Breaking News

Uncategorized

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

    *ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ತಿಂಗಳ ಅಂತ್ಯದೊಳಗೆ ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು …

Read More »

ಅನಿಲ್‌ ದೇಶ್‌ಮುಖ್‌ ಆಪ್ತ ಕುಂದನ್‌ ಶಿಂಧೆಗೆ ಜಾಮೀನು

ಮುಂಬೈ (‍ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರ ಆಪ್ತ ಕುಂದನ್‌ ಶಿಂಧೆಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಶಿಂಧೆ ಅವರು ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯಾಗಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.   ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಶಿಂಧೆ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದರು. ಪ್ರಕರಣದ ಇತರ ಆರೋಪಿಗಳಲ್ಲಿ ಅನಿಲ್ ದೇಶಮುಖ್ …

Read More »

ಶಿವಾಜಿ ಮಹಾರಾಜರಿಗೆ ಅಪಮಾನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ. ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ. ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ …

Read More »

ಧಾರ್ಮಿಕ ಕೃತಿಗಳನ್ನು ಪ್ರತಿಯೊಬ್ಬರೂ ಓದಿ

ಹಂದಿಗುಂದ: ‘ಧಾರ್ಮಿಕ ಹಾಗೂ ಆಧ್ಯಾತ್ಮಿಕ ಪುಸ್ತಕಗಳು ಒಳ್ಳೆಯ ಸಮಾಜ ನಿರ್ಮಾಣಕ್ಕೆ ಸಹಕಾರಿ. ಪ್ರತಿಯೊಬ್ಬರೂ ಈ ಗ್ರಂಥಗಳನ್ನು ಓದುವ ರೂಢಿ ಬೆಳೆಸಿಕೊಳ್ಳಿ’ ಎಂದು ಸಾಹಿತಿ ವಿ.ಎಸ್.ಮಾಳಿ ಹೇಳಿದರು. ಹಂದಿಗುಂದ ಗ್ರಾಮದಲ್ಲಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಸಿದ್ದೇಶ್ವರ ಶಿವಯೋಗಿಗಳವರ ನೂತನ ಮಠದ ಲೋಕಾರ್ಪಣಾ ಕಾರ್ಯಕ್ರಮದ ಎರಡನೆಯ ದಿನವಾದ ಸೋಮವಾರ, ಜಿಲ್ಲಾ ಮಟ್ಟದ ಶರಣ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನವಹಿಸಿ ಮಾತನಾಡಿದರು.   ‘ಬಾಗೇನಾಡಿನ ಹಾಲುಮತದ ಪ್ರಮುಖ ಐದು ದೈವಗಳಾದ ಆಲಖನೂರಿನ …

Read More »

ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ರಮೇಶ ಜಾರಕಿಹೊಳಿ ಒತ್ತಾಯ

ಬೆಳಗಾವಿ: ಸಿಡಿ ವಿಚಾರದಲ್ಲಿ ಷಡ್ಯಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆಶ್ರಯದಲ್ಲಿಯೇ ಆ ಯುವತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಡಿಕೆಶಿ, ಯುವತಿ ಸೇರಿದಂತೆ ಸಿಡಿ ಗ್ಯಾಂಗ್ ಬಂಧಿಸುವಂತೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.   ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂರಾರು ಜನರ ಸಿಡಿ ಇಟ್ಟುಕೊಂಡು ಷಡ್ಯಂತ್ರ ರೂಪಿಸಿರುವ ಮಹಾನಾಯಕ ಡಿ.ಕೆ.‌ಶಿವಕುಮಾರ ಅವರನ್ನು ಕೂಡಲೇ ಬಂಧಿಸಬೇಕು. ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರು. ಸುಮಾರು ಒಂದು ವರ್ಷದಿಂದ …

Read More »

ಮೂಡಲಗಿ 72ಕ್ಕೂ ಅತೀ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿರುವ ಪಟ್ಟಣವನ್ನು ಸಹಕಾರ ನಗರ ಎಂದು ಗುರುತಿಸಿ

ಮೂಡಲಗಿ: ‘ಬೆಳಗಾವಿ ಜಿಲ್ಲೆಯಲ್ಲಿಯೇ 72ಕ್ಕೂ ಅತೀ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿರುವ ಪಟ್ಟಣವನ್ನು ಸಹಕಾರ ನಗರ ಎಂದು ಗುರುತಿಸಿ ವಿಶೇಷ ಸ್ಥಾನಮಾನ ನೀಡುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಒತ್ತಾಯಿಸುತ್ತೇನೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಪಟ್ಟಣದ ಬಸವ ರಂಗ ಮಂಟಪದಲ್ಲಿ ಜರುಗಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಂಭವನ್ನು ಕಬ್ಬಿನ ಪೈರಿಗೆ ನೀರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಿಡಿಸಿಸಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಗುದ್ದಾಟ ಬಗೆಹರಿಸಲು ಮೋದಿಯೇ ಬರಬೇಕಂತೆ!

ಸಚಿವ ನಿರಾಣಿ-ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವೆ ವೈಮನಸ್ಸು-ಸಮರ ಜೋರಾಗಿ ನಡೆದಿದೆ. ಅದೇ ತೆರನಾಗಿ ಕಲಬುರಗಿ ಜಿಲ್ಲೆಯ ಒಬ್ಬರು ಬಿಜೆಪಿ ಶಾಸಕರ ನಡುವೆಯೂ ಆಂತರಿಕ ತಿಕ್ಕಾಟವೂ ಜೋರಾಗಿದೆ. ಶಾಸಕರ ತಾರಾಜೋಡಿ-ಸಹೋದರರಂತಿದ್ದ ಕೆಕೆಆರ್‌ಟಿಸಿ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ್‌ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷರಾಗಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ ಪರಸ್ಪರ ಮುನಿಸಿಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ಮಾತುಕತೆ ನಡೆಯದೇ ಶೀತಲ ಸಮರ ನಡೆಯುತ್ತಿದೆ. ಕೋರ್‌ ಕಮಿಟಿ ಸಭೆಯಲ್ಲಂತೂ …

Read More »

ಆಸ್ಪತ್ರೆಯಲ್ಲಿ ಬೆಂಕಿ: ದಟ್ಟ ಹೊಗೆಗೆ ಉಸಿರುಗಟ್ಟಿ ವೈದ್ಯ ದಂಪತಿ ಸೇರಿ ಐವರ ಸಾವು

ಧನ್ಬಾದ್(ಜಾರ್ಖಂಡ್​​): ಇಲ್ಲಿನ ಎಕ್ಸ್‌ಚೇಂಜ್ ರಸ್ತೆಯಲ್ಲಿರುವ ಹಾಜ್ರಾ ಆಸ್ಪತ್ರೆಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ವೈದ್ಯ ದಂಪತಿ ಸೇರಿದಂತೆ ಐವರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಇನ್ನೊಬ್ಬರು ತೀವ್ರ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಾಜ್ರಾ ಆಸ್ಪತ್ರೆಗೆ ಹೊಂದಿಕೊಂಡಂತೆ ವೈದ್ಯ ದಂಪತಿ ವಾಸಿಸುತ್ತಿದ್ದರು. ಆಸ್ಪತ್ರೆ ಮತ್ತು ವೈದ್ಯರ ಮನೆ ಮಧ್ಯೆ ಚಿಕ್ಕದಾದ ದಾರಿ ಇದೆ. ಆಸ್ಪತ್ರೆಯಲ್ಲಿ ಬೆಂಕಿ …

Read More »