Breaking News

Uncategorized

ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ:ಸಿದ್ದರಾಮಯ್ಯ

ಬಾಗಲಕೋಟೆ: ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾದಾಮಿ ಪಟ್ಟಣದ ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ. ಭೀಮಸೇನ ಚಿಮ್ಮನಕಟ್ಟಿ ಅವರನ್ನು ಗೆಲ್ಲಿಸಿ. ಬಾದಾಮಿ ಜನತೆಗೆ ನಾನು ಸದಾ ಚಿರಋಣಿ …

Read More »

ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಕಾಂಗ್ರೆಸ್​ಗೆ 141 ಸೀಟು ಬರೋದು ಪಕ್ಕಾ ಎಂದು ಡಿ ಕೆ ಶಿ

ಬೆಂಗಳೂರು: ಬಜರಂಗದಳ ನಿಷೇಧ ಘೋಷಣೆ ವಾಪಸ್ ಪಡೆಯೋದಿಲ್ಲ. ಬಿಜೆಪಿಯವರು ಯಾವ ರೀತಿ ಬೇಕಾದ್ರೂ ನೆರೇಷನ್ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಂಡಿದ್ದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ? ನಾನು ಕೂಡ ರಾಮ, ಆಂಜನೇಯ, ಶಿವನ ಭಕ್ತ. ನಾನು ಕೂಡ ದಿನ ಹನುಮಾನ್ ಚಾಲೀಸಾ ಪಠಣ ಮಾಡುತ್ತೇನೆ. ಕುಂಬಳಕಾಯಿ ಕಳ್ಳ ಅಂದ್ರೆ ಇವರ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಾ …

Read More »

ಕಾಂಗ್ರೆಸ್​-ಜೆಡಿಎಸ್ ಎರಡೂ ಒಂದೇ, ಭ್ರಷ್ಟ, ಪರಿವಾರವಾದಿ ಪಕ್ಷಗಳು:ಮೋದಿ

ಚಿತ್ರದುರ್ಗ: ಕಾಂಗ್ರೆಸ್ ಮತ್ತು ಜೆಡಿಎಸ್​ ನೋಡಲು ಬೇರೆ ಪಕ್ಷಗಳಂತೆ ಕಂಡು ಬಂದರೂ, ಎರಡೂ ಪಕ್ಷಗಳು ಒಂದೇ ಆಗಿವೆ. ಉಭಯ ಪಕ್ಷಗಳು ಭ್ರಷ್ಟ, ಪರಿವಾರವಾದಿಯಾಗಿವೆ. ಈ ಪಕ್ಷಗಳು ಸಮಾಜದಲ್ಲಿ ಒಡಕುಗಳನ್ನು ಬಿತ್ತುತ್ತವೆ. ಅವರ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ನಿಧಾನಗತಿಯಲ್ಲಿತ್ತು. ಬಿಜೆಪಿಯ ಡಬಲ್​ ಇಂಜಿನ್​ ಸರ್ಕಾರ ರಚನೆಯಾಗುತ್ತಿದ್ದಂತೆ ಅಭಿವೃದ್ಧಿಗೆ ವೇಗ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚಿತ್ರದುರ್ಗದಲ್ಲಿಂದು ಬಿಜೆಪಿ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಚಿತ್ರದುರ್ಗದ ಕೋಟೆಯನ್ನು ಏಳು …

Read More »

ಮರಾಠಿ ಜನರನ್ನು ಸೋಲಿಸುವ ಉದ್ದೇಶವಿಟ್ಟುಕೊಂಡು ಬಿಜೆಪಿಯವರು ಈಗಾಗಲೇ ಬೆಳಗಾವಿಗೆ ಹೋಗಿದ್ದಾರೆ.: ರಾವುತ್‌

ಮುಂಬೈ: ‘ಮೇ 10ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಅಂಗವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಬೇಲಗಾವಿ ಮೂಲದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್‌) ಪರವಾಗಿ ಪ್ರಚಾರ ಮಾಡಬೇಕು’ ಎಂದು ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ನಾಯಕ ಸಂಜಯ್‌ ರಾವುತ್‌ ಅವರು ಭಾನುವಾರ ತಿಳಿಸಿದರು.   ಕರ್ನಾಟಕದಿಂದ ಕಾರಾವಾರದ ಸುತ್ತಮುತ್ತ ಇರುವ 865 ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್‌ ಪಕ್ಷ ಹಲವು …

Read More »

ಇಂದು ಬೆಳಗಾವಿಯಲ್ಲಿ ಕಿಚ್ಚನ ರೋಡ್ ಶೋ ಮತ್ತೆಬೆಳಗಾವಿ ವಿವಿಧ ಬಡಾವಣೆಗಳಲ್ಲಿಪ್ರಚಾರ

ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಸೋಮವಾರ ಆಗಮಿಸಲಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿ ಜನಪ್ರಿಯಗಳಿಸಿದ ನಟ  ಸುದೀಪ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ನಾಳೆ ಸಂಜೆ: 5 ಗಂಟೆಗೆ ಖಾಸಭಾಗ ಬಸವೇಶ್ವರ ಸರ್ಕಲ್ ದಿಂದ ಪ್ರಚಾರ ಪಾದಯಾತ್ರೆ …

Read More »

ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ

ಮೂಡಲಗಿ: ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ ಪ್ರಮಾಣದಲ್ಲಿ ಗೆಲುವನ್ನು ದಾಖಲಿಸಲು ಅನುಕೂಲವಾಗುತ್ತದೆ ಎಂದು ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಕಳಕಳಿಯ ಮನವಿ ಮಾಡಿಕೊಂಡರು. ಅವರು, ರವಿವಾರದಂದು ಪಟ್ಟಣದ ಹಂದಿಗುಂದ …

Read More »

ಮಾಗಡಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶನಿವಾರ ಜೆಡಿಎಸ್​ ಅಭ್ಯರ್ಥಿ ಮಂಜುನಾಥ್ ಪರ ಪ್ರಚಾರ ನಡೆಸಿದರು.

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ಪ್ರಚಾರ ಅಖಾಡಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಳಿದಿದ್ದಾರೆ. ಅಂತೆಯೇ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ಶನಿವಾರ ದೊಡ್ಡಗೌಡ್ರು ಭೇಟಿ ನೀಡಿ, ಕೆಂಪೇಗೌಡ ಕೋಟೆ ಮಾಗಡಿಯಲ್ಲಿ ಜೆಡಿಎಸ್ ಸಮಾವೇಶದಲ್ಲಿ ಅಭ್ಯರ್ಥಿ ಎ.ಮಂಜುನಾಥ್ ಪರ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಮಾಗಡಿಗೆ ಬಂದಿಳಿದ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ್ರು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿದ ಮಾತನಾಡಿದ …

Read More »

ಮನ್ ಕಿ ಬಾತ್ ಗೆ ಶತಕದ ಸಂಭ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಭಾಷಣಕ್ಕೆ ಶತಕದ ಸಂಭ್ರಮ. ಕೋಟ್ಯಂತರ ಜನರ ಮನಗೆದ್ದಿರುವ ಪ್ರಧಾನಿ ಮೋದಿಯವರ ಮನದ ಮಾತು 100ನೇ ಕಂತಿನ ವಿಶೇಷ ರೆಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರದ ನಿಟ್ಟಿನಲ್ಲಿ ಕರ್ನಾಟಕದ ಪ್ರವಾಸದಲ್ಲಿರುವುದು ವಿಶೇಷ. 2014ರ ಅಕ್ಟೋಬರ್ 4ರಂದು ಪ್ರಧಾನಿ ಮೋದಿಯವರ ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮ ಆರಂಭವಾಯಿತು. ಮನ್ ಕೀ ಬಾತ್ ನನಗೆ ಒಂದು ಕಾರ್ಯಕ್ರಮವಲ್ಲ, ಅದು …

Read More »

ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ

ಬೆಳಗಾವಿ: ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ …

Read More »

ಉಚಿತ್ ಬಸ್ ಸೇವೆ ನೀಡುವ ಕಾಂಗ್ರೆಸ್​​ನ 5ನೇ ಭರವಸೆ ಅವೈಜ್ಞಾನಿಕ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ನೀಡುವ ಭರವಸೆ ನೀಡಿ ಕಾಂಗ್ರೆಸ್ 5ನೇ ಗ್ಯಾರೆಂಟಿ ಯೋಜನೆ ಘೋಷಿಸಿದೆ. ಈ ಬಗ್ಗೆ ನಳಿನ್​ ಕುಮಾರ್​ ಕಟೀಲ್​ ಪ್ರತಿಕ್ರಿಯಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಮಂಗಳೂರು: ರಾಹುಲ್ ಗಾಂಧಿಯಿಂದ ಮಂಗಳೂರಿನಲ್ಲಿ ಕಾಂಗ್ರೆಸ್​ನ 5ನೇ ಭರವಸೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇದೊಂದು ಅವೈಜ್ಞಾನಿಕ ಭರವಸೆ ಎಂದು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಕಾಂಗ್ರೆಸ್ ಗೆಲ್ಲೊದೇ ಗ್ಯಾರಂಟಿ ಇಲ್ಲ, ಕಾಂಗ್ರೆಸ್​ನದ್ದೇ ಗ್ಯಾರಂಟಿ …

Read More »