ರಾಮದುರ್ಗ: ‘ಬಿಜೆಪಿ ಎಂದರೆ ಸುಳ್ಳಿನ ಪಕ್ಷ. ಪಕ್ಷದ ನಾಯಕರು ಕೋಮುದ್ವೇಷ ಬಿತ್ತುತ್ತಿದ್ದಾರೆ. ಇಂಥವರು ಅಧಿಕಾರದಲ್ಲಿರಲು ಯೋಗ್ಯರಲ್ಲ. ಇವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. ರಾಮದುರ್ಗದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ನ ಪ್ರಜಾಧ್ವನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷನಾಗಿರುವ ನಳೀನ್ಕುಮಾರ ಕಟೀಲ್ ಟಿಪ್ಪುವಿನ ಅಂತ್ಯ ಹಾಡಿದಂತೆ ಸಿದ್ದರಾಮಯ್ಯಗೂ ಅಂತ್ಯ ಹಾಡಲಾಗುವುದು ಎಂದು ಹೇಳಿರುವುದನ್ನು ಎಲ್ಲರೂ ಖಂಡಿಸಬೇಕು’ ಎಂದು ಹೇಳಿದರು. ‘ಬಿಜೆಪಿ ನಾಯಕರಿಗೆ …
Read More »ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.
ಸವದತ್ತಿ: ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ. ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ; “ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು …
Read More »ಹೇಗೆ ನಡೆದುಕೊಳ್ಳಬೇಕು ಎಂದು ಕಲಿಯಿರಿ: ಸಚಿವ ಚವ್ಹಾಣಗೆ ಸಭಾಪತಿ ಹೊರಟ್ಟಿ ಪಾಠ
ಬೆಂಗಳೂರು : ‘ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಸದನದಲ್ಲಿ ಕಲಿಯಬೇಕು, ನಿಮ್ಮ ನಡೆ ಸರಿಯಲ್ಲ, ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ನಿಭಾಯಿಸಬೇಕು. . .’ -ಇದು ವಿಧಾನ ಪರಿಷತ್ನಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ ಪಾಠ. ಕಲಾಪ ಬುಧವಾರ ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಜೆಡಿಎಸ್ನ ಎಸ್.ಎಲ್.ಭೋಜೇಗೌಡ, ರಾಜ್ಯದಿಂದ ಗೋವಾಕ್ಕೆ ಎಷ್ಟು ಪ್ರಮಾಣದಲ್ಲಿ ದನದ ಮಾಂಸ ರಫ್ತಾಗುತ್ತಿದೆ ಎನ್ನುವ ಕುರಿತು ಫೆ. 4ರಂದೇ ಪ್ರಶ್ನೆ ಕಳುಹಿಸಲಾಗಿದೆ. ಆದರೆ, …
Read More »ಜಡ್ಜ್ ಸ್ಥಾನಕ್ಕೆ ರಾಜೀನಾಮೆ; ಜೆಡಿಎಸ್ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ
ಗದಗ: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಹೊಸ ಹೊಸ ಅಭ್ಯರ್ಥಿಗಳು ವಿವಿಧ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲೂ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಪ್ರವೇಶಿಸುತ್ತಿರುವವರ ಸಂಖ್ಯೆ ಈ ಬಾರಿ ಹೆಚ್ಚಿದೆ. ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ರಾಜೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದಾರೆ. ಗದಗ ನಗರದ ಜೆಎಂಎಫಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ …
Read More »ಹಸಿದವರಿಗೆ ಅನ್ನ ಹಾಕುತ್ತಿರುವ ಮಂಗಳಮುಖಿಯರು,
ಉಡುಪಿ: ಬಸ್ ಸ್ಟಾಂಡ್ ಪಕ್ಕದ ಬೀದಿಬದಿಯಲ್ಲಿ ಚಿಕ್ಕ ಟೇಬಲ್, ಡಬ್ಬಗಳಲ್ಲಿ ವಿಧ ವಿಧದ ತಿಂಡಿ ತಿನಿಸು, ಟೀ. ಚಿಕ್ಕದಾದ್ರೂ ಚೊಕ್ಕ ಕ್ಯಾಂಟೀನ್ (Transgenders Hotel In Udupi) ಇಟ್ಕೊಂಡಿರೋ ಇವ್ರು ಮಂಗಳಮುಖಿಯರು (Positive Story Of Transgenders) ಅಂದ್ರೆ ಯಾರೂ ನಂಬಲ್ಲ! ಆದ್ರೆ ಉಡುಪಿಯ ಈ ಮಂಗಳಮುಖಿಯರು ಮಾತ್ರ ತಮ್ಮ ಪ್ರಯತ್ನದಿಂದ ಕ್ರಾಂತಿ ಗೀತೆಯನ್ನೇ ಹಾಡುತ್ತಿದ್ದಾರೆ. ಹೀಗೆ ಬದಲಾವಣೆಯ ದಾರಿ ಹಿಡಿದ ಮಂಗಳಮುಖಿಯರ ಹೆಸರು ಪೂರ್ವಿ, ಡಿಂಪಲ್, ವೈಷ್ಣವಿ ಮತ್ತು …
Read More »ಮೈಸೂರಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ
ಮೈಸೂರು: ಆರ್.ಟಿ.ನಗರದಲ್ಲಿ ಮಂಗಳೂರಿನ ದೈವಗಳು ಗುಡಿಗಳು ತಲೆ ಎತ್ತಿದ್ದು, ಜನರ ನಂಬಿಕೆಯಾದ ಕೊರಗಜ್ಜ ದೈವದ ಹೆಸರಿನಲ್ಲಿ ದಂಧೆ ನಡೆಯುತ್ತಿದ್ದೆಯಾ ಎಂಬ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಕೊರಗಜ್ಜನ ದೈವಸ್ಥಾನದ ಪಕ್ಕದಲ್ಲಿಯೇ, ಇದೀಗ ದೈವ ರಾಜ ಗುಳಿಗ ಹೆಸರಿನಲ್ಲಿ ಮತ್ತೊಂದು ದೈವಸ್ಥಾನ ನಿರ್ಮಾಣವಾಗಿದೆ. ಇದಲ್ಲದೆ ದೈವಸ್ಥಾನದ ಟ್ರಸ್ಟ್ ಸದಸ್ಯರಲ್ಲಿಯೇ ಹಣಕ್ಕಾಗಿ ಕಿತ್ತಾಟ ಆರಂಭವಾಗಿದ್ದು, ದೈವಸ್ಥಾನದ ಅರ್ಚಕ ಹುಂಡಿಯನ್ನು ತನ್ನ ಮನೆಗೆ ಕೊಂಡೊಯ್ದಿರುವ ಘಟನೆ ನಡೆದಿದೆ. …
Read More »K.I.A.D,B, ಭೂಮಿ ಹಂಚಿಕೆ: ಅವ್ಯವಹಾರ ಆರೋಪ
ಬೆಂಗಳೂರು: ‘ಕೆಐಎಡಿಬಿಯಿಂದ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ನೀಡಿಕೆಯಲ್ಲಿ ಅವ್ಯವಹಾರವಾಗಿದೆ’ ಎಂದು ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಮಾಡಿದ ಆರೋಪ ಚರ್ಚೆಗೆ ಗ್ರಾಸವಾಯಿತು. ‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಬ್ರಿಗೇಡ್ ರಿಯಲ್ ಎಸ್ಟೇಟ್ ಸಂಸ್ಥೆಗೆ ಕೆಐಎಡಿಬಿಯಿಂದ ಭೂಮಿ ನೀಡಲಾಗಿದೆ. ಅದರಲ್ಲಿ ಬಡವರಿಗೆ ಮನೆ ಕಟ್ಟಿಕೊಡುವುದಾಗಿ ಹೇಳಲಾಗಿತ್ತು. ಆದರೆ, ನಿಯಮ ಪಾಲನೆ ಆಗದಿರುವುದರಿಂದ ಸರ್ಕಾರಕ್ಕೆ ನಷ್ಟವಾಗಿದೆ’ ಎಂದು ಮರಿತಿಬ್ಬೇಗೌಡ ದೂರಿದರು. …
Read More »ಬೆಳಗಾವಿ: ಕಣ್ಮನ ಸೆಳೆದ ‘ಮಕ್ಕಳ ಕಲಿಕಾ ಹಬ್ಬ
(ಬೆಳಗಾವಿ): ಒಂದೆಡೆ ಮಹಿಳೆಯರ ಪೂರ್ಣಕುಂಭ ಮೆರವಣಿಗೆ ಕಣ್ಮನ ಸೆಳೆದರೆ, ಮತ್ತೊಂದೆಡೆ ಮಕ್ಕಳ ಜಾನಪದ ಕಲೆಗಳ ಪ್ರದರ್ಶನ ಜನರನ್ನು ರಂಜಿಸಿತು. ಆಲಂಕೃತ ಚಕ್ಕಡಿಗಳು, ಟ್ರ್ಯಾಕ್ಟರ್ಗಳ ಸಾಲು ಗ್ರಾಮೀಣ ಸೊಗಡು ಸೂಸಿತು. ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಮಿಂದೆದ್ದರೆ, ನೂರಾರು ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸಿ ಬೀಗಿದರು. ಮಾಸ್ತಮರ್ಡಿಯಲ್ಲಿ ಸೋಮವಾರದಿಂದ ಆರಂಭಗೊಂಡ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಇಂತಹ ದೃಶ್ಯಕಾವ್ಯಕ್ಕೆ ಸಾಕ್ಷಿಯಾಯಿತು. ಮಕ್ಕಳಲ್ಲಿ ಕಲಿಕೆ ಬಗ್ಗೆ ಪ್ರೇರಣೆ ತುಂಬಲು …
Read More »ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ‘ಅತ್ಯುತ್ತಮ’ ಪ್ರಶಸ್ತಿ
ಬೆಳಗಾವಿ: ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಲಭಿಸಿದೆ. ಭಾರತ ಸರಕಾರದ ಗೃಹ ಸಚಿವಾಲಯ ಪ್ರತಿ ವರ್ಷ ಉತ್ತಮ ಪೊಲೀಸ್ ಠಾಣೆಗಳನ್ನು ನಿರ್ಧರಿಸುತ್ತಿದ್ದು ಕಳೆದ ವರ್ಷದಲ್ಲಿನ ಉತ್ತಮ ನಿರ್ವಹಣೆ ಹಾಗೂ ಕಾರ್ಯನಿರ್ವಹಣೆ ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳ ಶ್ರೇಯಾಂಕ ನಿರ್ಧಾರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ಪ್ರಕ್ರಿಯೆಯಾಗಿದೆ. ಅಪರಾಧ ದರ, ತನಿಖೆ, ಪ್ರಕರಣಗಳ ವಿಲೇವಾರಿ, ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಯ ವಿತರಣೆ ಸೇರಿದಂತೆ 165 …
Read More »(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »