Breaking News

Uncategorized

ತೆಲಂಗಾಣ ಔಷಧ ಘಟಕ ಸ್ಫೋಟ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಿಲ್ಲೆಯ ಹತ್ತನೂರ ಮಂಡಲದ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್‌ನ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದರು. ಗುರುವಾರ ಕಾರ್ಖಾನೆಯ ಆವರಣದಲ್ಲಿ ಅವಶೇಷಗಳಡಿ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ …

Read More »

ತಡರಾತ್ರಿ ಜಾಗತಿಕವಾಗಿ `Whats App’ ಸ್ಥಗಿತ : ಬಳಕೆದಾರರ ಪರದಾಟ

ನವದೆಹಲಿ: ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಜಾಗತಿಕ ಸ್ಥಗಿತವನ್ನು ಅನುಭವಿಸಿದ್ದು, ಅಸಂಖ್ಯಾತ ಬಳಕೆದಾರರಿಗೆ ಬುಧವಾರ ರಾತ್ರಿ 11:45 ರ ಸುಮಾರಿಗೆ ಸೇವೆಯನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಅಪ್ಲಿಕೇಶನ್ಗೆ ಲಾಗ್ ಇನ್ ಮಾಡಲು ಅಥವಾ ಪ್ಲಾಟ್ಫಾರ್ಮ್ನ ಬ್ರೌಸರ್ ಆಧಾರಿತ ಆವೃತ್ತಿಯಾದ ವಾಟ್ಸಾಪ್ ವೆಬ್ ಅನ್ನು ಪ್ರವೇಶಿಸಲು ಪ್ರಯತ್ನಿಸುತ್ತಿರುವ ಬಳಕೆದಾರರು ಪ್ರಸ್ತುತ ಸೇವೆ ಲಭ್ಯವಿಲ್ಲ ಎಂದು ಸೂಚಿಸುವ ದೋಷ ಸಂದೇಶವನ್ನು ಎದುರಿಸಿದ್ದಾರೆ. ಇಂಟರ್ನೆಟ್ ಸ್ಥಗಿತವನ್ನು ಮೇಲ್ವಿಚಾರಣೆ ಮಾಡುವ ವೆಬ್ಸೈಟ್ ಡೌನ್ಡೆಟೆಕ್ಟರ್ನಲ್ಲಿ ವರದಿಗಳ ಹೆಚ್ಚಳಕ್ಕೆ ಈ ಅಡ್ಡಿಯು …

Read More »

ದೇವೇಗೌಡ, ಕುಮಾರಸ್ವಾಮಿ ಕಣ್ಣೀರಿಗೆ ಮರುಳಾಗಬೇಡಿ: ಸಿಎಂ

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.‌ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ …

Read More »

ಡಿಕೆ ಶಿವಕುಮಾರ್ ವಿರುದ್ಧ ‘FIR’ ದಾಖಲು

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಕೆ ನಾಯ್ಡು ವಿರುದ್ಧ ಇದೀಗ FIR ದಾಖಲಾಗಿದೆ. ಬೆಂಗಳೂರಿನ ಹೈ ಗ್ರೌಂಡ್ ಠಾಣೆಯ ಪೊಲೀಸರಿಂದ FIR ದಾಖಳಿಸಿಕೊಳ್ಳಲಾಗಿದೆ.ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರಿಂದ ದೂರು ಸಲ್ಲಿಸಲಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಿಗೆ ಅವರು ಖಾಸಗಿ ದೂರನ್ನು ಸಲ್ಲಿಸಿದ್ದರು. ಬಿಜೆಪಿಯ …

Read More »

ಶಿವಣ್ಣ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ ಲೋಕಸಭೆ ಚುನಾವಣೆ (Lok Sabha Elections) ಪ್ರಚಾರ ಅಬ್ಬರದಿಂದ ಸಾಗಿದೆ. ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ ವಿಶ್ರಾಂತಿ ಇಲ್ಲದೆ ನಡೆದಿದ ಹಿನ್ನೆಲೆ ನಟ ಶಿವರಾಜ್​ಕುಮಾರ್ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಶಿವರಾಜ್​ಕುಮಾರ್​ಗೆ ಅನಾರೋಗ್ಯ, …

Read More »

ಪಕ್ಷೇತರ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ ವೀಣಾ ಕಾಶಪ್ಪನವರ್‌

ಬಾಗಲಕೋಟೆ, ಏಪ್ರಿಲ್‌ 01: ಲೋಕಸಭಾ ಅಭ್ಯರ್ಥಿಗಳು ಅಂತಿಮವಾಗುತ್ತಿದ್ದಂತೆ ಎಲ್ಲಾ ಪಕ್ಷಗಳಲ್ಲಿಯೂ ಅಸಮಾಧಾನ ಹೊಗೆಯಾಡುತ್ತಿದೆ. ಈ ಬಾರಿ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಅನೇಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್‌ಗೂ ಬಂಡಾಯದ ಬಿಸಿ ತಟ್ಟುತ್ತಿದ್ದು, ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಬೆಂಬಲಿಗರ ಸಭೆ ಕರೆದಿರುವುದು ರಾಜ್ಯ ಕಾಂಗ್ರೆಸ್‌ ನಾಯಕರ ಆತಂಕಕ್ಕೆ ಕಾರಣವಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಾಂಗ್ರೆಸ್‌ ಕಣಕ್ಕಿಳಿಸಿದ್ದು, …

Read More »

ಮೃಣಾಲ್ ಬೆಳಗಾವಿ ಧ್ವನಿಯಾಗಿ ಸಂಸತ್‌ನಲ್ಲಿ ಕೆಲಸ ಮಾಡಲಿದ್ದಾನೆ; ಹೆಬ್ಬಾಳಕರ್

ಹಿರೇಬಾಗೇವಾಡಿ: ‘ಜನರ ಕಷ್ಟ ಸುಖಗಳ ಬಗ್ಗೆ ಅರಿವಿರುವ ಮೃಣಾಲ್ ಹೆಬ್ಬಾಳಕರ, ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕನಸು ಕಟ್ಟಿಕೊಂಡಿದ್ದಾನೆ. ಬೆಳಗಾವಿ ಧ್ವನಿಯಾಗಿ ಸಂಸತ್‌ನಲ್ಲಿ ಕೆಲಸ ಮಾಡಲಿದ್ದಾನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಇಲ್ಲಿಗೆ ಸಮೀಪದ ಗಜಪತಿ, ಬಡಸ್ ಕೆ.ಎಚ್., ಕುಕಡೊಳ್ಳಿ, ಬೆಂಡಿಗೇರಿ, ನಾಗೇರಹಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಶನಿವಾರ ಮತಯಾಚಿಸಿದ ಅವರು, ‘ನೀವೆಲ್ಲ ಆಶೀರ್ವಾದ ಮಾಡಿ ಅವನನ್ನು ಸಂಸತ್‌ಗೆ ಕಳುಹಿಸಿಕೊಡಿ’ ಎಂದು …

Read More »

ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ, ಸರ್ಕಾರಿ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಜಾರಿ ಮಾಡದಿರುವುದು ಸ್ಪಷ್ಟವಾಗಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದು ಚುನಾವಣಾಧಿಕಾರಿಗಳಿಗೆ ಬಿಜೆಪಿ ಮಾಹಿತಿ ನೀಡಿದೆ. “ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗಳಿಂದಲೇ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಮಾರ್ಚ್ 25 ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ …

Read More »

ಕರಾವಳಿಯಲ್ಲಿ ಜೀವ ಹಿಂಡುವ ಬಿಸಿಲಿನ ತಾಪ! ಸುಡು ಬಿಸಿಲಿನಿಂದ ಪಾರಾಗಲು ಮನೆ ಮೇಲೆ ಸ್ಪ್ರಿಂಕ್ಲರ್ ಅಳವಡಿಕೆ!

ಮಂಗಳೂರು: ಕರ್ನಾಟಕದಲ್ಲಿ (Karnataka Weather) ಕಳೆದ ಕೆಲ ವಾರಗಳಿಂದ ಒಂದೇ ಸಮನೆ ರೌದ್ರಾವತಾರ ತೋರುತ್ತಿರುವ ಬಿಸಲು ಜನರ ನೆತ್ತಿ ಸುಡುತ್ತಿದೆ. ಸುಡುವ ಬಿಸಿಲಿಗೆ ಬೆದರಿ ಜನರು ಮನೆಯಿಂದ ಹೊರ ಬರೋಕೆ ಹೆದರುತ್ತಿದ್ದು, ಹವಾಮಾನ ಇಲಾಖೆ ಕೂಡ ಬಿಸಿಲಿನಿಂದ (Temperature Rise) ಪಾರಾಗಲು ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಇನ್ನು ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್‌ನಲ್ಲಿ ತಾಪಮಾನ …

Read More »

ಕೇಂದ್ರ ಸರ್ಕಾರದಿಂದ ನ್ಯಾಯಾಂಗದ ಮೇಲೆ ಒತ್ತಡ: ಪ್ರಿಯಾಂಕಾ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದ ಬಳಿಕ ಕೇಂದ್ರವು ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ. ನ್ಯಾಯಾಂಗವು ಸ್ವತಂತ್ರ ಮತ್ತು ಬಲಿಷ್ಠವಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಇಷ್ಟವಿಲ್ಲವೇ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿ ಗುಂಪು’ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ಅದರ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) …

Read More »