Breaking News

Uncategorized

ನಿಮ್ಹಾನ್ಸ್​ನಲ್ಲಿ 161 ನರ್ಸಿಂಗ್​​ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ

ಇನ್ನು ಅರ್ಜಿ ಸಲ್ಲಿಕೆ ಮಾಡದ ಅಭ್ಯರ್ಥಿಗಳಿಗೆ ಎರಡು ದಿನವಷ್ಟೇ ಅವಕಾಶ ಇದ್ದು, ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ 161 ಹುದ್ದೆ ನರ್ಸ್​​​ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಕಳೆದ ತಿಂಗಳು ಸಂಸ್ಥೆಯಿಂದ ಬಿಎಸ್ಸಿ ಮತ್ತು ಮಿಡ್​ವೈಫ್​ ನರ್ಸ್​​ಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗೆ ಅರ್ಜಿ …

Read More »

ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದಂತೆ ಸಂಘಟನಾತ್ಮಕ ಚಟುವಟಿಕೆಯನ್ನು ಅಧಿಕೃತವಾಗಿ ಆರಂಭಿಸಿರುವ ಬಿ ವೈ ವಿಜಯೇಂದ್ರ, ಮೊದಲನೆ ಸಭೆಯನ್ನಾಗಿ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಪಕ್ಷದ ಎಲ್ಲಾ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ.   ಇಂದು ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಿ. ವೈ ವಿಜಯೇಂದ್ರ ಅವರು ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ …

Read More »

ರಾಷ್ಟ್ರೀಯ ಪತ್ರಿಕಾ ದಿನ: ಮುಕ್ತ, ನಿರ್ಭೀತ, ಮೌಲ್ಯಯುತ ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲ

National Press Day: ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳಾಗುತ್ತಿದೆ. ನವೆಂಬರ್​ 16 ಅನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಕುರಿತ ವಿಶೇಷ ವರದಿ.   ಇಂದು ಸ್ವತಂತ್ರ ಮತ್ತು ಜವಾಬ್ದಾರಿಯುತ ಪತ್ರಿಕಾ ಉಪಸ್ಥಿತಿಯನ್ನು ಸೂಚಿಸುವ ರಾಷ್ಟ್ರೀಯ ಪತ್ರಿಕಾ ದಿನ. ಪ್ರತಿ ವರ್ಷ ನವೆಂಬರ್ 16ರಂದು ಸ್ವತಂತ್ರ ಪತ್ರಿಕಾ ಅಸ್ತಿತ್ವವನ್ನು ಸಾರುವ ಪ್ರೆಸ್ ಕೌನ್ಸಿಲ್ ಆಫ್ …

Read More »

ದೀಪದಿಂದ ಮನೆಗೆ ಹೊತ್ತಿಕೊಂಡ ಬೆಂಕಿ: 4 ಕುರಿ ಸಜೀವ ದಹನ, ಟ್ರ್ಯಾಕ್ಟರ್​ ಖರೀದಿಗೆ ಇಟ್ಟಿದ್ದ 4.75 ಲಕ್ಷ ರೂ. ನಗದು ಸುಟ್ಟು ಭಸ್ಮ

ಬೆಳಗಾವಿ: ಮಹಿಳೆಯರೇ ದುಡಿದು ಆ ಕುಟುಂಬ ಜೀವನ ಸಾಗಿಸುತ್ತಿತ್ತು. ಎಲ್ಲರ ಮನೆಯಲ್ಲಂತೆ ಈ ಮನೆಯಲ್ಲಿಯೂ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ನಾಳೆ ಬೆಳಕಾದರೆ ಮನೆಗೆ ಟ್ರ್ಯಾಕ್ಟರ್ ತರುವ ಖುಷಿಯಲ್ಲಿದ್ದರು. ಆದರೆ ವಿಧಿ ಈ ಕುಟುಂಬದ ಜೊತೆ ಚೆಲ್ಲಾಟ ಆಡಿದೆ. ಆಕಸ್ಮಿಕವಾಗಿ ಹತ್ತಿದ ಬೆಂಕಿಗೆ ಸಂಪೂರ್ಣ ಮನೆ ಸುಟ್ಟು ಭಸ್ಮವಾಗಿ, ಬದುಕು ಬೀದಿಗೆ ಬಂದಿದೆ. ಹೌದು ಬಸವನ ಕುಡಚಿ ಗ್ರಾಮದ ಸವಿತಾ ದುನೊಳ್ಳಿ ಮತ್ತು ಅನಿತಾ ಕೌಲಗಿ ಎಂಬ ಸಹೋದರಿಯರಿಗೆ ಸೇರಿದ ಎರಡೂ …

Read More »

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣಕಾರ್ಯಕ್ರಮಕ್ಕೆ ನಾನು ಹೋಗಲ್ಲ.:C.T.RAVI

ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್​ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …

Read More »

ಟೈಗರ್​ 3’ಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​: ಮೊದಲ ದಿನವೇ 44 ಕೋಟಿ ಕಲೆಕ್ಷನ್​​!

ಸಲ್ಮಾನ್​ ಖಾನ್​ ಮತ್ತು ಕತ್ರಿನಾ ಕೈಫ್​ ನಟನೆಯ ‘ಟೈಗರ್​ 3’ ಚಿತ್ರ ಬಿಡುಗಡೆಯಾದ ಮೊದಲ ದಿನ 44.5 ಕೋಟಿ ರೂಪಾಯಿ ಗಳಿಸಿದೆ. ದೀಪಾವಳಿ ಹಬ್ಬದ ಉಡುಗೊರೆಯಾಗಿ ನವೆಂಬರ್​ 12ರಂದು ಬಾಲಿವುಡ್​ ನಟ​ ಸಲ್ಮಾನ್​ ಖಾನ್​ ಮತ್ತು ನಟಿ ಕತ್ರಿನಾ ಕೈಫ್​ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟೈಗರ್ 3’ ಬಿಡುಗಡೆ ಆಗಿದೆ. ಮನೀಶ್​ ಶರ್ಮಾ ನಿರ್ದೇಶನದ ಸ್ಪೈ ಥ್ರಿಲ್ಲರ್​ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್​ ಸಿಕ್ಕಿದ್ದು, ಮೊದಲನೇ ದಿನವೇ ಬಾಕ್ಸ್​ ಆಫೀಸ್​ ಕೊಳ್ಳೆ …

Read More »

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು. ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ …

Read More »

ಲಿಂಗಾಯತ ಮತ ಬ್ಯಾಂಕ್​ಗೋಸ್ಕರ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಲಿಂಗಾಯತ ಸಮುದಾಯದ ಮತ ಬ್ಯಾಂಕ್ ನೋಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ, ಅವರ ಆಯ್ಕೆ ಮಾಡಿರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಕೂಡ ಒಂದು ಕಾರಣ. ಇನ್ನು ಬಿಜೆಪಿಯಲ್ಲೂ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ …

Read More »

ದೀಪಾವಳಿಯಲ್ಲಿ ಬದುಕು ಕತ್ತಲಾಗದಿರಲಿ: ಪಟಾಕಿ ಹೊಡೆಯುವಾಗ ಮುಂಜಾಗ್ರತೆ ವಹಿಸಲು ನೇತ್ರತಜ್ಞರ ಸಲಹೆ

ದಾವಣಗೆರೆ: ದೀಪಾವಳಿ ಬೆಳಕಿನ‌ ಹಬ್ಬ. ಆದರೆ, ಈ ಬೆಳಕಿನ ಹಬ್ಬದಲ್ಲಿ ಸಾಕಷ್ಟು ಜನ ಪಟಾಕಿ ಹೊಡೆಯುವ ಸಾಹಸಕ್ಕೆ ಕೈ ಹಾಕಿ ತಮ್ಮ ಬದುಕು ಕತ್ತಲಾಗಿಸಿಕೊಂಡಿದ್ದಾರೆ. ಪಟಾಕಿ ಸಿಡಿದರೆ ಕಣ್ಣಿಗಾಗುವ ಹಾನಿ ಹಾಗೂ ಪಟಾಕಿ ಹೊಡೆಯುವ ಮುನ್ನ ಮುಖ್ಯವಾಗಿ ಮಕ್ಕಳು ಯುವಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂದು ನೇತ್ರತಜ್ಞ ರವೀಂದ್ರನಾಥ್ ಮಾಹಿತಿ ಕೊಟ್ಟಿದ್ದಾರೆ. ದೀಪಗಳ ಹಬ್ಬ ದೀಪಾವಳಿ. ಬೆಳಕಿನ ಹಬ್ಬದಲ್ಲಿ ಪಟಾಕಿ ಹೊಡೆದು ಸಂಭ್ರಮಿಸುವುದು ಯಾವ ಹಬ್ಬಗಳಲ್ಲೂ …

Read More »

ಇದು ಕುಟುಂಬ ರಾಜಕಾರಣವಲ್ಲ-ಯುವ ನಾಯಕತ್ವಕ್ಕೆ ಸಿಕ್ಕ ಆದ್ಯತೆ: ಬಿ.ವೈ. ವಿಜಯೇಂದ್ರ

ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ …

Read More »