ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು. ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು …
Read More »ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದರು.
ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ. ದೇವರಾಜ ಅರಸ ಅವರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು, ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ …
Read More »ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ ಕಣ್ಣಾಮುಚ್ಚಾಲೆ ಆಟ ಅನ್ನದಾತನ ನಿದ್ದೆಗೆಡಿಸಿದೆ.
ಬೆಳಗಾವಿ: ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ. ಇದರಿಂದಾಗಿ ಸಾಲ ಮಾಡಿ ಭತ್ತ ಬೆಳೆದ ರೈತರನ್ನು ಬೆಳೆಹಾನಿ ಭೀತಿ ಕಾಡುತ್ತಿದೆ. ಮಳೆ ಸುರಿಸದ ಮಳೆರಾಯನ ವಿರುದ್ಧ ಕೋಪಗೊಂಡಿರುವ ರೈತರು ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಸರ್ಕಾರದ ವಿರುದ್ಧವೂ ಹಿಡಿಶಾಪ ಹಾಕುತ್ತಿದ್ದಾರೆ. ನೀರಿಲ್ಲದೇ ಭತ್ತದ ಗದ್ದೆ ಬಿರುಕು ಬಿಡುತ್ತಿದೆ. ಒಣಗುವ ಸ್ಥಿತಿ ತಲುಪಿವೆ ನಾಟಿ ಮಾಡಿರುವ ಭತ್ತದ ಸಸಿಗಳು. ಮಳೆಗಾಗಿ ಆಕಾಶದತ್ತ ಮುಖಮಾಡಿ ಅನ್ನದಾತ ಕುಳಿತಿದ್ದಾನೆ. ಇಂಥ ದೃಶ್ಯಗಳು …
Read More »ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ.: ಹೆಬ್ಬಾಳ್ಕರ್
ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಾಗಪಂಚಮಿಗೆ ಉಂಡಿ …
Read More »ಭಾರತ-ಐರ್ಲೆಂಡ್ ಮೊದಲ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ: ಭಾರತಕ್ಕೆ 139 ರನ್ ಗುರಿ
ಡಬ್ಲಿನ್ (ಐರ್ಲೆಂಡ್): ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದ್ದು, ಮೊದಲ ಪಂದ್ಯ ಡಬ್ಲಿನ್ನ ವಿಲೇಜ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎರಡೂ ತಂಡಗಳು ತವಕಿಸುತ್ತಿವೆ. ಟಾಸ್ ಗೆದ್ದ ಬುಮ್ರಾ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಅರ್ಧಶತಕ …
Read More »ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು
ಬೆಂಗಳೂರು : ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಏಕಾಏಕಿ ಪೊಲೀಸರ ಮೇಲೆರಗಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಬ್ಯಾಟರಾಯನದೊಡ್ಡಿಯ ಆರೋಪಿ ಸೋಮಶೇಖರ್ ಎಂಬಾತನನ್ನು ಬೆಳಗ್ಗೆ ಸ್ಥಳ ಮಹಜರಿಗೆ ಕರೆದೊಯ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮಾದಪ್ಪ ಎಂಬುವರ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ಉಳಿದ ಪೊಲೀಸರು …
Read More »ರಾಜ್ಯದ 9 ಜಿಲ್ಲೆಯ 14 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಯಾರ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆ?
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು …
Read More »ತಮಿಳುನಾಡು ರಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನದಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದ ಮಾಜಿ ಸಿಎಂ
ಬೆಂಗಳೂರು: ”ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡದೇ, ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ” ಎಂದು ಸರ್ಕಾರದ ನಿಲುವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ”ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು …
Read More »ರೈತರು ಈ ಕೆಲಸ ಮಾಡಿದ್ರೆ ಪಿಎಂ ಕಿಸಾನ್ 14 ನೇ ಕಂತು ಪಡೆಯಬಹುದು!
ದೇಶದ ಅಗತ್ಯವಿರುವ ಮತ್ತು ಬಡ ವರ್ಗಕ್ಕಾಗಿ ಸರ್ಕಾರವು ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಮೂಲಕ, ಅಗತ್ಯವಿರುವ ಆರ್ಥಿಕ ಸಹಾಯವನ್ನು ಜನರಿಗೆ ತಲುಪಿಸಲಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ ಮತ್ತು ನಂತರ ಈ ಹಣವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2-2 ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ …
Read More »ಧಾರವಾಡ: ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ.. ಇಬ್ಬರು ಸಾವು
ಧಾರವಾಡ: ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದೆ. ಕಳೆದ ತಡರಾತ್ರಿ ಧಾರವಾಡದಿಂದ ಊಟಕ್ಕೆ ಢಾಬಾಗೆ ಹೋಗಿದ್ದ ಯುವಕರು ತಮ್ಮ ಕಾರಿನಲ್ಲಿ ವಾಪಸ್ ಬರುವಾಗ ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಚಿಕಿತ್ಸೆ ಫಲಿಸದೇ ಧಾರವಾಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ವಿನಯ ಹಿರೇಮಠ (28) ಹಾಗೂ ಸಂದೀಪ್ (29) …
Read More »
Laxmi News 24×7