Breaking News

Uncategorized

ಮನೋಜ್ ಜಾರಂಗೆ, ಮಹಾರಾಷ್ಟ್ರ ಸಿಎಂ ಭಿನ್ನ ಹೇಳಿಕೆ: ಮರಾಠ ಮೀಸಲಾತಿ ಗಡುವಿನ ಬಗ್ಗೆ ಮೂಡಿದ ಗೊಂದಲ

​( ಮಹಾರಾಷ್ಟ್ರ): ಸರ್ಕಾರದ ನಿಯೋಗ ಮರಾಠಾ ಮೀಸಲಾತಿ ಬಗ್ಗೆ ಅದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಡಿಸೆಂಬರ್ 24ರ ತನಕ ಗಡುವು ನೀಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಮರಾಠ ಮೀಸಲಾತಿಗೆ ಮನೋಜ್ ಜಾರಂಗೆ …

Read More »

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ ಮೂಡಲಗಿ : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ …

Read More »

‘ಕನ್ನಡ’ ಫಿಲ್ಮ್​ ಚೇಂಬರ್​ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ

‘ಕನ್ನಡ’ ಫಿಲ್ಮ್​ ಚೇಂಬರ್​ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ ಇಂದು ಕರ್ನಾಟಕದಲ್ಲಿ ‘ರಾಜ್ಯೋತ್ಸವ’ದ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುವರ್ಣ ವರ್ಷವನ್ನು ಆಚರಿಸಲಾಯಿತು. ಫಿಲ್ಮ್​ ಚೇಂಬರ್​ ಅಧ್ಯಕ್ಷ ಎನ್​.ಎಂ ಸುರೇಶ್​, ಉಪಾಧ್ಯಕ್ಷೆ ಪ್ರಮೀಳಾ ಜೋಷಾಯ್, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಕಾರ್ಯದರ್ಶಿ ಭಾ.ಮಾ ಗೀರಿಶ್ ಸಮ್ಮುಖದಲ್ಲಿ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರಿಗೆ …

Read More »

ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ. ರಾಜ್ಯೋತ್ಸವಕ್ಕೆ ಟೀಶರ್ಟ್​ಗಳ ಖರೀದಿ ಭರಾಟೆ ಹೆಚ್ಚಾಗಿದ್ದು, ಕನ್ನಡ ನಾಡು, ನುಡಿ ಕುರಿತು ಜಾಗೃತಿ ಜೊತೆ ಕನ್ನಡಾಭಿಮಾನ ಮೂಡಿಸುವ ಟೀಶರ್ಟ್​ಗಳ ಖರೀದಿಗೆ ಕನ್ನಡಮ್ಮನ ಕಂದಮ್ಮಗಳು ಮುಗಿ ಬಿದ್ದಿದ್ದಾರೆ. ಬೆಳಗಾವಿಯಿಂದ ಲಂಡನ್​ಗೂ ಟೀಶರ್ಟ್ ಕಳಿಸಿದ್ದು ವಿಶೇಷವಾಗಿದೆ. ಇಡೀ ರಾಜ್ಯದಲ್ಲಿ ರಾಜ್ಯೋತ್ಸವ ಆಚರಣೆ ಒಂದೆಡೆಯಾದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ತುಂಬಾ ವಿಶೇಷವಾಗಿಯೇ ಇರುತ್ತದೆ. ಅಷ್ಟೊಂದು ಸಂಭ್ರಮ, ಸಡಗರದಿಂದ ಇಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ‌. …

Read More »

ಟಾಟಾ ಮೋಟಾರ್ಸ್​ಗೆ ₹766 ಕೋಟಿ ನೀಡುವಂತೆ ಪಶ್ಚಿಮಬಂಗಾಳ ಸರ್ಕಾರಕ್ಕೆ ಆದೇಶ

ನವದೆಹಲಿ: ಟಾಟಾ ಮೋಟಾರ್ಸ್​ ಮತ್ತು ಪಶ್ಚಿಮಬಂಗಾಳ ಸರ್ಕಾರದ ನಡುವಿನ ಸಿಂಗೂರ್​ ಘಟಕ ವ್ಯಾಜ್ಯ ಕಡೆಗೂ ಇತ್ಯರ್ಥ ಕಂಡಿದೆ. ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಸ್ಥಳಾಂತರಿಸಿದ್ದಕ್ಕಾಗಿ ಉಂಟಾದ ನಷ್ಟವನ್ನು ಭರಿಸಲು ಕೋರಿದ್ದ ಟಾಟಾ ಮೋಟಾರ್ಸ್​ಗೆ, ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರ 766 ಕೋಟಿ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೋಮವಾರ ಆದೇಶಿಸಿದೆ.     ಪಶ್ಚಿಮಬಂಗಾಳದ ಸಿಂಗೂರಿನಲ್ಲಿ ಟಾಟಾ ಮೋಟಾರ್ಸ್​ ಕಂಪನಿಯು ನ್ಯಾನೋ ಕಾರು ಉತ್ಪಾದನಾ ಘಟಕ ಸ್ಥಾಪನೆಗೆ …

Read More »

ಆಧಾರ್ ಮೂಲಕ ಸೈಬರ್ ಬಳಸಿ ಲಕ್ಷಾಂತರ ರೂಪಾಯಿ ವಂಚನೆ.. ಬಿಹಾರದ ಮೂವರು ಆರೋಪಿಗಳ ಬಂಧನ

ಮಂಗಳೂರು: ಆಧಾರ್ ಮೂಲಕ ಸೈಬರ್ ಬಳಸಿ ವಿವಿಧ ಬ್ಯಾಂಕ್​ಗಳಿಂದ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಪ್ರಕರಣದಡಿ AEPS (Aadhar Enabled Payment System) ಬಿಹಾರದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಬಿಹಾರ ರಾಜ್ಯದ ಸುಪೌಲ್ ನ ದೀಪಕ್ ಕುಮಾರ್ ಹೆಂಬ್ರಮ್ (33) ಅರಾರಿ ಜಿಲ್ಲೆಯ ವಿವೇಕ್ ಕುಮಾರ್ ಬಿಶ್ವಾಸ್ (24) ಮದನ್ ಕುಮಾರ್ (23) ಬಂಧಿತರು. 6 ತಿಂಗಳಿನ ಅವಧಿಯಲ್ಲಿ ಮಂಗಳೂರು ನಗರದ ಸಬ್‌ ರಿಜಿಸ್ಟ್ರಾರ್ …

Read More »

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ

ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …

Read More »

ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್​ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು …

Read More »

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್​ ಶಾ

ಹೈದರಾಬಾದ್​ (ತೆಲಂಗಾಣ): ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಅಧಿಕಾರಕ್ಕೆ ತಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಘೋಷಿಸಿದ್ದಾರೆ. ಇಂದು ಸೂರ್ಯಪೇಟ್​ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು.       ”ನಾನು ತೆಲಂಗಾಣದ ಜನತೆಗೆ ಒಂದು ಮಾತು ಹೇಳ ಬಯಸುತ್ತೇನೆ. ನೀವು ಬಿಜೆಪಿಗೆ ಆಶೀರ್ವಾದ ಮಾಡಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, …

Read More »

“ಒಲಿಂಪಿಕ್ಸ್​ ಕ್ರೀಡಾಕೂಟ ಆತಿಥ್ಯ ವಹಿಸಲು ಭಾರತ ಸಿದ್ಧ”: ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿದ ಪ್ರಧಾನಿ ಮೋದಿ

ಪಣಜಿ (ಗೋವಾ): ಮೊದಲ ಬಾರಿಗೆ ಗೋವಾದ ಪಣಜಿಯಲ್ಲಿ ನಡೆಯುತ್ತಿರುವ 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು. ದಕ್ಷಿಣ ಗೋವಾದ ಮಾರ್ಗಾವೊದಲ್ಲಿರುವ ಪಂಡಿತ್​ ಜವಾಹರ್​ಲಾಲ್​ ನೆಹರು ಕ್ರೀಡಾಂಗಣದಲ್ಲಿ ಅ.​ 26ರಿಂದ ನ.​ 9ರವರೆಗೆ ನಡೆಯಲಿರುವ ಕ್ರೀಡಾಕೂಕ್ಕೆ ದೇಶದ ಅಥ್ಲೀಟ್​ಗಳು ಹಸ್ತಾಂತರಿಸಿದ ಆಟಗಳನ್ನು ಪ್ರತಿನಿಧಿಸುವ ಜ್ಯೋತಿ(Infinity Flame) ಯನ್ನು ಸ್ವೀಕರಿಸುವ ಮೂಲಕ ಮೋದಿ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತದ ಸಂಕಲ್ಪ ಹಾಗೂ …

Read More »