ಮಂಗಳೂರು, ಮೇ 06: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ಟೇಬಲ್ ರಶೀದ್ ಅವರು ಬಜ್ಪೆ ಪೊಲೀಸ್ …
Read More »ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್ ಏಳು ವರ್ಷಗಳ ಕಾಲ ಶಿಕ್ಷೆ
ಹೈದರಾಬಾದ್, ಮೇ 06: ಓಬಳಾಪುರಂ ಅಕ್ರಮ ಅದಿರು ಗಣಿಗಾರಿಕೆ (OCM Illegal Mining Case) ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಿದೆ. ಕೋರ್ಟ್ನಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ ಅವರನ್ನು ಚಂಚಲಗುಡ ಜೈಲಿಗೆ ಶಿಫ್ಟ್ ಮಾಡಿದೆ. ಸಿಬಿಐ ಕೋರ್ಟ್ ಆದೇಶದಿಂದ ಓಬಳಾಪುರಂ ಮೈನಿಂಗ್ ಕೇಸ್ನಲ್ಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಮ್ಮೆ ಚಂಚಲಗೂಡ ಜೈಲೂಟ …
Read More »ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ …
Read More »ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ
ಕಾರವಾರ (ಉತ್ತರಕನ್ನಡ): ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಗಂಟೆಗಳ ಕಾಲ ನಗರದ ಮಿತ್ರ ಸಮಾಜದ ಆವರಣದಲ್ಲಿ ಭಾನುವಾರ ಪುಟಾಣಿಗಳು ಸ್ಕೇಟಿಂಗ್ ಮಾಡಿದರು. ಹಣಬರ್ ಸ್ಕೇಟಿಂಗ್ ಕ್ಲಬ್ನ ವತಿಯಿಂದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ಲಬ್ನ ಸುಮಾರು 200 ಮಕ್ಕಳು ಕ್ಯಾಂಡಲ್ ಹಿಡಿದು ಭಾರತದ ಭೂಪಟ ರಚನೆ ಮಾಡಿ, ಅದರ ಸುತ್ತ ಸ್ಕೇಟಿಂಗ್ ಮಾಡುವ ಮೂಲಕ ಮೃತರನ್ನು ಸ್ಮರಿಸಿದರು.ಕಾರ್ಯಕ್ರಮಕ್ಕೆ ಕಾರವಾರ-ಅಂಕೋಲಾ …
Read More »ಇಂದಿನಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ. ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 58,960 ಗಣತಿದಾರರು (Enumerators) ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸುಮಾರು 6,000 ಸೂಪರ್ ವೈಸರ್ಸ್ ಗಳನ್ನು ನಿಯೋಜಿಸಲಾಗಿದೆ. ಇವರು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ …
Read More »ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ …
Read More »ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾರಿಹಾಳ …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ ಬೆಳಗಾವಿ ಜಿಲ್ಲೆಯಿಂದ ರಾಜ್ಯಕ್ಕೆ ಟಾಪರ್ ಆಗಿರುವ ವಿದ್ಯಾರ್ಥಿನಿ ರೂಪಾ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 925ಕ್ಕೆ 925 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿರುವ ಬೈಲಹೊಂಗಲ ತಾಲೂಕು ದೇವಲಾಪುರ ಸರಕಾರಿ ಪ್ರೌಢಶಾಲೆ …
Read More »ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ
ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲೇನಿದೆ: ”ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು …
Read More »ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಸಾವು
ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಬಯೋಮೆಟ್ರಿಕ್ ಹಾಜರಾತಿ ನೀಡಲು ತೆರಳುತ್ತಿದ್ದ ಪೌರ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಗರ ಮೇಲ್ಸೇತುವೆಯ ಕೆಳಗೆ ಅಪಘಾತ ಸಂಭವಿಸಿದ್ದು, ಶ್ರೀರಾಂಪುರದ ನಿವಾಸಿ ಸರೋಜಮ್ಮ(51) ಸಾವನ್ನಪ್ಪಿದವರು. ಇಂದು ಬೆಳಗ್ಗೆ 6:30ಕ್ಕೆ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ಸರೋಜಮ್ಮ ಬಯೋಮೆಟ್ರಿಕ್ ಹಾಜರಾತಿ ನೀಡಲು ವಾರ್ಡ್ ಆಫೀಸ್ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆ ಸಿಗ್ನಲ್ ದಾಟುವಾಗ ಟಿಪ್ಪರ್ …
Read More »