ಬೆಂಗಳೂರು: ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ. ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ …
Read More »ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ.
ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …
Read More »ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತಮ್ಮನನ್ನೇ ಕೊಂದ ಪುತ್ರ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಆಸ್ತಿಗಾಗಿ ಹೆತ್ತ ತಾಯಿಯನ್ನು ಮಗ ಕೊಲೆ ಮಾಡಿರುವ ಪ್ರಕರಣ ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ. ಚಿನ್ನಮ್ಮ ಕೊಲೆಗೀಡಾದ ಮಹಿಳೆ. ಚಿನ್ನಮ್ಮನಿಗೆ ಇಬ್ಬರು ಗಂಡು ಮಕ್ಕಳು. ಮೊದಲನೇ ಮಗ ರಾಘವೇಂದ್ರ ಮತ್ತು ಎರಡನೇ ಮಗ ರಾಜೇಶ್. ಮೊದಲ ಮಗ ರಾಘವೇಂದ್ರನಿಗೆ ಸುಧಾ ಎಂಬುವವಳೊಂದಿಗೆ ಮದುವೆ ಆಗಿದೆ. ಕಳೆದ ಒಂದು ವರ್ಷದ ಹಿಂದೆ ಚಿನ್ನಮ್ಮ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಇರೋ ಜಮೀನನ್ನು ಮಾರಿ ಇಬ್ಬರು ಮಕ್ಕಳಿಗೆ ಸಮನಾಗಿ ಹಂಚುವ …
Read More »ಅರ್ಬಾಜ್ ಖಾನ್ ಬರ್ತ್ಡೇ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹೊಸ ಲುಕ್
ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ಬರ್ತ್ಡೇ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಭಾಗವಹಿಸಿ ಗಮನ ಸೆಳೆದರು. ಬಾಲಿವುಡ್ ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ನಿನ್ನೆಯಷ್ಟೇ ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ತಮ್ಮ ಆತ್ಮೀಯರಿಗಾಗಿ ಗ್ರ್ಯಾಂಡ್ ಪಾರ್ಟಿಯನ್ನು ಆಯೋಜಿಸಿದ್ದರು. ಅರ್ಬಾಜ್ ಖಾನ್ ಹಿರಿಯ ಸಹೋದರ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಪಾರ್ಟಿಯಲ್ಲಿ ಭಾಗವಹಿಸಿ ಗಮನ ಸೆಳೆದರು. …
Read More »ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …
Read More »ರೇಮೆಂಡ ಕಂಪನಿ ಹೆಸರು ಬಳಿಸಿ ನಕಿಲಿ ಬಟ್ಟೆ ಮಾರಾಟ ಮೂರೂ ಅಂಗಡಿ ಮೇಲೆ ಪೊಲೀಸ ಕ್ರಮ
ಪ್ರತಿಯೊಬ್ಬರೂ ಜೀವನದ ಲೈಫ್ ಸ್ಟೈಲ್ ತಕ್ಕನಾಗಿ ಬ್ರ್ಯಾಂಡೆಡ್ ಬಟ್ಟೆಗಳನ್ನು ಧರಿಸುವುದು ಸರ್ವೇ ಸಾಮಾನ್ಯವಾಗಿರುತ್ತದೆ ಆದರೆ ಬ್ರ್ಯಾಂಡೆಡ್ ಬಟ್ಟೆಗಳು ಕಡಿಮೆ ದರದಲ್ಲಿ ಸಿಗುತ್ತೆ ಅಂದರೆ ಸಕ್ಕರೆಗೆ ಇರುವೆ ಮುತ್ತಿದಂತೆ ಮುತ್ತಿಕೊಳ್ಳುತ್ತೇವೆ ಅಲ್ಲೇ ನೋಡಿ ಮೋಸ ಹೋಗುವುದು ಮೋಸ ಮಾಡಿಸಿಕೊಳ್ಳುವವವರು ಇದ್ದಾಗ ಮೋಸ ಮಾಡುವವರು ಇರುತ್ತಾರೆ, ಅನ್ನುವುದಕ್ಕೆ ಈ ಘಟನೆ ನಿದರ್ಶನ ನಗರದ ಖಡೆ ಬಜಾರನಲ್ಲಿ ಮೂರೂ ಅಂಗಡಿಯವರು ರೇಮೆಂಡ ಕಂಪನಿ ಬಟ್ಟೆ ಎಂದು ಲೋಕಲ್ ಬಟ್ಟೆಯನ್ನು ಮಾರಾಟ ಮಾಡಿ ಜನರನ್ನು ಮರಳು …
Read More »ಕಳೆದ ಎರಡು ತಿಂಗಳಿನಿಂದ ಗೌರವ ವೇತನ ಇಲ್ಲದೇ ಅತಿಥಿ ಉಪನ್ಯಾಸಕರು ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಬರೆದ ಪತ್ರರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. …
Read More »ಶಾಸಕ ಹೆಚ್ ಡಿ ರೇವಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ …
Read More »ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …
Read More »ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ
ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) …
Read More »