ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಕದನ (Rajya Sabha Election) ಕುತೂಹಲ ಕೆರಳಿಸಿದೆ. “ನಂಬರ್ ಗೇಮ್” ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಒಟ್ಟು ನಾಲ್ಕು ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಇರುವುದರಿಂದ ಚುನಾವಣಾ ಕಣ ರೋಚಕವಾಗಿದೆ. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು (Congress MLAs) ರೆಸಾರ್ಟ್ಗೆ (Resort Politics) ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಿದೆ. ಈ ಸಂಬಂಧ ಈಗಾಗಲೇ ಸೂಚನೆಯನ್ನೂ ನೀಡಿದೆ. ಆಡಳಿತ …
Read More »ಸಂಕೇಶ್ವರ-ಮೈಸೂರು ಬಸ್ ಆರಂಭ
ಸಂಕೇಶ್ವರ: ವಾಯವ್ಯ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದಿಂದ ಮೈಸೂರಿಗೆ ಹೊಸ ಬಸ್ ಸಂಚಾರವನ್ನು ಗುರುವಾರ ಆರಂಭಿಸಲಾಗಿದೆ. ಈ ಬಸ್ ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರದಿಂದ ಹೊರಟು, ಮಧ್ಯಾಹ್ನ 2 ಗಂಟೆಗೆ ಸಂಕೇಶ್ವರ ಬಸ್ ನಿಲ್ದಾಣಕ್ಕೆ ಬರಲಿದೆ. ಸಂಕೇಶ್ವರದಿಂದ 2.10ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಮೈಸೂರು ತಲುಪಲಿದೆ. ರಾತ್ರಿ 8 ಗಂಟೆಗೆ ಮೈಸೂರಿನಿಂದ ಹೊರಡುವ ಬಸ್, ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರ ತಲುಪಲಿದೆ.730 ಕಿ.ಮೀ. ದೂರದ ಪ್ರಯಾಣಕ್ಕೆ ₹700 ದರ ನಿಗದಿಪಡಿಸಲಾಗಿದೆ.
Read More »ಲೋಕಸಭೆ ಚುನಾವಣೆ: ಪರಿಶಿಷ್ಟರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ
ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಈ ಬಾರಿ ಎಸ್ಸಿ/ಎಸ್ಟಿ ಸಮುದಾಯದ ಅನಂತಕುಮಾರ ಬ್ಯಾಕೋಡ ಅವರಿಗೆ ನೀಡಬೇಕು ಎಂದು ಪಕ್ಷದ ಎಸ್ಸಿ/ಎಸ್ಟಿ ಘಟಕದ ಉಪಾಧ್ಯಕ್ಷೆ ಲಕ್ಷ್ಮೀ ನಾಗಣ್ಣವರ ವರಿಷ್ಠರನ್ನು ಒತ್ತಾಯಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪರಿಶಿಷ್ಟ ಜಾತಿಯವರಿಗೆ 50 ವರ್ಷಗಳಿಂದಲೂ ಟಿಕೆಟ್ ನೀಡಿಲ್ಲ. ಸುಮಾರು 6 ಲಕ್ಷ ಮತಗಳಿದ್ದರೂ ಈ ಜನಾಂಗಕ್ಕೆ ವಿಧಾನ ಪರಿಷತ್, ವಿಧಾನಸಭೆ ಮತ್ತು ನಿಗಮ ಮಂಡಳಿಗೂ ಪರಿಗಣಿಸಿಲ್ಲ’ ಎಂದು ಆಕ್ರೋಶ …
Read More »ರಾಜ್ಯ ಕಾನೂನು ವಿವಿ: 2 ವರ್ಷಗಳಿಂದ ನಡೆದಿಲ್ಲ ಘಟಿಕೋತ್ಸವ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ (ಅಕಾಡೆಮಿಕ್ ಕೌನ್ಸಿಲ್) ರಚನೆ ವಿಳಂಬ ಆಗಿರುವ ಕಾರಣ ಎರಡು ವರ್ಷಗಳಿಂದ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆದಿಲ್ಲ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದ 108 ಕಾನೂನು ಕಾಲೇಜುಗಳಿವೆ. 2021-22 ಮತ್ತು 2022-23ನೇ ಸಾಲಿನ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿಯ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಮಾಣ ಪತ್ರದ ನಿರೀಕ್ಷೆಯಲ್ಲಿದ್ದಾರೆ. ರಚನೆಯಾಗದ ಮಂಡಳಿ: ‘ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ …
Read More »ಭಾರತದಲ್ಲಿ ತಾಯಿಗಿದೆ ಪರಮೋಚ್ಛ ಸ್ಥಾನ: ಸಿದ್ಧರಾಮ ಸ್ವಾಮೀಜಿ
ಹಂದಿಗುಂದ: ‘ತಾಯಿ ಬಗ್ಗೆ ಎಷ್ಟೇ ವರ್ಣಿಸಿದರೂ ಕಡಿಮೆಯೇ. ನಮ್ಮ ದೇಶದಲ್ಲಿ ತಾಯಿ ಪರಮೋಚ್ಛ ಸ್ಥಾನ ನೀಡಲಾಗಿದೆ’ ಎಂದು ಗದಗ-ಡಂಬಳದ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಹಂದಿಗುಂದದಲ್ಲಿ ನಡೆದ ಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ ಪೂರ್ವಾಶ್ರಮದ ತಾಯಿ ಶಿವಗಂಗಮ್ಮ ಮಠದ ಅವರ ಅಮೃತ ಮಹೋತ್ಸವ ಮತ್ತು ಮಾತೃವಂದನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಶಿವಾನಂದ ಸ್ವಾಮೀಜಿ, ‘ಪ್ರತಿಯೊಬ್ಬರೂ ಹೆತ್ತವರ ಬಗ್ಗೆ ಕಾಳಜಿ ಮಾಡಬೇಕು. ಎಲ್ಲವನ್ನೂ ಮಾಡಿ ನಾನೇನು …
Read More »ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ದ ದೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ತಗಡೇ ಹಾಗೂ ಗುಮ್ಮಿಸ್ಕೊತ್ತೀಯಾ ಪದ ಬಳಕೆಗೆ ದೂರು ದಾಖಲಾದ ಬೆನ್ನಲ್ಲೇ ಗೌಡತಿಯರ ಸೇನೆಯಿಂದ ನಟ ವಿರುದ್ದ ದೂರು ಸಲ್ಲಿಸಲಾಗಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರೆ ಈಗ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಜಯಶ್ರೀ , ರೇಣುಕಾ ನೇತೃತ್ವದಲ್ಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಮಹಿಳೆಯರು ನಟ ಮಹಿಳೆಯರ ಕುರಿತು ಮಾಡಿದ ಕಮೆಂಟ್ ಖಂಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರ್ಶನ್ …
Read More »ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು,ಫೆ.22- ರಾಜ್ಯಸಭಾ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ನ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ಮಹತ್ವದ ಶಾಸಕಾಂಗ ಸಭೆ ಸಂಜೆ ನಡೆಯಲಿದೆ. ಸಂಜೆ ಏಳು ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಸಭೆಯಲ್ಲಿ ರಾಜ್ಯಸಭಾ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಎನ್ಡಿಎ ಅಭ್ಯರ್ಥಿ ಗೆಲುವಿನ ಕುರಿತು ರಣತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ …
Read More »ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್
ನವದೆಹಲಿ, (ಫೆಬ್ರವರಿ 21): ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ(sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್ಆರ್ಪಿ ಪ್ರತಿ ಕ್ವಿಂಟಲ್ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ …
Read More »ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ
ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನಹೈಡ್ರಾಮದವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಶಾಪ್ನಲ್ಲಿದ್ದ ವೃದ್ಧನ ಮುಂದೆ …
Read More »ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ
ಬೆಂಗಳೂರು, ಫೆಬ್ರವರಿ 21: ಬೆಂಗಳೂರು, (ಫೆಬ್ರವರಿ 21): ಸಿಗರೇಟ್ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. …
Read More »
Laxmi News 24×7