Breaking News

Uncategorized

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ ಧಾರವಾಡದವರೆಗೆ ವಿಶಿಷ್ಟ ರ್ಯಾಲಿ ನಡೆಸಿಕೊಂಡು ಹೋಗಿ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.ಹುಬ್ಬಳ್ಳಿಯ ಮಾಜಿ ವಾರ್ಡ್ ಸದಸ್ಯ ಮುತ್ತಣ್ಣನವರ್ ತಮ್ಮ ಬೆಂಬಲಿಗರೊಂದಿಗೆ ಎತ್ತಿನ ಗಾಡಿಯಲ್ಲಿ 20 ಕಿ.ಮೀ ಮೆರವಣಿಗೆ ಸಾಗಿ ನಾಮಪತ್ರ ಸಲ್ಲಸುವ ಮೂಲಕ ಗಮನ ಸೆಳೆದರು. ಮುತ್ತಣ್ಣನವರ್ ಮತ್ತು ಅವರ ಬೆಂಬಲಿಗರು ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮತ್ತು ಸ್ವಾತಂತ್ರ್ಯ ಹೋರಾಟಗಾರ …

Read More »

ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ.

ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈಗಾಗಲೇ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು ಸಿಎಂ ಅವರನ್ನು ತಮ್ಮ ಬೆಂಬಲಿಗರ ಜೊತೆ ಬೇಟಿಯಾದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, …

Read More »

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಕೇಸ್ : ಇಬ್ಬರು ಶೂಟರ್ ಗಳು ಅರೆಸ್ಟ್

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಉತ್ತಮ ಯಶಸ್ಸು ಸಿಕ್ಕಿದೆ. ಇಬ್ಬರೂ ಶೂಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಇಬ್ಬರೂ ಆರೋಪಿಗಳನ್ನು ಬಂಧಿಸಿದೆ. ಸಲ್ಮಾನ್ ಖಾನ್ ಅವರ ಮನೆಯಲ್ಲಿ ಗುಂಡಿನ ದಾಳಿ ನಡೆದಾಗಿನಿಂದ ಪೊಲೀಸರು ಆರೋಪಿಗಳನ್ನು ನಿರಂತರವಾಗಿ ಹುಡುಕುತ್ತಿದ್ದರು.ಸೋಮವಾರ ತಡರಾತ್ರಿ ಇಬ್ಬರು ಆರೋಪಿಗಳನ್ನು ಗುಜರಾತ್ನ ಭುಜ್ನಿಂದ ಬಂಧಿಸಲಾಗಿದೆ. .     ಆರೋಪಿಗಳಲ್ಲಿ …

Read More »

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: 3 ಚಾಕು, 40 ಸಾವಿರ ನಗದು ಜಪ್ತಿ

ಬೆಂಗಳೂರು: ಮನಪರಿವರ್ತನಾ ಕೇಂದ್ರವಾಗಬೇಕಿದ್ದ ಪರಪ್ಪನ ಅಗ್ರಹಾರ ಜೈಲು ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಿಂದಲೇ ಉಗ್ರ ಚಟುವಟಿಕೆ, ಕೊಲೆಗೆ ಸುಪಾರಿ ಸೇರಿ ವಿವಿಧ ಅಕ್ರಮ ಚುಟವಟಿಕೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಸುಮಾರು 50ಕ್ಕೂ …

Read More »

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಬೆಂಗಳೂರು: ಮೈಸೂರು, ಮಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲೂ “ನಮೋ’ ಹವಾ ಸೃಷ್ಟಿಗೆ ಬಿಜೆಪಿ ಮುಂದಾಗಿದೆ. ಎ. 20ರಂದು ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.   ಜತೆಗೆ ಚಿಕ್ಕಬಳ್ಳಾಪುರ ಅಥವಾ ತುಮಕೂರಿನಲ್ಲಿ ರೋಡ್‌ ಶೋ ವನ್ನೂ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Read More »

ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ವಿಜಯಪುರ: ಯಾವುದೇ ಕಾರಣಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದು ಸಾರಿದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಟ್ಟದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಹೇಳಿದರು.   ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿದರೂ ಭಾರತದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ, ಈ ವಿಷಯದನ್ನು ನಾನಲ್ಲ ಸ್ವಯಂ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. …

Read More »

ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. …

Read More »

ಗ್ರಾಮದೇವಿ ಜಾತ್ರೆಗೆ ಯರಡಾಲ ಸಜ್ಜು; 9 ವರ್ಷಗಳ ಬಳಿಕ ಮರುಕಳಿಸಿದ ವೈಭವ

ಬೈಲಹೊಂಗಲ: ತಾಲ್ಲೂಕಿನ ಯರಡಾಲ ಗ್ರಾಮದಲ್ಲಿ ಏ.15 ರಿಂದ 27 ರವರೆಗೆ ಗ್ರಾಮದೇವಿ ಜಾತ್ರೆ ನೆರವೇರಲ್ಲಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಸುಮಾರು ಒಂಬತ್ತು ವರ್ಷಗಳ ನಂತರ ನೆರವೇರುತ್ತಿರುವ ಜಾತ್ರೆಗೆ ಗ್ರಾಮಕ್ಕೆ ರಾಜ್ಯ, ಹೊರ ರಾಜ್ಯದಲ್ಲಿರುವ ಬಂಧು, ಬಳಗ, ಸ್ನೇಹಿತರು ಕುಟುಂಬ ಸಮೇತರಾಗಿ ಗ್ರಾಮಕ್ಕೆ ಲಗ್ಗೆ ಇಡುತ್ತಿದ್ದಾರೆ.   ಗ್ರಾಮದ ಪ್ರತಿ ಬೀದಿಗಳನ್ನು ಶುಚಿಗೊಳಿಸಲಾಗುತ್ತಿದ್ದು, ತಳಿರು, ತೋರಣ, ರಂಗೋಲಿ ಬಿಡಿಸಲಾಗುತ್ತಿದೆ. ಗ್ರಾಮ ಸಂಪೂರ್ಣ ಸಿಂಗಾರಗೊಂಡಿದೆ. ಪೂರ್ಣಗೊಂಡ ಸಿದ್ಧತೆ: ಜಾತ್ರೆಗೆ ಈಗಾಗಲೇ ಬಹುತೇಕ ಎಲ್ಲ …

Read More »

ಹಿರಿಯ ನಾಗರಿಕರ ಮತದಾನ ಗೌಪ್ಯತೆ ಉಲ್ಲಂಘನೆ: ರಾಜ್ಯ ಚುನಾವಣೆ ಆಯೋಗ ಮಹತ್ವದ ಹೇಳಿಕೆ

ಹಿರಿಯ ನಾಗರಿಕರ ಮತದಾನ ಗೌಪ್ಯತೆ ಉಲ್ಲಂಘನೆ: ರಾಜ್ಯ ಚುನಾವಣೆ ಆಯೋಗ ಮಹತ್ವದ ಹೇಳಿಕೆ ಬೆಂಗಳೂರು, ಏಪ್ರಿಲ್ 14: ಲೋಕಸಭಾ ಚುನಾವಣೆಗಾಗಿ 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಮನೆಯಿಂದ ಮತದಾನಕ್ಕೆ ಅವಕಾಶ ನೀಡಲಾಗಿದೆ. ಶನಿವಾರ ಏಪ್ರಿಲ್ 13ರಿಂದಲೇ ಗೌಪ್ಯ ಮತದಾನ ಮಾಡಿಕೊಳ್ಳಲಾಗಿದೆ. ಇಂದು ಭಾನುವಾರ ಎರಡನೇ ದಿನದ ಮತದಾನ ನಡೆಯುತ್ತಿದೆ. ಈ ಹಿರಿಯ ನಾಗರಿಕರ ಮನೆಯಿಂದ ಮತದಾನದ ಗೌಪ್ಯತೆ ಕುರಿತು ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಹತ್ವದ ಹೇಳಿಕೆ ನೀಡಿದೆ. …

Read More »

BJP ಸಂಜಯ ಪಾಟೀಲ ಮನೆ ಎದುರು ರಾತ್ರೋರಾತ್ರಿ ಮಹಿಳೆಯರ ಪ್ರತಿಭಟನೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಅವರ ಮನೆ ಎದುರು ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ, ಸಂಜಯ ಭಾವಚಿತ್ರಕ್ಕೆ ಬಳೆ, ಸೀರೆ ತೊಡಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿರುವ ಸಂಜಯ ಪಾಟೀಲ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ನೂರಾರು ಮಹಿಳಾ ಕಾರ್ಯಕರ್ತೆಯರು, ಸಂಜಯ ಪಾಟೀಲ ಅವರು ಕೂಡಲೇ ಮನೆಯಿಂದ ಹೊರಗೆ ಬಂದು ನಾಡಿನ ಎಲ್ಲ …

Read More »