Breaking News

Uncategorized

ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಇಂದು ಮುಂಜಾನೆ ತಾಲೂಕಿನ ಚಿತ್ರಾವತಿ ಬಳಿಯ ಆರ್​​ಟಿಒ ಕಚೇರಿ‌ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್​ ಲಾರಿಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು, ಒಂದು …

Read More »

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ. ಸೂಚನೆಗಳೇನು?: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ …

Read More »

ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …

Read More »

ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.

ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್​ಫುಲ್ ಲೈಟಿಂಗ್ಸ್‌ನಿಂದ​ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …

Read More »

ಹೆಸರಿಡದ ಸಿನಿಮಾಗೆ ದೊಡ್ಮನೆ ಕುಡಿ ರೆಡಿ: ಧೀರೇನ್ ರಾಮ್‌ಕುಮಾರ್ ಕಟ್ಟುಮಸ್ತ್‌ ದೇಹ ನೋಡಿ

ಡಾ.ರಾಜ್​ ಕುಮಾರ್​ ಕುಟುಂಬದ ಮೂರನೇ ತಲೆಮಾರಿನ ಕುಡಿ ಧೀರೇನ್ ರಾಮ್‌ಕುಮಾರ್ ಸದ್ಯ ತಮ್ಮ ಎರಡನೇ ಸಿನಿಮಾದ ಸಿದ್ಧತೆಯಲ್ಲಿದ್ದಾರೆ. 2020ರಲ್ಲಿ ಶಿವ 143 ಎಂಬ ಚಿತ್ರದಿಂದ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೊಡ್ಮನೆ ಕುಡಿ ಧೀರೇನ್ ರಾಮ್‌ಕುಮಾರ್ ಬಾಡಿ ಬಿಲ್ಡ್ ಮಾಡಿರುವ ಫೋಟೊಗಳು ಇದೀಗ ಚಿತ್ರರಂಗದಲ್ಲಿ ಸುದ್ದಿಯಾಗುತ್ತಿದೆ. ​ಹೆಸರಿಡದ ಎರಡನೇ ಸಿನಿಮಾಗೆ ಭರ್ಜರಿಯಾಗಿ ತಯಾರಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ಇವರ ಮೊದಲ ಸಿನಿಮಾವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದರು. ಜಯಣ್ಣ ಭೋಗೆಂದ್ರ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ …

Read More »

ದಾವಣಗೆರೆಯ ಕನ್ನಿಕಾ ಪರಮೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ

ದಾವಣಗೆರೆ: ದಸರಾ ಪ್ರಯುಕ್ತ ದಾವಣಗೆರೆಯಾದ್ಯಂತ ಬಹುತೇಕ ಎಲ್ಲಾ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯಗಳಲ್ಲಿ ಹೂವು, ಕುಂಕುಮ, ಎಲೆ, ಉತ್ತುತ್ತಿ, ತರಕಾರಿ, ಹಣ್ಣು-ಹಂಪಲುಗಳಿಂದ ತರಹೇವಾರಿ ಅಲಂಕಾರ ಮಾಡುವುದು ಸಾಮಾನ್ಯ. ಆದರೆ ದಾವಣಗೆರೆ ನಗರದ ಕನ್ನಿಕಾ ಪರಮೇಶ್ವರಿ ದೇವಿಗೆ ಕರೆನ್ಸಿ ನೋಟುಗಳಿಂದ ಧನಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ದೊಡ್ಡಪೇಟೆಯ ಕನ್ನಿಕಾ ಪರಮೇಶ್ವರಿ ದೇವಿಗೆ ನವರಾತ್ರಿಯ ಒಂಭತ್ತು ದಿನಗಳ ಕಾಲ ವಿವಿಧ ಅಲಂಕಾರ ಮಾಡಲಾಗಿತ್ತು. ಹತ್ತನೇ ದಿನವಾದ ಇಂದು ಲಕ್ಷಾಂತರ ರೂಪಾಯಿ …

Read More »

ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ: ಶೋಭಾ ಕರಂದ್ಲಾಜೆ

ಮೈಸೂರು: ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ಅಲ್ಲಿಯೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನಿನ್ನೆಯೇ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿನ್ನೆ ಸಂಜೆ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ, ಅಲ್ಲಿ ಚಾಮುಂಡೇಶ್ವರಿಯಲ್ಲಿ ಮತ್ತೇ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬೇಡಿಕೊಂಡು, ಪೂಜೆ ಸಲ್ಲಿಸಿದರು. ಅಭಿಮನ್ಯು ಆನೆಗೆ …

Read More »

ರಾಜ್ಯ ಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ:

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚನ್ನಮ್ಮನ ರಾಜ್ಯ ಮಟ್ಟದ ಕಿತ್ತೂರು ಉತ್ಸವ-2023ರ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಬೆಳಿಗ್ಗೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆ ಸಂಚರಿಸಿ ಬೈಲಹೊಂಗಲದಲ್ಲಿ ಇರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಆಗಮಿಸಿ ಬಂದ ವಿಜಯಜ್ಯೋತಿಯನ್ನು ಕಿತ್ತೂರಿನ ಚನ್ನಮ್ಮ ವೃತ್ತದಲ್ಲಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ವಿಜಯಜ್ಯೋತಿಯನ್ನು ಸ್ವಾಗತಿಸಿ, ಸಂಸ್ಥಾನದ ಧ್ವಜಾರೋಹಣವನ್ನು ಸತೀಶ್ ಜಾರಕಿಹೊಳಿ ನೆರವೇರಿಸಿದರು. ನಂತರ ಚನ್ನಮ್ಮ ಪುತ್ಥಳಿಗೆ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದೆ …

Read More »

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 2.5 ಕೋಟಿ ವಂಚನೆ ಆರೋಪ: ಚೈತ್ರಾ ಮಾದರಿ ಮತ್ತೊಂದು ಕೇಸ್​ ಬೆಳಕಿಗೆ

ವಿಜಯನಗರ : ಕಳೆದ ಕೆಲವು ದಿನಗಳ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಚೈತ್ರಾ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 2.5 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮಾಜಿ ಮುಖಂಡ ಹಾಗೂ ಬಿಜೆಪಿಯ ಪ್ರಮುಖ ರಾಜ್ಯ ನಾಯಕರೊಬ್ಬರ ಆಪ್ತರ ವಿರುದ್ಧ ವಂಚನೆ ಆರೋಪ ಕೇಳಿ …

Read More »

ಸಿಯಾಚಿನ್​ನಲ್ಲಿ ಅಗ್ನಿವೀರ್​​​ ಅಕ್ಷಯ್​ ಹುತಾತ್ಮ: ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ನ ಸಿಯಾಚಿನ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ‘ಅಗ್ನಿವೀರ್​’​​​ ಗವಟೆ ಅಕ್ಷಯ್​ ಲಕ್ಷ್ಮಣ್​ ಎಂಬುವರು ಹುತಾತ್ಮರಾಗಿದ್ದಾರೆ. ಇವರು ಸೇನಾ ಕಾರ್ಯಾಚರಣೆಯಲ್ಲಿ ಪ್ರಾಣವನ್ನು ತ್ಯಾಗ ಮಾಡಿದ ಮೊದಲ ಅಗ್ನಿವೀರ್​ ಆಗಿದ್ದು, ಭಾರತೀಯ ಸೇನೆಯು ಭಾನುವಾರ ಅಂತಿಮ ಗೌರವ ಸಲ್ಲಿಸಿದೆ.     ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಗವಟೆ ಅಕ್ಷಯ್​ ಲಕ್ಷ್ಮಣ್​ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಕ್ಷಯ್ ಮಹಾರಾಷ್ಟ್ರ ಮೂಲದವರಾಗಿದ್ದು, ಇವರ ಸಾವಿನ ಕುರಿತು ನಿಖರ ಮಾಹಿತಿ ತಕ್ಷಣಕ್ಕೆ …

Read More »