ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದು, ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಳಿದಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಹುಬ್ಬಳ್ಳಿಯಲ್ಲಿ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ರಾಮಮಂದಿರ ಆಂದೋಲನದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಸಮರ ಶುರುವಾಗಿದೆ. …
Read More »ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ
ಬೆಳಗಾವಿ, ಜನವರಿ 01: ಗಡಿನಾಡು ಬೆಳಗಾವಿಯಲ್ಲಿ (Belagavi)ಕನ್ನಡ(Kannada) ಭಾಷೆ ಉಳಿವಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟಗಳು ನಡೆದ ಮೇಲೂ ಕೂಡ ಜಿಲ್ಲೆಯ ಕನ್ನಡ ಶಾಲೆಯ ಮಕ್ಕಳಿಗೆ ಮಲತಾಯಿ ಧೋರಣೆ ಮಾತ್ರ ನಿಂತಿಲ್ಲ. ಹೌದು ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ (Marathi) ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ …
Read More »ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಬೆಂಗಳೂರು, ಜನವರಿ 2: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟೀಕಿಸಿದ್ದಾರೆ. ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ …
Read More »ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ದಾವಣಗೆರೆ : ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ. ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. …
Read More »ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ
ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ. ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ. ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ …
Read More »ಯಡಿಯೂರಪ್ಪ ನನ್ನ ಅಧ್ಯಕ್ಷ ಮಾಡಿಲ್ಲ : ವಿಜಯೇಂದ್ರ
ವಿಜಯಪುರ : ನನ್ನನ್ನು ಬಿ.ಎಸ್. ಯಡಿಯೂರಪ್ಪನವರು ಅಧ್ಯಕ್ಷನನ್ನಾಗಿ ಮಾಡಿಲ್ಲ. ಪ್ರಧಾನಿ ನರೇಂದ್ರ ಮೊದಿ, ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ವಿರುದ್ಧ ಶಾಸಕ ಯತ್ನಾಳ್ ಆರೋಪ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಆರೋಪದಲ್ಲಿ ಸತ್ಯಾಂಶ ಇದ್ರೆ ಪ್ರತಿಕ್ರಿಯೆ ಬರುತ್ತದೆ. ಹುಡುಗಾಟಿಕೆ ಹೇಳಿಕೆ ಇದ್ರೆ ಬರಲ್ಲ ಎಂದು ಟಾಂಗ್ ಕೊಟ್ಟರು. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಮೇಲೆ …
Read More »ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್ ಮಾತನ್ನು ಸಿಎಂ ನೆನಪಿಸಿದರು. ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ …
Read More »ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಕ್ಯಾಮೆರಾ, ವಾಚ್ಟವರ್ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!
ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ …
Read More »ಕಾರು ಮನೆಯಲ್ಲಿದ್ದರೂ ಫಾಸ್ಟ್ಟ್ಯಾಗ್ನ ಹಣ ಕಡಿತ
ಬೆಂಗಳೂರು, ಡಿಸೆಂಬರ್ 27: ಟೋಲ್ ಫ್ಲಾಜಾಗಳಲ್ಲಿ (Toll Plaza) ಉಂಟಾಗುವ ಟ್ರಾಫಿಕ್ ಸಮಸ್ಯೆ ತಡೆಗಟ್ಟಲು ಕೇಂದ್ರ ಸರ್ಕಾರ ಫಾಸ್ಟ್ಟ್ಯಾಗ್ (Fastag) ಸೌಲಭ್ಯ ಜಾರಿಗೆ ತಂದಿದೆ. ಈ ಫಾಸ್ಟ್ಟ್ಯಾಗ್ನಿಂದ ಬೆಂಗಳೂರಿನ ವಾಹನ ಮಾಲಿಕರು ಹಣ ಕಳೆದುಕೊಂಡಿದ್ದಾರೆ. ಹೌದು ಸುಮಾರು ಒಂದು ತಿಂಗಳ ಹಿಂದೆ, ಜೆನಿಲ್ ಜೈನ್ ಎಂಬುವರು ಮನೆಯಲ್ಲಿದ್ದಾಗ ಅವರ ಮೊಬೈಲ್ಗೆ ಬೆಂಗಳೂರು-ಮಂಗಳೂರು ಹೆದ್ದಾರಿಯ ಟೋಲ್ ಫ್ಲಾಜಾದಲ್ಲಿ 60 ರೂಪಾಯಿ ಸಂಗ್ರಹಿಸಲಾಗಿದೆ ಮೆಸೆಜ್ ಬಂದಿತ್ತು. ಇದರಿಂದ ಗಾಭರಿಗೊಂಡ ಜೆನಿಲ್ ಜೈನ್, ತಮ್ಮ ಕಾರು ಅಥವಾ ಫಾಸ್ಟ್ಟ್ಯಾಗ್ …
Read More »ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. …
Read More »
Laxmi News 24×7