Breaking News

Uncategorized

60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್​ ಕಡ್ಡಾಯ..

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್​ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು …

Read More »

ಮಹಿಳೆಯ ಕಿಡ್ನಿಯಲ್ಲಿತ್ತು 300ಕ್ಕೂ ಅಧಿಕ ಕಲ್ಲುಗಳು

ಕಿಡ್ನಿಯಲ್ಲಿ ಒಂದೆರೆಡು ಕಲ್ಲುಗಳು ಇರುವುದನ್ನು ನೋಡಿದ್ದೇವೆ. ಆದರೆ, ತೈವಾನ್ ಮೂಲದ​ ಮಹಿಳೆಯೊಬ್ಬಳ ಕಿಡ್ನಿಯಿಂದ ಬರೋಬ್ಬರಿ 300 ಕಲ್ಲುಗಳನ್ನು ಆಪರೇಷನ್​ ಮೂಲಕ ಹೊರತೆಗೆಯಲಾಗಿದ್ದು, ವೈದ್ಯರನ್ನೇ ಅಚ್ಚರಿಗೆ ದೂಡಿದೆ. ಅದರಲ್ಲೂ ಅಷ್ಟೊಂದು ಕಿಡ್ನಿ ಸ್ಟೋನ್ಸ್​ಗೆ ಕಾರಣ ಏನು ಅಂತಾ ಕೇಳಿದ್ರೆ ಆಘಾತವಾಗೋದು ಖಂಡಿತ.   ಬೆನ್ನಿನ ಕೆಳಭಾಗದಲ್ಲಿ ತೀವ್ರ ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಕ್ಸಿಯಾವೋ ಯು ಹೆಸರಿನ ಮಹಿಳೆ ಕೆಲ ದಿನಗಳ ಹಿಂದಷ್ಟೇ ತೈವಾನ್​ನ ಚಿ ಮೆಯಿ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಳು. …

Read More »

ಯತ್ನಾಳ್‌ ಹುಚ್ಚು ನಾಯಿಯಿದ್ದಂತೆ: ರೇಣುಕಾಚಾರ್ಯ

ದಾವಣಗೆರೆ: ಯತ್ನಾಳ್‌ (Basanagouda Patil Yatnal) ಹುಚ್ಚು ನಾಯಿಯಿದ್ದಂತೆ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತದೆ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದ ಅವರು, ಸರ್ವಜ್ಞರ ವಚನ ಹೇಳುವ ಮೂಲಕ …

Read More »

ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ.: ಜೋಶಿ

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕ್ಷೇತ್ರ ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು. ವಸಂತ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್​​ನಿಂದ ಸ್ಪರ್ಧಿಸಿದರೂ ಸಂತೋಷ. ಅವರ ಸ್ಪರ್ಧೆಯಿಂದ ನನಗೇನೂ ಭಯವಿಲ್ಲ. ಅದು ಅವರ ಪಾರ್ಟಿಯ …

Read More »

ರಾಮನಗರ: ಕಾಡಾನೆ ದಾಳಿಯಿಂದ ರೈತ ಸಾವು

ರಾಮನಗರ: ಕಾಡಾನೆ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬುವರೇ ಮೃತ ರೈತರಾಗಿದ್ದು, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ಇಂದು ಮುಂಜಾನೆ ಎದ್ದು ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ …

Read More »

ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ವ್ಯಕ್ತಿಯ ವಿರುದ್ಧ ದೂರು ದಾಖಲು

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗಿರಿನಗರ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ದೇವರಾಜೇ ಅರಸ್​ ನೀಡಿದ ದೂರಿನ ಅನ್ವಯ ಜಗದೀಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಡಿಸೆಂಬರ್ 14ರಂದು ಬೆಳಗ್ಗಿನ ಜಾವ ಆರೋಪಿ ಜಗದೀಶ್, ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ ಕುಮಾರ್ ಎಂಬಾತನ ಮಧ್ಯೆ ಹಣದ …

Read More »

ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ ಬೆಂಗಳೂರಲ್ಲೂ ನಡೆಯಲಿ: ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲೂ ನಾವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.   ವಿಧಾನ ಪರಿಷತ್‌ನಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಷಯಗಳ ಮೇಲೆ ನಡೆದ ಚರ್ಚೆಯ ವೇಳೆ ಅವರು ಮಾತನಾಡಿ, ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವೇಳೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ವಿಷಯ ಚರ್ಚೆಯಾಗಬೇಕು ಎನ್ನುವ ಮಾನಸಿಕ ಸ್ಥಿತಿಯಿಂದ …

Read More »

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು …

Read More »

ಡಿಕೆಶಿ ವಿರುದ್ಧದ ಪ್ರಕರಣದ ಸಿಬಿಐ ತನಿಖೆ ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮದ ಕುರಿತು ಚರ್ಚಿಸಲು, ಅವಕಾಶ ಕೋರಿ ಬಿಜೆಪಿ ಮಂಡಿಸಿದ ನಿಲುವಳಿ ಸೂಚನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ರೂಲಿಂಗ್ ನೀಡಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಡೆಯ ದಿನವಾದ ಇಂದು ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಸಾರ್ವಜನಿಕ ಮಹತ್ವದ ವಿಷಯದಡಿ ಡಿ.ಕೆ.ಶಿವಕುಮಾರ್ …

Read More »

ವಿಧಾನ ಪರಿಷತ್‌ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಬೆಳಗಾವಿ/ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು.   ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೋರಿದರು. 2023ನೇ ಸಾಲಿನ …

Read More »