Breaking News

Uncategorized

ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ!

ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. …

Read More »

ಬೆಂಗಳೂರಿನ 12 ಆರ್​​ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್​ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್​​ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್​​ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಯನಗರ ಹಾಗೂ ರಾಜಾಜಿನಗರದ ಆರ್​​ಟಿಓ …

Read More »

ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಅವರ ತಂದೆ, ತಾಯಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದರು

ರಾಯಚೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್, ತಾಯಿ ಉಷಾ ಸುನಕ್ ಹಾಗೂ ಇನ್ಫೋಸಿಸ್​​ ಫೌಂಡೇಶನ್​ ಸಂಸ್ಥಾಪಕಿ ಸುಧಾ ಮೂರ್ತಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದರು. ಆರಂಭದಲ್ಲಿ ಗ್ರಾಮದ ಅಧಿದೇವತೆ ಶ್ರೀಮಂಚಾಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಯರ ಮೂಲಬೃಂದಾವನ ದರ್ಶನ ಪಡೆದು, ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ​ ರಿಷಿ ಸುನಕ್‌ …

Read More »

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಲು ನೆರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಬಾಲಕನೊಬ್ಬ ಶಾಲೆಗೆ ಹೋಗದೇ ಕುರಿ ಕಾಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಬಾಲಕನನ್ನು ಮತ್ತೆ ಶಾಲೆಗೆ ಸೇರಲು ನೆರವಾಗಿದ್ದಾರೆ. ಬಸಾಪುರ ಗ್ರಾಮದ ಯೋಗೇಶ್ ಎಂಬ ಬಾಲಕನನ್ನು ಮರಳಿ ಶಾಲೆಗೆ ಸೇರಿಸಲಾಗಿದೆ. ಈತನನ್ನು ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ಕಳುಹಿಸಿದ್ದರು.     ಈ ಬಗ್ಗೆ ಸ್ಥಳೀಯರಾದ ಮಹೇಂದ್ರ ಎಂಬವರು ತಮ್ಮ …

Read More »

ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ’: ಬೊಮ್ಮಾಯಿ

ಬೆಂಗಳೂರು: ಲೋಕಸಭೆ ಚುನಾವಣೆ ಹಾಗೂ ಜೆಡಿಎಸ್ ಜೊತೆ ಮೈತ್ರಿ ವಿಚಾರ ಚರ್ಚಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಡಿ ವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮುಖಂಡರಾದ ತೇಜಸ್ವಿನಿ ಅನಂತಕುಮಾರ್, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ …

Read More »

ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ

ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …

Read More »

ನೆದರ್ಲೆಂಡ್ಸ್​ ಪ್ರಧಾನಿಯೊಂದಿಗೆ ಡಿಸಿಎಂ ಸಭೆ

ಬೆಂಗಳೂರು: ಅತ್ಯುತ್ತಮ ಕೈಗಾರಿಕಾ ನೀತಿ, ಮೂಲ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನೆದರ್ಲೆಂಡ್ಸ್​ ಪ್ರಧಾನಿಯೊಂದಿಗೆ ಕಾಂಗ್ರೆಸ್​ ನಾಯಕರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಹಾಗೂ ಆ …

Read More »

ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ : C.M.ಸಿದ್ದರಾಮಯ್ಯ

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶ್ರೀ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಉಚಿತ ವಿದ್ಯಾರ್ಥಿನಿಲಯದ ಲೋಕಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜಿಎಸ್ ಸಾಂಸ್ಕೃತಿಕ ಭವನ ಮತ್ತು ಉಚಿತ ವಿದ್ಯಾರ್ಥಿನಿಲಯದ ಲೋಕಾರ್ಪಣೆ ಮಾಡಿದ ಸಿಎಂನೂತನ …

Read More »

ಮಲೆನಾಡು ಭಾಗದಲ್ಲಿ ಹಬ್ಬ ಹರಿದಿನಗಳು ತನ್ನದೇ ಆದ ವೈಶಿಷ್ಟ್ಯತೆ ಉಳಿಸಿಕೊಂಡಿವೆ.

ಶಿರಸಿ: ಮಲೆನಾಡು ಭಾಗದಲ್ಲಿ ಹಬ್ಬ ಹರಿದಿನಗಳು ತನ್ನದೇ ಆದ ವೈಶಿಷ್ಟ್ಯತೆ ಉಳಿಸಿಕೊಂಡಿವೆ. ಅದರಲ್ಲೂ ಗಣೇಶ ಚತುರ್ಥಿಯ ಸಂದರ್ಭದಲ್ಲಿ ನಡೆಯುವ ಚಕ್ಲಿ ಕಂಬಳಕ್ಕೆ ಹಲವು ವಿಶೇಷತೆಗಳಿವೆ. ಈಗ ಚೌತಿಗೆ ಕೆಲವೇ ದಿನ ಉಳಿದಿರುವಾಗ ಮಲೆನಾಡಿನ ಶಿರಸಿಯ ಗ್ರಾಮೀಣ ಭಾಗದಲ್ಲಿ ಜೋರಾಗಿ ಚಕ್ಲಿ ಕಂಬಳ ನಡೆಯುತ್ತಿದೆ. ಮಲೆನಾಡಿನ ಭಾಗದಲ್ಲಿ ಹಬ್ಬ ಹರಿದಿನಗಳು ವಿಭಿನ್ನ, ವೈವಿಧ್ಯ, ಅದೇ ಇಲ್ಲಿನವರ ವಿಶೇಷತೆ. ಹಬ್ಬ ಹರಿದಿನವಿರಬಹುದು, ಪೂಜೆ ಪುನಸ್ಕಾರಗಳಿರಬಹುದು, ಎಲ್ಲದರಲ್ಲಿಯೂ ಇತರರಿಗಿಂತ ಸ್ವಲ್ಪ ವಿಭಿನ್ನ.   ಈಗ ಗೌರಿ …

Read More »

ಸಿಎಂ ವಿರುದ್ಧ ಟೀಕೆ‌ ಮಾಡಿರುವುದರಿಂದ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರಿಗೆ ಡ್ಯಾಮೇಜ್ ಆಗಲಿದೆ:ದಿನೇಶ್ ಗುಂಡೂರಾವ್

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ‌ ಮಾಡಿರುವುದರಿಂದ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರಿಗೆ ಡ್ಯಾಮೇಜ್ ಆಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರು ಯಾರ ಬಗ್ಗೆ ಟೀಕೆ ಮಾಡ್ತಾರೆ, ಯಾಕೆ ಮಾಡ್ತಾರೆ ಅರ್ಥವಾಗ್ತಿಲ್ಲ. ಅವರು ಟೀಕೆ ಮಾಡಿದ ವೇದಿಕೆಯಲ್ಲಿ ಎಲ್ಲ ಪಕ್ಷದ ಮುಖಂಡರುಗಳಿದ್ದರು. ಈಗಾಗಲೇ ಹೈಕಮಾಂಡ್ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೆ ಅವರು ಒಬ್ಬ ರಾಜಕಾರಣಿಯಾಗಿ ಆ ರೀತಿ …

Read More »