ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ( Gruha Lakshmi Scheme ) ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ …
Read More »ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ
ರಾಯಚೂರು: ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ. ಸುನಿತಾ (28) ಪತಿಯ ಕೈಯಿಂದ ಹತ್ಯೆಯಾದ ಗೃಹಿಣಿಯಾಗಿದ್ದು, ಬಸವರಾಜ ಕಂಬಳಿ ಕೊಲೆ ಮಾಡಿರುವ ಪತಿ. ಬಸವರಾಜ ಹಾಗೂ ಸುನಿತಾ ಮನಸಾರೆ ಪರಸ್ಪರ ಪ್ರೀತಿಸಿ 2014ರಲ್ಲಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು. ಭಾನುವಾರದಂದು ಸಂಜೆ ಸುನಿತಾ ತಮ್ಮ ಹೊಲದಲ್ಲಿ ನೀರು ಕಟ್ಟುತ್ತಿದ್ದರು. ಆಗ ಪತಿ …
Read More »ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಮುಂಬರುವ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ ವಿಧಾನಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ …
Read More »668 ಕೋಟಿ ನಿರ್ಭಯಾ ನಿಧಿಯಲ್ಲಿ ನಿರ್ಮಾಣ; ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ ‘ಸೇಫ್ ಸಿಟಿ ಕಮಾಂಡ್ ಸೆಂಟರ್’ (ಸುರಕ್ಷಾ ನಗರ ಕಮಾಂಡ್ ಕೇಂದ್ರ) ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದರು. ಅಪರಾಧ ಹೆಚ್ಚಳ ಒಪ್ಪಿಕೊಂಡ ಸಿಎಂ: ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ಹಿಂಸಾತ್ಮಕ ಅಪರಾಧಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಒಪ್ಪಿಕೊಂಡ ಅವರು, ‘ನಿರ್ಭಯಾ ನಿಧಿ’ ಬಳಸಿ 668 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಕೇಂದ್ರವನ್ನು ಸರಿಯಾಗಿ …
Read More »ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಸೈಕ್ಲಿಂಗ್ ಚಾಂಪಿಯನ್ಶಿಪ್ನಲ್ಲಿ ವಿಜಯಪುರ ತಂಡ 35 ಅಂಕ ಗಲಿಸುವ ಮೂಲಕ ಮೊದಲ ಸ್ಥಾನ ಪಡೆದರೆ, ಬಾಗಲಕೋಟೆ ಜಿಲ್ಲಾ ತಂಡಕ್ಕೆ ಎರಡನೇ ಸ್ಥಾನ ಲಭಿಸಿತು.
ಬಾಗಲಕೋಟೆ: ಗ್ರಾಮೀಣ ಕ್ರೀಡೆಯಾದ ಸೈಕಲ್ ಸವಾರಿ ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಬಾಗಲಕೋಟೆ ಸಹ ಸೈಕ್ಲಿಸ್ಟ್ಗಳ ತವರು ಜಿಲ್ಲೆಯಾಗಿ ಪರಿಣಮಿಸಿದೆ. ಇಲ್ಲಿನ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕಿದೆ ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆನವನಗರದ ಯುನಿಟ್-2ರಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಸೈಕ್ಲಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿಯ ಎರಡನೇ ದಿನದ(ಶನಿವಾರ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬಾಗಲಕೋಟೆ ಜಿಲ್ಲೆಯು ತನ್ನದೇ ಆದ ವಿವಿಧ …
Read More »ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಪ್ರಕಟಿ
ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಪ್ರಕಟಿಸಿದೆ. ಅಲ್ಲದೇ, ಅಪರಾಧಿಗಳಿಗೆ 5 ಲಕ್ಷ ರೂಪಾಯಿ ದಂಡವನ್ನೂ ಹಾಕಲಾಗಿದೆ. ಮತ್ತೊಬ್ಬ ಅಪರಾಧಿ ಅಜಯ್ ಸೇಥಿ ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯಲ್ಲಿ 2008ರ ಸೆಪ್ಟೆಂಬರ್ 30ರಂದು ಬೆಳಗಿನ ಜಾವ 3:30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು …
Read More »ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ ನಿಗೂಢ ಸಾವು
ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ (40) ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ.ಆನಂದ್ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್ ಅವರು ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವಿಸ್ಗೆ ಸೇರಿದ್ದರು. ಮೃತ ಆನಂದ ತಮಿಳುನಾಡು ಮೂಲದವರಾಗಿದ್ದು, ವಿವಾಹ ಆಗಿಲ್ಲ, ತಂದೆ-ತಾಯಿ ತಮಿಳುನಾಡಿನಲ್ಲಿದ್ದಾರೆ. ಬೆಳಗಾವಿಯ ಸರ್ಕಾರಿ ನಿವಾಸದಲ್ಲಿ …
Read More »ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ನಿರ್ಣಯ ಕೈಗೊಳ್ಳಬೇಕು : ಕುರುಬೂರ ಶಾಂತಕುಮಾರ್
ಬೆಳಗಾವಿ: ಇಲ್ಲಿಯವರೆಗೆ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಗಳಲ್ಲಿ ಎಷ್ಟು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಇದರ ಕುರಿತಾಗಿ ಈಗಿನ ಚಳಿಗಾಲ ಅಧಿವೇಶನದ ಮುನ್ನ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ್ ಆಗ್ರಹಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದ ಹಿನ್ನೆಲೆ ರೈತ ಸಮುದಾಯ ಸಂಕಷ್ಟದಲ್ಲಿದೆ. ಅಧಿವೇಶನದಲ್ಲಿ ರೈತರ ಸಂಪೂರ್ಣ ಸಾಲ …
Read More »155 ಪೌರಕಾರ್ಮಿಕರ ಖಾಯಮಾತಿಗೆ ನಿರ್ಧಾರ: ಬೆಳಗಾವಿ ಡಿಸಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ ಸೇವೆ ಸಲ್ಲಿಸಿರುವ ಮತ್ತು ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಅರ್ಜಿಗಳನ್ನು ಪರಿಶೀಲನಾ ಸಮಿತಿಯಿಂದ ಪರಿಶೀಲನೆಗೆ …
Read More »ಅಂಬರೀಶ್ ಪುಣ್ಯಸ್ಮರಣೆಯಂದು ಪುತ್ರನ ಹೊಸ ಸಿನಿಮಾ ಬಿಡುಗಡೆ; ಸುಮಲತಾ, ದರ್ಶನ್ ಭಾವುಕ
ಹಿರಿಯ ನಟ ಅಂಬರೀಶ್ ಇಹಲೋಕ ತ್ಯಜಿಸಿ ಇಂದಿಗೆ ಐದು ವರ್ಷ. 5ನೇ ಪುಣ್ಯಸ್ಮರಣೆಯಂದು ಅವರ ಪುತ್ರ ನಟಿಸಿರುವ ಹೊಸ ಸಿನಿಮಾ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ, ಮಂಡ್ಯದ ಗಂಡು ಹಿರಿಮೆಯ ಡಾ.ಅಂಬರೀಶ್ ಕೊನೆಯುಸಿರೆಳೆದು ಇಂದಿಗೆ 5 ವರ್ಷವಾಗುತ್ತಿದೆ. ಐದನೇ ವರ್ಷದ ಪುಣ್ಯಸ್ಮರಣೆಯ ಈ ದಿನ ಪುತ್ರ ಅಭಿಷೇಕ್ ಅಂಬರೀಶ್ ನಟಿಸಿರುವ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ತೆರೆಕಂಡಿದೆ. ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಗಣ್ಯರು ಅಂಬಿ ಅವರನ್ನು ಸ್ಮರಿಸಿ, ಭಾವುಕ …
Read More »
Laxmi News 24×7