾರೆ. ಇವರು ಸೇನಾ ಕಾರ್ಯಾಚರಣೆಯಲ್ಲಿ ಪ್ರಾಣವನ್ನು ತ್ಯಾಗ ಮಾಡಿದ ಮೊದಲ ಅಗ್ನಿವೀರ್ ಆಗಿದ್ದು, ಭಾರತೀಯ ಸೇನೆಯು ಭಾನುವಾರ ಅಂತಿಮ ಗೌರವ ಸಲ್ಲಿಸಿದೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಗವಟೆ ಅಕ್ಷಯ್ ಲಕ್ಷ್ಮಣ್ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಕ್ಷಯ್ ಮಹಾರಾಷ್ಟ್ರ ಮೂಲದವರಾಗಿದ್ದು, ಇವರ ಸಾವಿನ ಕುರಿತು ನಿಖರ ಮಾಹಿತಿ ತಕ್ಷಣಕ್ಕೆ …
Read More »ಈ ಹಿಂದೆ ರಾಜಕೀಯ ಒಂದು ಸೇವೆಯಾಗಿತ್ತು. ಇಂದು ವೃತ್ತಿಯಾಗಿದೆ- ಸಂತೋಷ್ ಹೆಗ್ಡೆ
ಮಂಡ್ಯ: ಪ್ರಸ್ತುತ ರಾಜಕೀಯ ವೃತ್ತಿಯಾಗಿದೆ. ಎಲ್ಲೂ ಸಿಗದ ಸೌಲಭ್ಯ ರಾಜಕೀಯದಲ್ಲಿ ಸಿಗುತ್ತೆ ಎಂದು ಮದ್ದೂರಿನ ವಳಗೆರೆಹಳ್ಳಿ ಗ್ರಾಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ಮರುತನಿಖೆ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಇದೊಂದು ಸಬ್ಜುಡೀಸ್ ಅಂತೇವೆ. ಕೋರ್ಟ್ನಲ್ಲಿ ಕೇಸ್ ಪೆಂಡಿಂಗ್ ಇದೆ. ಒಬ್ಬ ನಿವೃತ್ತ ನ್ಯಾಯಾಧೀಶನಾಗಿ ನಾನು ಮಾತನಾಡುವುದು ಸೂಕ್ತವಲ್ಲ ಎಂದರು. ಐಟಿ ರೇಡ್ ಹಣ ಎಲ್ಲಿಗೆ ಹೋಗುತ್ತೆ? ಎಂಬ ವಿಚಾರಕ್ಕೆ, …
Read More »ವಿಶ್ವಕಪ್ನಲ್ಲಿ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದ ಮೊಹಮ್ಮದ್ ಶಮಿ
ಧರ್ಮಶಾಲಾ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಐದು ವಿಕೆಟ್ ಕಿತ್ತರು. ಧರ್ಮಶಾಲಾ (ಹಿಮಾಚಲ ಪ್ರದೇಶ): 2023ರ ವಿಶ್ವಕಪ್ನಲ್ಲಿ ಭಾರತ ತಂಡ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ನಡೆದ ಪಂದ್ಯಗಳಲ್ಲಿ ಎದುರಾಳಿ ತಂಡವನ್ನು 300 ರನ್ಗಳ ಗಡಿ ದಾಟದಂತೆ ನಿಯಂತ್ರಿಸಿದೆ. ಅಲ್ಲದೇ ಯಾವುದೇ ತಂಡದ ಬ್ಯಾಟರ್ಗಳೂ ಶತಕ ದಾಖಲಿಸಿರಲಿಲ್ಲ. ಆದರೆ ಭಾನುವಾರ ನಡೆದ ಪಂದ್ಯದಲ್ಲಿ ಡೇರಿಲ್ ಮಿಚೆಲ್ ಶತಕ ದಾಖಲಿಸುವ ಮೂಲಕ ಈ ರೆಕಾರ್ಡ್ ಬ್ರೇಕ್ …
Read More »ಸಾಮಾನ್ಯರಂತೆ ಬದುಕುತ್ತಿದ್ದಾರೆ ಚೆನ್ನಮ್ಮ ವಂಶಸ್ಥರು
ಬೆಳಗಾವಿ: ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ ಕಿತ್ತೂರು ಸಂಸ್ಥಾನದ ಕುಡಿಗಳಿವರು. ನಾಡಿನ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ಧಾರೆ ಎರೆದವರು. ರಾಜ ದರ್ಬಾರ್ನಲ್ಲಿ ಮೆರೆಯಬೇಕಾದವರು ಇಂದು ಕಿರಾಣಿ ಅಂಗಡಿ ನಡೆಸಿ, ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಸಾಮಾನ್ಯರಂತೆ ಜೀವಿಸುತ್ತಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಬೇಸತ್ತಿರುವ ಇವರು, ನಮಗೆ ವಿಶೇಷ ಅನುದಾನ ಕೊಡಿ, ಇಲ್ಲವೇ ನಮ್ಮ ಕೋಟೆಯನ್ನು ನಮಗೆ ಬಿಟ್ಟು ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಚೆನ್ನಮ್ಮನ ಹೆಸರಿನ ಜನರಲ್ ಸ್ಟೋರ್ಸ್ ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ …
Read More »ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ
ಬೆಳಗಾವಿ: ಬೆಳಗಾವಿ ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಭಾನುವಾರ ತುಂಬಿದ ಸಭಾಗೃಹದಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಳಗಾವಿ ನಾಗರಿಕರು, ಹನುಮಾನ್ ಪ್ರಸಾದ ಸಮಿತಿಯ ಪದಾಧಿಕಾರಿ ಗಳಾದ ರಾಹುಲ್ ಮೇತ್ರಿ, ಡಿ.ಸಿ. ದೇಶಪಾಂಡೆ, ಅಳಗುಂಡಗಿ ಮತ್ತು ಶ್ರೀ ಲಲಿತಾ ಆರಾಧನಾ ಮಂಡಳಿಯ ಪ್ರತಿಮಾ ಅಂಬೇಕರ್, ಭಾವನಾ ಕುಲ್ಕರ್ಣಿ, ಸುನೀತಾ ಮಾನೆ, ಸಾವಿತ್ರೀ ಪಾಟೀಲ್, ದೀಪಾ ದೇಶಪಾಂಡೆ, ಸಂಧ್ಯಾ ಭಟ್ ಸನ್ಮಾನಿಸಿದರು. ಶಿವಪುತ್ರ …
Read More »ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ ಶಾಸಕ ವಿಶ್ವಾಸ ವೈದ್ಯ
ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ನಾಡಹಬ್ಬ ಮಹೋತ್ಸವದ ಅಂಗವಾಗಿ ಸಾಯಂಕಾಲ ಜರುಗಿದ ಡಾನ್ಸ್ ಮುನವಳ್ಳಿ ಡಾನ್ಸ್ ನೃತ್ಯ ಸ್ಪರ್ಧೆ, ಕಾಮಿಡಿ ಶೋ, ಲವ್ ಏ ರಿಯಾ ಚಲನಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾವಿದರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು, ಸಾಧನೆ ಮಾಡಿದ ಸಾಧಕರನ್ನು ಪ್ರೋತ್ಸಾಹಿಸಲು ಇಂಥ ವೇದಿಕೆಗಳು ಅವಕಾಶ ಕಲ್ಪಿಸುತ್ತವೆ ಎಂದರು. ಸಾನಿಧ್ಯವನ್ನು ಶ್ರೀ ಮುರುಘೆಂದ್ರ …
Read More »ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಸೂಪರ್ ಸೀಡ್ ತೂಗುಗತ್ತಿ
ಬೆಳಗಾವಿ: ಒಂದು ಕಡೆ ತಮ್ಮದೇ ಸರ್ಕಾರದ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಮುನಿಸು ದೊಡ್ಡ ಸಂಚಲನ ಸೃಷ್ಟಿಸಿದರೆ, ಮತ್ತೊಂದೆಡೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್ಗೆ ಹುನ್ನಾರ ನಡೆದಿದೆಯಾ ಎಂಬ ಅನುಮಾನ ಮೂಡಿದೆ. ಇದರಿಂದ ಇಂದು ನಡೆಯಲಿರುವ ಪಾಲಿಕೆ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಹೀಗೊಂದು ಅನುಮಾನ ದಟ್ಟವಾಗಲು ಕಾರಣ, ಪಾಲಿಕೆ ಮೆಯರ್ ಶೋಭಾ ಸೋಮನಾಚೆ ಅವರು. ಅಕ್ಟೋಬರ್ 17 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. …
Read More »ಮತ್ತೆ ಚಲಾವಣೆಗೆ ಬರುತ್ತಾ 1,000 ರೂಪಾಯಿ ನೋಟು?: ಹೀಗೊಂದು ವದಂತಿ
ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ. 2016ರಲ್ಲಿ ನವೆಂಬರ್ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು …
Read More »