Breaking News

Uncategorized

ಚಿಕ್ಕೋಡಿ ಫುಡ್ ಪಾಯಿಸನ್​ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೇ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಆಗಸ್ಟ್ 28ರಂದು ಫುಡ್ ಪಾಯಿಸನ್ ಪ್ರಕರಣದಲ್ಲಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕೋಡಿ ಪಟ್ಟಣದ ಶಬ್ಬಿರ್​ ಮಕಾಂದಾರ (58) ಮೃತರು. ಕಳೆದ ತಿಂಗಳು ಆಗಸ್ಟ್ 28 ರಂದು ಹಿರೇಕೋಡಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೋಜನದ ಬಳಿಕ 100ಕ್ಕೂ ಹೆಚ್ಚು ಜನ ವಾಂತಿ ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ …

Read More »

ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಡಬ್ಬಲ್ ಡೆಕ್ಕರ್ ಬಸ್ ಜಮಾನ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್​​ಗಳ ಜಮಾನ ಮತ್ತೆ ಶುರುವಾಗಲಿದೆ. ಪ್ರಾಯೋಗಿಕವಾಗಿ ಐದು ಮಾರ್ಗದಲ್ಲಿ ಡಬ್ಬಲ್ ಡೆಕ್ಕರ್ ಬಸ್​​ಗಳು ಸಂಚರಿಸಲಿವೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಸಾರವಾಗಿ ಬಸ್​​ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಾಸಿಪಾಳ್ಯ ಟಿಟಿಎಂಸಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಡಬ್ಬಲ್ ಡೆಕ್ಕರ್ ಬಸ್​​ಗಳಿಗೆ ಟೆಂಡರ್ ಕರೆಯಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪೂರ್ಣವಾಗಲಿದೆ. ಮೊದಲ ಹಂತವಾಗಿ 5 ಡಬ್ಬಲ್ ಡೆಕ್ಕರ್ ಬಸ್​​ಗಳನ್ನು ರಸ್ತೆಗಿಳಿಸಲಾಗುತ್ತದೆ. ಇದಕ್ಕಾಗಿ …

Read More »

ಬೈಕ್ ಸವಾರರ ಮೇಲೆ ನರಿ ದಾಳಿ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷ

ಬೆಳಗಾವಿ- ಇತ್ತೀಚಿಗೆ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿಯ ವೀರಭದ್ರ ನಗರದಲ್ಲಿ ನರಿ ದಾಳಿ ಮಾಡಿದ್ದು ಇಬ್ಬರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಇಬ್ಬರು ಬೈಕ್ ಸವಾರರ ಮೇಲೆ ನರಿಯೊಂದು ದಾಳಿ ಮಾಡಿದ್ದು ಕಾಲಿಗೆ ಕಚ್ಚಿ ಪರಾರಿಯಾಗಿದೆ.ನರಿ ದಾಳಿಯಿಂದ ಅಲ್ಪ ಗಾಯಗೊಂಡ ಇಬ್ಬರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ.     ರಾತ್ರಿ ಹೊತ್ತು ವೀರಭದ್ರ ನಗರದಲ್ಲಿ ಇಬ್ಬರು ಬೈಕ್ ಮೇಲೆ ಹೋಗುತ್ತಿರುವಾಗ …

Read More »

ನಬಾರ್ಡ್​ನಲ್ಲಿ 150 ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ

ಪದವಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಈ ಹುದ್ದೆ ಕುರಿತದ ಸಂಪೂರ್ಣ ಮಾಹಿತಿ ಇಲ್ಲಿದೆ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್​ (ನಬಾರ್ಡ್​)ನಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರಾದ್ಯಂತ ಈ ನೇಮಕಾತಿ ನಡೆಯಲಿದ್ದು, ಗ್ರೇಡ್ ​ಎ ಮಟ್ಟದ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ …

Read More »

ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರತಿಭಟನೆ

ಚಾಮರಾಜನಗರ: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ‌ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಸನಾತನ ಧರ್ಮ ಕೊರೊನಾ, ಡೆಂಘಿ ಇದ್ದಂತೆ ಎಂದು ಹೇಳಿಕೆ ಕೊಟ್ಟಿರುವುದು ಖಂಡನೀಯ, ಸನಾತನ ಧರ್ಮ ಎಂದರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ, ಉದಯನಿಧಿ ಅಂತಹವರು ಕೋಟಿ ಮಂದಿ ಹುಟ್ಟಿದರೂ ಹಿಂದೂ ಧರ್ಮವನ್ನು ಕಿತ್ತುಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಎಲ್ಲಾ ಧರ್ಮಗಳಿಗೂ ಅದರದೇ …

Read More »

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನ

ಬುಲವಾಯೊ: ಜಿಂಬಾಬ್ವೆ ಕ್ರಿಕೆಟ್​​ ಪರ ಟೆಸ್ಟ್​​ನಲ್ಲಿ ಶತಕ ವಿಕೆಟ್​ ಗಳಿಸಿದ ದಿಗ್ಗಜ ಆಲ್​ರೌಂಡರ್​ ಆಟಗಾರ ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು 49ನೇ ವಯಸ್ಸಿಗೆ ಇಹಲೋಕವನ್ನು ತ್ಯಜಿಸಿದ್ದಾರೆ. ಹೀತ್ ಸ್ಟ್ರೀಕ್ ಮರಣದ ಸುದ್ದಿಯಲ್ಲಿ ಅವರ ಪತ್ನಿ ನಾಡಿನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡುವ ಮೂಲಕ ತಿಳಿಸಿದ್ದಾರೆ. ಜಿಂಬಾಬ್ವೆಯ ಮಾಜಿ ನಾಯಕನ ಅಗಲಿಕೆಗೆ ಕ್ರಿಕೆಟ್​ ಜಗತ್ತು ಕಂಬನಿ ಮಿಡಿದಿದೆ. ಹೀತ್ ಸ್ಟ್ರೀಕ್ ಪತ್ನಿ ನಾಡಿನ್ ತಮ್ಮ ಫೇಸ್​ ಬುಕ್​ ಖಾತೆಯಲ್ಲಿ “ಸೆಪ್ಟೆಂಬರ್ …

Read More »

ವಿಶ್ವಕರ್ಮ ಜಯಂತಿ ನಿರ್ಲಕ್ಷ್ಯ ಬೇಡ ಅಸಮಾಧಾನ ವ್ಯಕ್ತಪಡಿಸಿದ

ಹುಕ್ಕೇರಿ : ವಿಶ್ವಕರ್ಮ ಮತ್ತು ಅಮರ ಶಿಲ್ಪಿ ಜಕನಾಚಾರಿ ಜಯಂತಿಯನ್ನು ಹುಕ್ಕೇರಿ ತಾಲೂಕಾ ಆಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹುಕ್ಕೇರಿ ನಗರದ ವಿಶ್ವಕರ್ಮ ಸಮಾಜದ ಮುಖಂಡರಾದ ರವೀಂದ್ರ ಬಡಿಗೇರ ಮತ್ತು ಕೆ ಬಿ ಬಡಿಗೇರ ಹಾಗೂ ಮೌನೇಶ ಪೊದ್ದಾರ ರವರು ಅಸಮಾಧಾನ ವ್ಯಕ್ತಪಡಿಸಿದರು ಹುಕ್ಕೇರಿ ನಗರದ ತಾಲೂಕಾ ಆಡಳಿತ ಸೌಧದಲ್ಲಿ ಜರುಗಿದ ವಿಶ್ವಕರ್ಮ ಮತ್ತು ಶ್ರೀ ಕೃಷ್ಣ ಜನ್ಮ ದಿನಾಚಾರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಡಿಗೇರ ಸಮಾಜ …

Read More »

ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿದ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಸೂರ್ಯನ ಕಡೆಗೆ ಚಲಿಸುತ್ತಿದ್ದು, Aditya L1 ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ.

  ಬೆಂಗಳೂರು: ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿದ ನಂತರ ಇಸ್ರೋ ತನ್ನ ಪ್ರಯಾಣವನ್ನು ಸೂರ್ಯನ ಕಡೆಗೆ ಚಲಿಸುತ್ತಿದೆ. ಇಂದು ಆಗಸಕ್ಕೆ ಹಾರಲಿರುವ Aditya L1 ಉಪಗ್ರಹ ಭಾಗಮಂಡಲದಲ್ಲಿ ಅಡಗಿರುವ ಹಲವು ರಹಸ್ಯಗಳನ್ನು ಬಿಚ್ಚಿಡಲಿದೆ ಎನ್ನುತ್ತಾರೆ ವಿಜ್ಞಾನಿಗಳು. ಇದು ಸೂರ್ಯನಿಂದ ಹೊರಹೊಮ್ಮುವ ವಿನಾಶಕಾರಿ ಸೌರ ಬಿರುಗಾಳಿಗಳು, ಪ್ಲಾಸ್ಮಾ ಮತ್ತು ಜ್ವಾಲೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ರೋಡೇಶಿಯಾದಲ್ಲಿ ಉಪಗ್ರಹಗಳು ಮತ್ತು ಬಾಹ್ಯಾಕಾಶ ನೌಕೆಗಳ ಪರಿಣಾಮಕಾರಿ ರಕ್ಷಣೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಲಾಗುತ್ತದೆ. …

Read More »

ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ’: ಪ್ರಜ್ವಲ್ ರೇವಣ್ಣ

ಹಾಸನ: 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್‌​ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದೆ. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ …

Read More »