Breaking News

Uncategorized

ಹುಬ್ಬಳ್ಳಿ : ಬಾಲಕಿ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್

ಹುಬ್ಬಳ್ಳಿ : ಭಾರತ ತಂಡದ ಖ್ಯಾತ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ ಎಲ್​ ರಾಹುಲ್ ಹಲವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ್ದಾರೆ. ಇದೀಗ ಸುಡಗಾಡು ಸಿದ್ಧರ ಸಮುದಾಯದ ವಿದ್ಯಾರ್ಥಿನಿಯೋರ್ವಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡಿರುವ ರಾಹುಲ್​, ವಿದ್ಯಾರ್ಥಿನಿ ಶಾಲೆಗೆ ಸೇರಲು ಸಹಕರಿಸಿದ್ದಾರೆ. ಈ ಹಿಂದೆ ಜಮಖಂಡಿಯ ವಿದ್ಯಾರ್ಥಿಯೊಬ್ಬನಿಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ದಾಖಲಾಗಲು ರಾಹುಲ್​ ಹಣಕಾಸಿ‌ನ ನೆರವು ನೀಡಿದ್ದರು. ಧಾರವಾಡದ ಸಿದ್ದೇಶ್ವರ ಕಾಲೋನಿ ನಿವಾಸಿಯಾಗಿರುವ ಸೃಷ್ಟಿ ಕುಲಾವಿ ಎಂಬ ಬಾಲಕಿಯ ವಿದ್ಯಾಭ್ಯಾಸಕ್ಕೆ …

Read More »

ಕಾಂಗ್ರೆಸ್​ಗೆ ಲಿಂಗಾಯತ ಮತ ಬಂದಿದ್ದು ಕೇವಲ ಶೇ.20, ಆದರೂ 7 ಮಂತ್ರಿಗಿರಿ ನೀಡಲಾಗಿದೆ: ಪ್ರಕಾಶ್ ರಾಠೋಡ್

ಬೆಂಗಳೂರು: “ಲಿಂಗಾಯತರ ಕಡೆಯಿಂದ ಕಾಂಗ್ರೆಸ್‌ಗೆ ಬಂದಿರುವ ಮತಗಳು ಕೇವಲ ಶೇ.20ರಷ್ಟು ಮಾತ್ರ. ಹೀಗಿದ್ದರೂ ರಾಜ್ಯ ಸಂಪುಟದಲ್ಲಿ ಲಿಂಗಾಯತರಿಗೆ 7 ಸ್ಥಾನ ನೀಡಲಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್​ ಹೇಳಿದ್ದಾರೆ. ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಶಾಮನೂರು ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕರ್ನಾಟಕದ ಪಾಲಿಗೆ ಪಕ್ಷದ ಆಸ್ತಿಯೂ ಆಗಿರುವ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪನವರ ಹೇಳಿಕೆ …

Read More »

ಬೈಲಹೊಂಗಲ, ಸವದತ್ತಿ, ಯರಗಟ್ಟಿ, ರಾಮದುರ್ಗ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅಧ್ಯಯನ ನಡೆಸಿತು.

ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಇಂದು ಪರಿಶೀಲಿಸಿತು. ಇದಕ್ಕೂ ಮುನ್ನ ನಗರದ ಪ್ರವಾಸಿಮಂದಿರದಲ್ಲಿ ಬೆಳಗ್ಗೆ ಅಜಿತ್ ಕುಮಾರ್ ಸಾಹು ತಂಡ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿತು. ನಂತರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಮೊದಲಿಗೆ ಬೈಲಹೊಂಗಲ ತಾಲೂಕಿನ ನೇಸರಗಿ ಬಳಿಯ ನಾಗಪ್ಪ …

Read More »

ಪ್ರಯಾಣಿಕರನ್ನು ‘ಪಲ್ಲಕ್ಕಿ’ಯಲ್ಲಿ ಹೊತ್ತು ತಿರುಗಲಿದೆ ಕೆಎಸ್​ಆರ್​ಟಿಸಿ

ಬೆಂಗಳೂರು: ಪ್ರಯಾಣಿಕರನ್ನು ಅಂಬಾರಿಯಲ್ಲಿ ಹೊತ್ತು ರಾಜ್ಯದ ರಸ್ತೆಗಳಲ್ಲಿ ಸಂಚರಿಸಿದ್ದ ಕೆಎಸ್​ಆರ್​ಟಿಸಿ ಇದೀಗ ಪಲ್ಲಕ್ಕಿ ಮೂಲಕ ಪ್ರಯಾಣಿಕರನ್ನು ಹೊತ್ತು ಸಂಚರಿಸಲು ಸಿದ್ಧವಾಗಿದೆ. ‘ಸಂತೋಷವು ಪ್ರಯಾಣಿಸುತ್ತಿದೆ’ ಎನ್ನುವ ಟ್ಯಾಗ್ ಲೈನ್​ನೊಂದಿಗೆ ಸಾರಿಗೆ ನಿಗಮದ ಪಲ್ಲಕ್ಕಿ ರಸ್ತೆಗಿಳಿಯಲು ಸಜ್ಜಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಸ್ಲೀಪರ್ ಬಸ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಹವಾನಿಯಂತ್ರಣ ರಹಿತ ಬಸ್​​ಗಳಿಗೆ ಪ್ರಯಾಣಿಕರು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅಂಬಾರಿ ಹೆಸರಿನಲ್ಲಿ ನಾನ್ ಎಸಿ ಸ್ಲೀಪರ್ ಸೇವೆ ಒದಗಿಸುತ್ತಿದ್ದ ಕೆಸ್​ಆರ್​ಟಿಸಿ ಇದೀಗ …

Read More »

ಓವರ್ ಟೇಕ್‌ ಭರದಲ್ಲಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರ: ಬಿಎಂಟಿಸಿ ಬಸ್ ಹರಿದು ಸಾವು

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್​​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್‌ ಮುಗಿಸಿದ್ದ ಭರತ್, ಸಿವಿಲ್‌ ಕಂಟ್ರಾಕ್ಟರ್ …

Read More »

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿತರ ಪಟ್ಟಿ ಹೆಚ್ಚಾಗುತ್ತಿದೆ.

ಧಾರವಾಡ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಇನ್ನೇನಿದ್ರು ಲೋಕಸಭಾ ಚುನಾವಣೆ ಮೇಲೆ ಎಲ್ಲ ಪಕ್ಷಗಳ ಕಣ್ಣುಗಳು ನೆಟ್ಟಿವೆ. ಜೊತೆಗೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್​ಗಾಗಿ ಆಕಾಂಕ್ಷಿತರು ಈಗಲೇ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಕೂಡ ಆಕಾಂಕ್ಷಿಗಳು ಬಹಿರಂಗವಾಗಿಯೇ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈಗಿನಿಂದಲೇ ಸಂಸತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಗಳು ಮುನ್ನಲೆಗೆ ಬರುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆಗಿಳಿಯಲು …

Read More »

70 ವರ್ಷಗಳ ಹಳೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ

ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯದಲ್ಲಿ 70 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ ನೀಡಲಾಗಿದೆ. ಮತ್ತೊಂದೆಡೆ, ಎರಡು ದಶಕಗಳ ನಂತರ ವಿದ್ಯಾರ್ಥಿನಿಯರು ಸಹ ಮಹಾವಿದ್ಯಾಲಯಕ್ಕೆ ಮರಳಿದ್ದಾರೆ. ಉತ್ತರಕಾಶಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಮೊದಲು ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗಾಗಿ 1953ರಲ್ಲಿ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯ ಸ್ಥಾಪಿಸಲಾಗಿದೆ. ದಿವಂಗತ ಬ್ರಹ್ಮಸ್ವರೂಪಾನಂದ ಅವರು ಆಗ ಕಾಲದಲ್ಲಿ 5ರಿಂದ 8 ವಿದ್ಯಾರ್ಥಿಗಳೊಂದಿಗೆ ಈ …

Read More »

ಅ.10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಮಿಳುನಾಡು – ಕರ್ನಾಟಕ ಗಡಿ ಬಂದ್: ವಾಟಾಳ್ ನಾಗರಾಜ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅಕ್ಟೋಬರ್ 10 ರಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು – ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಕೆಆರ್​ಎಸ್​ಗೆ ಮೆರವಣಿಗೆ ನಡೆಸಲಿದ್ದೇವೆ. ಅಕ್ಟೋಬರ್ 10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ. ಅಂದು ಬೆಳಗ್ಗೆ 11 ಗಂಟೆಗೆ ಅತ್ತಿಬೆಲೆಯ ತಮಿಳುನಾಡು ಗಡಿ ಬಂದ್ …

Read More »

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ, ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ -ಶಾಸಕ ಶಾಮನೂರು

ದಾವಣಗೆರೆ, ಅ.02: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (shamanur shivashankarappa) ಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು (Siddaramaiah), ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತರೇ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ …

Read More »

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ.

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ. ಅಷ್ಟಕ್ಕೂ ಆ ಗಾಂಧಿ ಗ್ರಾಮ ಯಾವುದು? ರಾಷ್ಟ್ರಪಿತ ಅಲ್ಲಿಗೆ ಬಂದಿದ್ದೇಕೆ? ಎಷ್ಟು ದಿನ ತಂಗಿದ್ದರು? ಎಂಬುದನ್ನು ತಿಳಿಯುವ ಕುತೂಹಲವೇ. ಹಾಗಾದರೆ ಓದಿ ಈ ಅಪರೂಪದ ಊರಿನ ಹೆಸರು ಹುದಲಿ. ಬೆಳಗಾವಿಯಿಂದ 22 ಕಿ.ಮೀ. ಅಂತರದಲ್ಲಿರುವ ಇದು ಕ್ರಾಂತಿಯ ನೆಲ, ಸ್ವಾತಂತ್ರ್ಯ ಹೋರಾಟಗಾರರ ತವರು, ಖಾದಿಗೆ ಪುನಶ್ಚೇತನ ನೀಡಿದ …

Read More »