Breaking News

Uncategorized

ಈ ಹಿಂದೆ ರಾಜಕೀಯ ಒಂದು ಸೇವೆಯಾಗಿತ್ತು. ಇಂದು ವೃತ್ತಿಯಾಗಿದೆ- ಸಂತೋಷ್ ಹೆಗ್ಡೆ

    ಮಂಡ್ಯ: ಪ್ರಸ್ತುತ ರಾಜಕೀಯ ವೃತ್ತಿಯಾಗಿದೆ. ಎಲ್ಲೂ ಸಿಗದ ಸೌಲಭ್ಯ ರಾಜಕೀಯದಲ್ಲಿ ಸಿಗುತ್ತೆ ಎಂದು ಮದ್ದೂರಿನ ವಳಗೆರೆಹಳ್ಳಿ ಗ್ರಾಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ಮರುತನಿಖೆ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಇದೊಂದು ಸಬ್ಜುಡೀಸ್ ಅಂತೇವೆ. ಕೋರ್ಟ್​ನಲ್ಲಿ ಕೇಸ್ ಪೆಂಡಿಂಗ್ ಇದೆ. ಒಬ್ಬ ನಿವೃತ್ತ ನ್ಯಾಯಾಧೀಶನಾಗಿ ನಾನು ಮಾತನಾಡುವುದು ಸೂಕ್ತವಲ್ಲ ಎಂದರು. ಐಟಿ ರೇಡ್ ಹಣ ಎಲ್ಲಿಗೆ ಹೋಗುತ್ತೆ? ಎಂಬ ವಿಚಾರಕ್ಕೆ, …

Read More »

ವಿಶ್ವಕಪ್​ನಲ್ಲಿ ಎರಡನೇ ಬಾರಿಗೆ 5 ವಿಕೆಟ್​ ಪಡೆದ ಸಾಧನೆ ಮಾಡಿದ ಮೊಹಮ್ಮದ್​ ಶಮಿ

    ಧರ್ಮಶಾಲಾ ಮೈದಾನದಲ್ಲಿ ನ್ಯೂಜಿಲೆಂಡ್​ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್​ ಶಮಿ ಐದು ವಿಕೆಟ್​ ಕಿತ್ತರು. ಧರ್ಮಶಾಲಾ (ಹಿಮಾಚಲ ಪ್ರದೇಶ): 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ನಡೆದ ಪಂದ್ಯಗಳಲ್ಲಿ ಎದುರಾಳಿ ತಂಡವನ್ನು 300 ರನ್‌ಗಳ ಗಡಿ ದಾಟದಂತೆ ನಿಯಂತ್ರಿಸಿದೆ. ಅಲ್ಲದೇ ಯಾವುದೇ ತಂಡದ ಬ್ಯಾಟರ್​ಗಳೂ ಶತಕ ದಾಖಲಿಸಿರಲಿಲ್ಲ. ಆದರೆ ಭಾನುವಾರ ನಡೆದ ಪಂದ್ಯದಲ್ಲಿ ಡೇರಿಲ್ ಮಿಚೆಲ್ ಶತಕ ದಾಖಲಿಸುವ ಮೂಲಕ ಈ ರೆಕಾರ್ಡ್​ ಬ್ರೇಕ್​ …

Read More »

ಸಾಮಾನ್ಯರಂತೆ ಬದುಕುತ್ತಿದ್ದಾರೆ ಚೆನ್ನಮ್ಮ ವಂಶಸ್ಥರು

ಬೆಳಗಾವಿ: ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ ಕಿತ್ತೂರು ಸಂಸ್ಥಾನದ ಕುಡಿಗಳಿವರು. ನಾಡಿನ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ಧಾರೆ ಎರೆದವರು.‌ ರಾಜ ದರ್ಬಾರ್​ನಲ್ಲಿ ಮೆರೆಯಬೇಕಾದವರು ಇಂದು ಕಿರಾಣಿ ಅಂಗಡಿ ನಡೆಸಿ, ಬದುಕಿನ‌ ಬಂಡಿ ಸಾಗಿಸುತ್ತಿದ್ದಾರೆ. ಸಾಮಾನ್ಯರಂತೆ ಜೀವಿಸುತ್ತಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಬೇಸತ್ತಿರುವ ಇವರು, ನಮಗೆ ವಿಶೇಷ ಅನುದಾನ ಕೊಡಿ, ಇಲ್ಲವೇ ನಮ್ಮ ಕೋಟೆಯನ್ನು ನಮಗೆ ಬಿಟ್ಟು ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಚೆನ್ನಮ್ಮನ ಹೆಸರಿನ ಜನರಲ್ ಸ್ಟೋರ್ಸ್ ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ …

Read More »

ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಭಾನುವಾರ ತುಂಬಿದ ಸಭಾಗೃಹದಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಳಗಾವಿ ನಾಗರಿಕರು, ಹನುಮಾನ್ ಪ್ರಸಾದ ಸಮಿತಿಯ ಪದಾಧಿಕಾರಿ ಗಳಾದ ರಾಹುಲ್ ಮೇತ್ರಿ, ಡಿ.ಸಿ. ದೇಶಪಾಂಡೆ, ಅಳಗುಂಡಗಿ ಮತ್ತು ಶ್ರೀ ಲಲಿತಾ ಆರಾಧನಾ ಮಂಡಳಿಯ ಪ್ರತಿಮಾ ಅಂಬೇಕರ್, ಭಾವನಾ ಕುಲ್ಕರ್ಣಿ, ಸುನೀತಾ ಮಾನೆ, ಸಾವಿತ್ರೀ ಪಾಟೀಲ್, ದೀಪಾ ದೇಶಪಾಂಡೆ, ಸಂಧ್ಯಾ ಭಟ್ ಸನ್ಮಾನಿಸಿದರು.   ಶಿವಪುತ್ರ …

Read More »

ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ ಶಾಸಕ ವಿಶ್ವಾಸ ವೈದ್ಯ

ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ನಾಡಹಬ್ಬ ಮಹೋತ್ಸವದ ಅಂಗವಾಗಿ ಸಾಯಂಕಾಲ ಜರುಗಿದ ಡಾನ್ಸ್ ಮುನವಳ್ಳಿ ಡಾನ್ಸ್ ನೃತ್ಯ ಸ್ಪರ್ಧೆ, ಕಾಮಿಡಿ ಶೋ, ಲವ್ ಏ ರಿಯಾ ಚಲನಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾವಿದರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು, ಸಾಧನೆ ಮಾಡಿದ ಸಾಧಕರನ್ನು ಪ್ರೋತ್ಸಾಹಿಸಲು ಇಂಥ ವೇದಿಕೆಗಳು ಅವಕಾಶ ಕಲ್ಪಿಸುತ್ತವೆ ಎಂದರು.   ಸಾನಿಧ್ಯವನ್ನು ಶ್ರೀ ಮುರುಘೆಂದ್ರ …

Read More »

ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಸೂಪರ್ ಸೀಡ್ ತೂಗುಗತ್ತಿ

ಬೆಳಗಾವಿ: ಒಂದು ಕಡೆ ತಮ್ಮದೇ ಸರ್ಕಾರದ ವಿರುದ್ಧ ಸಚಿವ ಸತೀಶ್​ ಜಾರಕಿಹೊಳಿ ಮುನಿಸು ದೊಡ್ಡ ಸಂಚಲನ ಸೃಷ್ಟಿಸಿದರೆ, ಮತ್ತೊಂದೆಡೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್​ಗೆ ಹುನ್ನಾರ ನಡೆದಿದೆಯಾ ಎಂಬ ಅನುಮಾನ‌ ಮೂಡಿದೆ. ಇದರಿಂದ ಇಂದು ನಡೆಯಲಿರುವ ಪಾಲಿಕೆ‌ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಹೀಗೊಂದು‌ ಅನುಮಾನ‌ ದಟ್ಟವಾಗಲು ಕಾರಣ, ಪಾಲಿಕೆ ಮೆಯರ್ ಶೋಭಾ ಸೋಮನಾಚೆ ಅವರು. ಅಕ್ಟೋಬರ್ 17 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. …

Read More »

ಮತ್ತೆ ಚಲಾವಣೆಗೆ ಬರುತ್ತಾ 1,000 ರೂಪಾಯಿ ನೋಟು?: ಹೀಗೊಂದು ವದಂತಿ

ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್​​ ಬ್ಯಾಂಕ್​ (ಆರ್​ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ.   2016ರಲ್ಲಿ ನವೆಂಬರ್​ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್​ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು …

Read More »

ನಗರ ಪ್ರದೇಶಗಳಲ್ಲಿನ‌ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು: ಹೆಚ್ಚಿನ ಆದಾಯ ಸಂಗ್ರಹದ ನಿಟ್ಟಿನಲ್ಲಿ ನಗರ ಪ್ರದೇಶಗಳಲ್ಲಿನ‌ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 2,000 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ಅಂದಾಜಿಸಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿ ಅಕ್ರಮ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿ ಸೌಲಭ್ಯ ಪಡೆಯುತ್ತಿರುವ ಮಾಲೀಕರಿಗೆ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಗುರುವಾರ ನಡೆದ ಸಂಪುಟ ಉಪಸಮಿತಿಯಲ್ಲಿ ತೀರ್ಮಾನಿಸಲಾಯಿತು. ಅರಣ್ಯ, ಜೀವಿಶಾಸ್ತ್ರ …

Read More »

ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ

ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್​ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್​ನನ್ನು ಬಂಧಿಸಿದ್ದಾರೆ. 2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು …

Read More »

ಬೆಂಗಳೂರು ನಗರದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು: ಅತ್ತಿಬೆಲೆ‌ ಪಟಾಕಿ ದುರಂತಕ್ಕೆ ನಾಲ್ಕೂ‌ ಇಲಾಖೆಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಹೀಗಾಗಿ ಇರುವ ಕಾಯಿದೆಗಳಿಗೆ ಇನ್ನೂ ಹೆಚ್ಚಿನ‌ ಶಕ್ತಿ ನೀಡಿ ಅಗ್ನಿ ದುರಂತ ಹಾಗೂ ಪಟಾಕಿ ಅವಘಡಗಳಿಗೆ ಅಂತ್ಯ ಹಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು. ಪಟಾಕಿ ದುರಂತ ರಾಜ್ಯಕ್ಕೊಂದು ಪಾಠ, ಇದರಿಂದ 17 ಮಂದಿ ಈ …

Read More »