Breaking News

Uncategorized

ಬಯಲುಸೀಮೆಯಲ್ಲಿ ಸಾವಯವ ಸೇಬು l ಧರ್ಮಪುರದ ರೈತನ ಯಶಸ್ವಿ ಕಥೆ

ವಿಜಯಪುರ(ದೇವನಹಳ್ಳಿ): ಸಾಮಾನ್ಯವಾಗಿ ಕಾಶ್ಮೀರದಲ್ಲಿ ಬೆಳೆಯುತ್ತಿದ್ದ ಸೇಬನ್ನು ಈಚಿನ ವರ್ಷಗಳಲ್ಲಿ ಬಯಲು ಸೀಮೆಯ ರೈತರು ಬೆಳೆದು ಯಶಸ್ವಿಯಾಗುತ್ತಿದ್ದಾರೆ. ಧರ್ಮಪುರದ ಮುಖೇಶ್ ಬಾಬು ಎಂಬ ರೈತರೊಬ್ಬರು ಸಾವಯವ ಕೃಷಿ ಪದ್ಧತಿಯಲ್ಲಿ ಸೇಬು ಗಿಡಗಳನ್ನು ನಾಟಿ ಮಾಡಿ ಒಂದೇ ವರ್ಷದಲ್ಲಿ ಉತ್ತಮ ಫಸಲು ಪಡೆದಿದ್ದಾರೆ. 1,750 ಕೆ.ಜಿ ಸೇಬು ಕಟಾವಿಗೆ ಸಿದ್ಧವಾಗಿದೆ. ಸಾಮಾನ್ಯವಾಗಿ ಸೇಬು ಕಟಾವಿಗೆ ಬರಲು 2-3 ವರ್ಷ ಬೇಕು. ಆದರೆ ಇಲ್ಲಿ ಒಂದೇ ವರ್ಷದಲ್ಲಿ ಕಟಾವಿಗೆ ಬಂದಿದೆ. ಹಿಮಾಚಲ ಪ್ರದೇಶದ ತಳಿಗಳಾದ ‘ಎಚ್.ಆರ್.ಎಂ.ಎಸ್-99’, …

Read More »

ಅಪ್ಪ-ಮಕ್ಕಳ ಕೈಯಲ್ಲಿರುವ ಬಿಜೆಪಿಯನ್ನು ಶುದ್ದೀಕರಣ ಮಾಡಬೇಕು.: ಈಶ್ವರಪ್ಪ

ಶಿವಮೊಗ್ಗ: ‘ಅಪ್ಪ-ಮಕ್ಕಳ ಕೈಯಲ್ಲಿರುವ ಬಿಜೆಪಿಯನ್ನು ಶುದ್ದೀಕರಣ ಮಾಡಬೇಕು. ಇದಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಈ ಚುನಾವಣೆ ನಂತರ ರಾಘವೇಂದ್ರ ಸೋತು ಮನೆಗೆ ಹೋಗುತ್ತಾರೆ. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.   ಇಲ್ಲಿನ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಶುಕ್ರವಾರ ಬೆಂಬಲಿಗರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ಸಿದ್ದಾಂತ ಉಳಿವಿಗಾಗಿ ಪ್ರತಿ ಮನೆಗೆ ಹೋಗಿ ನನಗೆ ಮತ ಹಾಕಲು ಹೇಳಿ. ಏ.19ಕ್ಕೆ ನನ್ನ …

Read More »

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ.: ಶಿವಾನಂದ ಪಾಟೀಲ್ ಸವಾಲು

ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದು, “ಸಕ್ಕರೆ ಕಾರ್ಖಾನೆಗಳಿಂದ‌ 50 ಲಕ್ಷ ಕೇಳಿದ್ದಾರೆ ಎಂಬ ಆರೋಪ ಸಾಬೀತು ಮಾಡಿದರೆ ನಾನು ರಾಜಕೀಯ ತ್ಯಜಿಸುವೆ” ಎಂದು ಸವಾಲು ಹಾಕಿದ್ದಾರೆ. ಒಂದು ವೇಳೆ ಆರೋಪವನ್ನು ಸಾಬೀತು ಮಾಡಲು ವಿಫಲರಾದರೆ ಶಾಸಕ ಯತ್ನಾಳ್ ಅವರು ರಾಜಕೀಯ ಬಿಡಲಿ ಎಂದಿದ್ದಾರೆ. ವಿಜಯಪುರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಸವಾಲೆಸೆದ ಸಚಿವ ಶಿವಾನಂದ, ಒಂದು ವೇಳೆ ಯತ್ನಾಳ್ ನನಗಿಂತ ಒಂದೇ …

Read More »

ಸಿಡಿಲು ಬಡಿದು 18 ಕುರಿ ಸಾವು

ಕುಂಸಿ: ಸಿಡಿಲು ಬಡಿದು 18 ಕುರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಮೀಪದ ಆಯನೂರು ಕೋಟೆಯಲ್ಲಿ ಶುಕ್ರವಾರ ನಡೆದಿದೆ. ಸಂಜೆ ಸಾಧಾರಣ ಮಳೆಯಾಗುತ್ತಿತ್ತು. ನಂತರ ಬಡಿದ ಸಿಡಿಲಿಗೆ 18 ಕುರಿಗಳು ಬಲಿಯಾಗಿವೆ. ಮಾಲೀಕ ಝಾಕಿರ್ ಹುಸೇನ್ ಅವರು ಕುರಿಗಳನ್ನು ಮೇಯಿಸಲು ಮಕ್ಕಳೊಂದಿಗೆ ಆಯನೂರು ಕೋಟೆ ಪಕ್ಕದ ಬಯಲಿಗೆ ಹೊಡೆದುಕೊಂಡು ಹೋಗಿದ್ದರು‌.ಸಾಧಾರಣ ಮಳೆಯ ನಂತರ ಆಕಸ್ಮಿಕವಾಗಿ ಬಡಿದ ಸಿಡಿಲಿಗೆ ಹದಿನೆಂಟು ಕುರಿಗಳು ಬಲಿಯಾಗಿವೆ. ಝಾಕಿರ್ ಅವರ ಕುಟುಂಬ ಕುರಿ ಮಾರಾಟದಿಂದಲೇ ಜೀವನ ನಡೆಸುತ್ತಿತ್ತು. …

Read More »

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ : `ದಸರಾ’ ಸೇರಿ ಒಟ್ಟು 121 ದಿನ ರಜೆ!

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. …

Read More »

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ ಅವರು ಶಿಕ್ಷೆಗೆ ಒಳಗಾದವರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ವಿಚಾರಣೆ ನಡೆಸಿದ ವಿಶೇಷ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಸ್ ರೇಖಾ ಅವರು ಶಿಕ್ಷಣಾಧಿಕಾರಿ ವೆಂಕಯ್ಯರಿಗೆ ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Read More »

ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ ಪೋಕ್ಸೊ ಪ್ರಕರಣ ಎದುರಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿ ಕಲ್ಲಮುಂಡ್ಕೂರು ಪ್ರೌಢಶಾಲೆಯ ಶಿಕ್ಷಕ ಗುರು ಎಂ.ಪಿ.ಯನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಪ್ರಕರಣದಿಂದಾಗಿ ಶಾಲೆಯಿಂದ ಅಮಾನತುಗೊಂಡಿದ್ದ ಆರೋಪಿ ಗುರು ಇತ್ತೀಚೆಗೆ ಜಿಲ್ಲಾ ಸೆಶನ್ಸ್‌ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಶಾಲೆಯ ಕೆಲವು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕ ಗುರು ವಿರುದ್ಧ ಸಂತ್ರಸ್ತ ಮಕ್ಕಳು, ಅವರ ಹೆತ್ತವರು ಮತ್ತು …

Read More »

₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶ, ಆರೋಪಿ ಬಂಧನ

ಹುಬ್ಬಳ್ಳಿ: ಗೋಕುಲ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಮಹಿಳೆಯನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿ, ₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಕುಪ್ಪಂ ನಿವಾಸಿ ಸಂಧ್ಯಾ ಬಂಧಿತ ಆರೋಪಿ.ಬಸ್‌ ನಿಲ್ದಾಣದ ಪ್ಲಾಟ್‌ಫಾರ್ಮ್‌ 4ರ ಬಳಿ ಜನವರಿ 5ರಂದು ಮಹಿಳೆ ಬಸ್‌ ಹತ್ತುವಾಗ, ಆರೋಪಿ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 139 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಳು. ಗೋಕುಲ ರೋಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ ಹುಕ್ಕೇರಿ: ‘ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ …

Read More »

ನಿಪ್ಪಾಣಿ: 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ನಿಪ್ಪಾಣಿ: ತಾಲ್ಲೂಕಿನ ಶೇಂಡೂರ ಗ್ರಾಮದ ಸುಮಾರು 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ತಾಲ್ಲೂಕಿನ ಭಿವಶಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಎಲ್ಲ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪಾ ತೋಡಕರ, ಸಂದೀಪ ದೇಸಾಯಿ, ಮೊದಲಾದವರು ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‍ಸಿಪಿ ಪಕ್ಷ ತೊರೆದು ಬಿಜೆಪಿಗೆ …

Read More »