Breaking News

Uncategorized

ಅಂಗಡಿಯೊಂದಕ್ಕೆ ಬಂದ 10 ಲಕ್ಷ ರೂ. ವಿದ್ಯುತ್​ ಬಿಲ್.. ಮಾಲೀಕನಿಗೆ ಪವರ್​ ಶಾಕ್​!

ಚಿಕ್ಕಮಗಳೂರು : ಅಂಗಡಿ ಮಾಲೀಕರೊಬ್ಬರಿಗೆ ಒಂದು ತಿಂಗಳಿಗೆ ಬರೋಬ್ಬರಿ 10 ಲಕ್ಷ ರೂಪಾಯಿ ವಿದ್ಯುಲ್​ ಬಿಲ್​ ಬಂದಿದ್ದು, ವಿದ್ಯುತ್​ ಬಿಲ್​ ಕಂಡು ಅಂಗಡಿ ಮಾಲೀಕರು ಬೆಚ್ಚಿಬಿದ್ದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಕಡೂರು ಪಟ್ಟಣದ ಉಳುಕಿನಕಲ್ಲು ಸಮೀಪದ ಡಾಗಾ ಕಾಂಪ್ಲೆಕ್ಸ್ ನಲ್ಲಿರುವ ಮೋಹಿತ್ ಏಜೆನ್ಸಿಗೆ ಆಗಸ್ಟ್ ತಿಂಗಳಿಗೆ 10,26,054 ರೂಪಾಯಿ ವಿದ್ಯುತ್​ ಬಿಲ್​ ನೀಡಲಾಗಿದೆ. ಪ್ರತಿ ತಿಂಗಳು ವಿದ್ಯುತ್ ಬಿಲ್ ಅಂದಾಜು 4,000ರಿಂದ 4,500 ರೂಪಾಯಿ ಮಾತ್ರ ಬರುತ್ತಿತ್ತು. ಆದರೆ …

Read More »

ಬುಮ್ರಾ ಅಭಿನಂದಿಸಿ ವಿಶೇಷ ಉಡುಗೊರೆ ನೀಡಿದ ಪಾಕ್ ವೇಗಿ ಶಾಹೀನ್ ಅಫ್ರಿದಿ! ವಿಡಿಯೋ

ಕೊಲೊಂಬೊ (ಶ್ರೀಲಂಕಾ): ಭಾರತ-ಪಾಕಿಸ್ತಾನ ತಂಡಗಳ ನಡುವಿನ ಏಷ್ಯಾ ಕಪ್ 2023ರ ಸೂಪರ್-4 ಪಂದ್ಯ ಮಳೆಯಿಂದಾಗಿ ಭಾನುವಾರ ಅಪೂರ್ಣಗೊಂಡಿತು. ಈ ಪಂದ್ಯ ಮೀಸಲು ದಿನವಾದ ಇಂದು ನಡೆಯಲಿದೆ. ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಆಕ್ರಮಣಕಾರಿ ಅರ್ಧಶತಕದಿಂದಾಗಿ ಭಾರತ 24.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 147 ರನ್ ಗಳಿಸಿತ್ತು. ಇಬ್ಬರು ಆರಂಭಿಕ ಬ್ಯಾಟರ್‌ಗಳು ಔಟಾದ ನಂತರ ಮೈದಾನದಲ್ಲಿ ಮಳೆ ಅಬ್ಬರಿಸಿತು. ಅಂತಿಮವಾಗಿ ಪಂದ್ಯವನ್ನು ಮೀಸಲು ದಿನದಂದು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ಈ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​

ಚಿಕ್ಕೋಡಿ(ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ. ಈಗ ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅವಕಾಶ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ನಿಪ್ಪಾಣಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ, ಸರ್ಕಾರ ಪರವಾಗಿ ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಿನ್ನೆ ಮುಖ್ಯಮಂತ್ರಿಗಳ ಬಳಿ …

Read More »

JDSನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವ: ಸಿದ್ದರಾಮಯ್ಯ

ಹುಬ್ಬಳ್ಳಿ: ಜೆಡಿಎಸ್​ನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ. ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಆದರೆ ಇದೀಗ ಬಿಜೆಪಿಯವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್​ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್​ನ ಬಿಜೆಪಿಯ …

Read More »

2ಎ‌ ಮೀಸಲಾತಿ ಸಲುವಾಗಿ ಮತ್ತೆ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ‌ ಮೀಸಲಾತಿ ನೀಡಬೇಕು, ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್‌ 10 ರಂದು ನಿಪ್ಪಾಣಿಯಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.   ನಗರದ ಗಾಂಧಿ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಬೇಡಿಕೆ ಈಡೇರಿಸುವಂತೆ …

Read More »

ಸಿಂಥೆಟಿಕ್ ರಿದಮ್ ಇಂಡಿಯನ್ ಮೃದಂಗ ಮತ್ತು ತಬಲಾವನ್ನು ಸಿಂಥೆಟಿಕ್ ಡ್ರಮ್ ಹೆಡ್‌ಗಳನ್ನು ಬಳಸಿ ತಯಾರಿಸಲಾಗುತ್ತಿದೆ

ಬೆಂಗಳೂರು: ನಮ್ಮ ದೈನಂದಿನ ಜೀವನದಲ್ಲಿ ಸಂಗೀತ ಒಂದು ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಅನಾದಿ ಕಾಲದಿಂದಲೂ ರಾಗ, ತಾಳ, ಲಯ ಬದ್ಧ ನಾದವು ವಿಶ್ವದ ಎಲ್ಲಾ ಸಂಸ್ಕೃತಿಗಳಲ್ಲಿ, ಸಂಗೀತ ಪ್ರಾಕಾರಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತ ಬಂದಿದೆ. ಅಲ್ಲದೇ ಹಲವು ಕಾಯಿಲೆಗಳು ಶೀಘ್ರವಾಗಿ ಗುಣವಾಗಲು ಇದು ಸಹಕಾರಿಯಾಗಿದೆ ಎನ್ನುವುದು ಹಲವು ಸಂಶೋಧನೆಗಳಿಂದ ದೃಢಪಟ್ಟಿದೆ. ಸಂಗೀತವು ಪ್ರೀತಿ ಮತ್ತು ಸಂತೋಷದ ಸಾರ್ವತ್ರಿಕ ಭಾಷೆಯಾಗಿದ್ದು, ಇದಕ್ಕೆ ಅಪವಾದ ಎಂಬಂತೆ ವಾದ್ಯಗಳಿಗೆ ಪ್ರಾಣಿ ಚರ್ಮವನ್ನು ಬಳಸುತ್ತಿದ್ದಾರೆ. ಆದರೆ, …

Read More »

ಕೇಂದ್ರ, ರಾಜ್ಯ ಸರ್ಕಾರಗಳ ಅಣುಕು ಶವಯಾತ್ರೆ.

ಮಂಡ್ಯ : ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಜೀವನಾಡಿ ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿರೋದು ಅನ್ನದಾತನ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನ ವಿರೋಧಿಸಿ ಜಿಲ್ಲಾದ್ಯಂತ ಕಾವೇರಿ ಕಿಚ್ಚು ಹೆಚ್ಚಾಗ್ತಾನೇ ಇದೆ. ಆದ್ರೆ ಸರ್ಕಾರ ಮಾತ್ರ ಮೌನ ವಹಿಸಿದ್ದು, ಸರ್ಕಾರದ ಕಣ್ಣು ತೆರೆಸಲು ವಿಭಿನ್ನ ರೀತಿಯಲ್ಲಿ ಹೋರಾಟಗಳನ್ನ ಮಾಡಲಾಗ್ತಿದೆ. ಇಷ್ಟಕ್ಕೂ ಬಗ್ಗದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು …

Read More »

ಕೃಷ್ಣ ಜನ್ಮಾಷ್ಟಮಿ ನಿಯಮ ಜಾರಿ: ಮೊಸರು ಗಡಿಗೆ ಆಚರಣೆಗೆ ಸಿಸಿಟಿವಿ.. ಮಫ್ತಿಯಲ್ಲಿ ಪೊಲೀಸರ ಕಣ್ಗಾವಲು

ಮುಂಬೈ: ಕೃಷ್ಣಾ ಎಂದಾಗ ಅವನು ಗೋಪಿಕೆಯರೊಂದಿಗೆ ಮಾಡುತ್ತಿದ್ದ ತುಂಟಾಟಗಳು ನೆನಪಿಗೆ ಬರುತ್ತವೆ. ಆದರೆ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಯನ್ನು ಆಚರಿಸುವಾಗ ಕುಚೇಷ್ಟೆಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದರೆ ಅಂತಹವರ ಮೇಲೆ ನಿಗಾ ಇಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಇದಕ್ಕಾಗಿ ಮಫ್ತಿಯಲ್ಲಿ ಪೊಲಿಸರು ಜನರ ಜೊತೆಯೇ ಇದ್ದು, ಆ ರೀತಿ ನಡೆದುಕೊಂಡದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬಣ್ಣದ ನೀರನ್ನು ಅಜಾಗರೂಕತೆಯಿಂದ ಎಸೆಯುವುದು ಮತ್ತು ಮೊಸರು ಗಡಿಗೆ ಹಬ್ಬದ ಸಮಯದಲ್ಲಿ ಮಹಿಳೆಯರಿಗೆ …

Read More »

ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರ ಇವರ ಸ್ಮರಣಾರ್ಥ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ

ಗೋಕಾಕ : ಖಾತ್ಯ ಉದ್ಯಮಿ ಚಂದ್ರಶೇಖರ ಕೊಣ್ಣೂರು ಅವರ ಧರ್ಮಪತ್ನಿ ಅವರ ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರು ಅವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿರುವ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ನೆರವೇರಿತು. ಮರಡಿ ಶಿವಾಪುರದ ಹೊರವಲಯದಲ್ಲಿ ನಿರ್ಮಿಸಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆಯನ್ನು ಮಠಾಧೀಶರು ಹಾಗೂ ಗಣ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿರುವ ಸುಕ್ಷೇತ್ರ ಇಂಚಲ ಮಠದ ಪರಮಪೂಜ್ಯ ಶ್ರೀ ಡಾ ಶಿವಾನಂದ …

Read More »

ಸ್ವಾಮೀಜಿ ನಿರ್ಧಾರದಿಂದ ಶಿಕ್ಷಕರ ತವರೂರಾಗಿ ಮಾರ್ಪಟ್ಟಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಕರನ್ನು‌ ಹೊಂದಿರುವ ಹೆಗ್ಗಳಿಕೆಯನ್ನು ಈ ಗ್ರಾಮ ಪಡೆದುಕೊಂಡಿದೆ.

ಬೆಳಗಾವಿ: ಅದು ಶಿಕ್ಷಣ ವಂಚಿತ ಕುಗ್ರಾಮವಾಗಿತ್ತು. ಆದರೆ ಆ ಸ್ವಾಮೀಜಿ ಅಂದು ತೆಗೆದುಕೊಂಡ ನಿರ್ಧಾರದಿಂದ ಈಗ ಇಡೀ ಗ್ರಾಮದ ಚಿತ್ರಣವೇ ಬದಲಾಗಿದೆ. ಶಿಕ್ಷಕರ ತವರೂರಾಗಿ ಮಾರ್ಪಟ್ಟಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಕರನ್ನು‌ ಹೊಂದಿರುವ ಹೆಗ್ಗಳಿಕೆಯನ್ನು ಈ ಗ್ರಾಮ ಪಡೆದುಕೊಂಡಿದೆ. ಶಿಕ್ಷಕರ ದಿನಾಚರಣೆ ನಿಮಿತ್ತ ಈ ವಿಶೇಷ ವರದಿ ನಿಮಗಾಗಿ. ಹೌದು, ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಇಂಚಿಂಚಿಗೂ ಶಿಕ್ಷಕರು ಸಿಗುತ್ತಾರೆ. ರಾಜ್ಯದ ವಿವಿಧೆಡೆ ಐನೂರಕ್ಕೂ ಹೆಚ್ಚು ಶಿಕ್ಷಕರು ಅಕ್ಷರ ಕಲಿಸುವ ಮೂಲಕ‌ …

Read More »