Breaking News

Uncategorized

ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಲಿವೆ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆಗಳು!

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಶುರುವಾಗಿದ್ದು, ಸುವರ್ಣ ವಿಧಾನಸೌಧದ ಮುಂದೆ ತಲೆ ಎತ್ತಿರುವ ಮೂರು ಮಹನೀಯರ ಪ್ರತಿಮೆಗಳ ಸೌಂದರ್ಯೀಕರಣ ಕಾಮಗಾರಿ ಭರದಿಂದ ಸಾಗಿದೆ.   ಹೌದು ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕ‌ರ್ ಅವರ ಪ್ರತಿಮೆಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಿಲ್ಲಿಸಿ ಲೋಕಾರ್ಪಣೆಗೊಳಿಸಿತ್ತು. ಪ್ರತಿಮೆಗಳ ಸುತ್ತಲೂ ಯಾವುದೇ ರೀತಿ ರಕ್ಷಣಾ ಗೋಡೆ, ಹುಲ್ಲುಹಾಸು, ಬೆಳಕಿನ ವ್ಯವಸ್ಥೆ …

Read More »

ಯಾವುದನ್ನೂ ಉಚಿತವಾಗಿ ನೀಡಬಾರದು: ನಾರಾಯಣ ಮೂರ್ತಿ

ಬೆಂಗಳೂರು: ”ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳನ್ನು ಪಡೆಯುವ ಜನರು ಸಮಾಜದ ಒಳಿತಿಗಾಗಿ ಮತ್ತೆ ಕೊಡುಗೆ ನೀಡಬೇಕು” ಎಂದು ಇನ್ಫೋಸಿಸ್ ಸಹಸಂಸ್ಥಾಪಕರಾದ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.   ಬೆಂಗಳೂರು ಟೆಕ್ ಸಮ್ಮಿಟ್ 2023ರ 26ನೇ ಆವೃತ್ತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕೆ ತಲುಪಿದರೆ, ನಾವು ನಿಮಗೆ ಉಚಿತ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ನೀವು ಹೇಳಬೇಕು. ಇದರಿಂದ …

Read More »

ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್​ಗಳನ್ನು ಅಳವಡಿಸಿದ್ದರಿಂದ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು

ಬೆಳಗಾವಿ: ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್​ಗಳನ್ನು ಅಳವಡಿಸಿದ್ದರಿಂದ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು ಬ್ಯಾನರ್​ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಣಿ ಚನ್ನಮ್ಮ ವೃತ್ತದ ಬಳಿಯಿದ್ದ ಬ್ಯಾನರ್​ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಾರಾಯಣಗೌಡ ಬಣದ ಕಾರ್ಯಕರ್ತರು ಮೊದಲು ಧರಣಿ ನಡೆಸಿದರು. ಬಳಿಕ ಒಂದೊಂದೇ ಬ್ಯಾನರ್​​ಗಳನ್ನು ಹರಿದು ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದರು. ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋದ ಕೆಲ ಕಾರ್ಯಕರ್ತರು, ಬ್ಯಾನರ್​ಗಳನ್ನು ಹರಿದು ಹಾಕಿದರು. ಕಪ್ಪು ಮಸಿ ಬಳಿಯಲು ತಂದಿದ್ದ ಬಾಟಲಿಗಳನ್ನು …

Read More »

ಎಲ್​ಐಸಿಯಿಂದ ಹೊಸ ಪಾಲಿಸಿ: 5 ವರ್ಷ ಕಟ್ಟಿದ್ರೆ ಸಾಕು, ಜೀವನ ಪೂರ್ತಿ ಆದಾಯ!

ಹೈದರಾಬಾದ್​: ನೀವು ಕಷ್ಟಪಟ್ಟು ದುಡಿದ ಹಣಕ್ಕೆ ಭದ್ರತೆ ಮತ್ತು ಪ್ರತಿಫಲವನ್ನು ಬಯಸುವುದು ಸಹಜ. ಆದರೆ ಕುಟುಂಬದ ಹಿರಿಯ ವ್ಯಕ್ತಿಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ಅಥವಾ ಆತನಿಂದ ಕುಟುಂಬ ಪೋಷಿಸಲು ಸಾಧ್ಯವಾಗದೇ ಇದ್ದರೆ ಅವರ ಜೀವನ ತುಂಬಾ ಕಷ್ಟಕರವಾಗುತ್ತದೆ. ಅದಕ್ಕಾಗಿ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ವಿಮೆ ಮಾಡಿಸುವುದು ಅತಿ ಅಗತ್ಯ. ಸರ್ಕಾರಿ ಸ್ವಾಮ್ಯದ ಜೀವ ವಿಮಾ ಕಂಪನಿ LIC ಈಗಾಗಲೇ ಅನೇಕ ಪಾಲಿಸಿಗಳನ್ನು ಈ ನಿಟ್ಟಿನಲ್ಲಿ ಹೊರತಂದಿದೆ. ಆದರೂ ಹೂಡಿಕೆದಾರರು …

Read More »

ಹಸುಗೂಸುಗಳ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ವೈದ್ಯನ ಸಹಿತ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಹಸುಗೂಸುಗಳ ಮಾರಾಟ ದಂಧೆ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ವೈದ್ಯ ಕೆವಿನ್ ಹಾಗೂ ಮಧ್ಯವರ್ತಿಯಾಗಿದ್ದ ರಮ್ಯಾ ಎಂಬುವರನ್ನ ಬಂಧಿಸಲಾಗಿದೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಒಂಬತ್ತಕ್ಕೇರಿದೆ. ರಾಜಾಜಿನಗರದಲ್ಲಿ ತನ್ನದೇ ಕ್ಲಿನಿಕ್ ನಡೆಸುತ್ತಿದ್ದ ಕೆವಿನ್, ರೋಗಿಗಳಿಗೆ ಚಿಕಿತ್ಸೆ ಸಹ ನೀಡುತ್ತಿದ್ದ. ಆದರೆ, ಮೂರನೇ ವರ್ಷದ ಎಂಬಿಬಿಎಂಸ್ ಫೇಲ್ ಆಗಿದ್ದ ಕೆವಿನ್, ತಾನೊಬ್ಬ ಡಾಕ್ಟರ್ ಅಂತ ಹೇಳಿಕೊಂಡಿದ್ದ. ಅಲ್ಲದೇ ಹಸುಗೂಸುಗಳ ಮಾರಾಟ ದಂಧೆಯಲ್ಲಿ ಭಾಗಿಯಾಗಿದ್ದ. ಮಕ್ಕಳನ್ನ …

Read More »

ರೈಲು ನಿಲ್ದಾಣದಲ್ಲಿ ವಿದ್ಯುತ್ ಕಂಬ ಏರಿದ ಮಾನಸಿಕ ಅಸ್ವಸ್ಥ

ನಂದೂರಬಾರ್ (ಮಹಾರಾಷ್ಟ್ರ) : ನಂದೂರಬಾರ್ ರೈಲು ನಿಲ್ದಾಣದಲ್ಲಿ ಮಾನಸಿಕ ರೋಗಿಯೊಬ್ಬ ವಿದ್ಯುತ್​ ಕಂಬ ಏರಿದ್ದರಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಸುಮಾರು ಒಂದು ಗಂಟೆಯ ನಂತರ ಸುಗಮವಾಗಿ ಆರಂಭವಾಯಿತು. ರೈಲ್ವೆ ನಿಲ್ದಾಣದ ವಿದ್ಯುತ್ ಕಂಬದ ಮೇಲೆ ಮಾನಸಿಕ ಅಸ್ವಸ್ಥ ವ್ಯಕ್ತಿ ಹತ್ತಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ವಿದ್ಯುತ್ ವ್ಯತ್ಯಯದಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದೇ ವೇಳೆ ಮುಂಬೈ ದಾನಪುರ್ ಎಕ್ಸ್​ಪ್ರೆಸ್​ ಹಾಗೂ ನವಜೀವನ್ ಎಕ್ಸ್ ಪ್ರೆಸ್ ರೈಲುಗಳನ್ನು ಸುಮಾರು ಎರಡು ಗಂಟೆಗಳ …

Read More »

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..!

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.   ಪ್ರತಿ …

Read More »

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್‌ : ಹೈ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್‌ ಹೈ ಕೋರ್ಟ್‌ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್‌ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ …

Read More »

ಗೋಪೂಜೆಯಲ್ಲಿ ಬಂಗಾರದ ಸರ ನುಂಗಿದ್ದ ಹಸು: ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಪಶುವೈದ್ಯರು

ಶಿವಮೊಗ್ಗ: ಗೋಪೂಜೆ ಸಲ್ಲಿಸುವ ಸಮಯದಲ್ಲಿ ಹಸುವೊಂದು‌ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ್ದ ಘಟನೆ ಹೊಸನಗರ ತಾಲೂಕು ಮತ್ತಿಮನೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪಶುವೈದ್ಯರು ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆ ಚಿನ್ನದ ಸರವನ್ನು ಹೊರತೆಗೆದಿದ್ದಾರೆ. ಮತ್ತಿಮನೆ ಸತ್ಯವತಿ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಗೋಪೂಜೆಯ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬದವರು ದಿಗಿಲುಗೊಂಡಿದ್ದರು. ನಂತರ ಪರಿಶೀಲಿಸಿದಾಗ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು …

Read More »

ಸೈಬರ್ ಅಪರಾಧ ವಿಭಾಗಕ್ಕೆ ಎಸಿಪಿ ದರ್ಜೆಯ ಅಧಿಕಾರಿಯ ನಿಯೋಜನೆ ಸೇರಿ ಏಳು ಡಿವೈಎಸ್ಪಿ ಮತ್ತು 14 ಮಂದಿ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾಯಿಸಿದೆ.

ಸೈಬರ್ ಅಪರಾಧ ವಿಭಾಗಕ್ಕೆ ಎಸಿಪಿ ದರ್ಜೆಯ ಅಧಿಕಾರಿಯ ನಿಯೋಜನೆ ಸೇರಿ ಏಳು ಡಿವೈಎಸ್ಪಿ ಮತ್ತು 14 ಮಂದಿ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾಯಿಸಿದೆ.   ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಇದೇ ಮೊದಲ ಬಾರಿಗೆ ಸಿಸಿಬಿಯ ಸೈಬರ್ ವಿಭಾಗಕ್ಕೆ ಸಹಾಯಕ ಪೊಲೀಸ್ ಕಮೀಷನರ್ (ಎಸಿಪಿ) ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಸತ್ಯನಾರಾಯಣ್ ಸಿಂಗ್ ಅವರು ಎಸಿಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಇನ್ನುಳಿದಂತೆ …

Read More »