ಬೆಂಗಳೂರು: ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ …
Read More »ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ
ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ. ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. …
Read More »ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ಬೇಗ ಗುಣಮುಖರಾಗಿ’: ಹೆಚ್ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ”ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್ಡಿಕೆ ಮಾಡಿದ ತೀಕ್ಷ್ಣ ಟ್ವಿಟ್ಗೆ ಪ್ರತಿಕ್ರಿಯಿಸಿದ ಅವರು, ”ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ …
Read More »ಇನ್ಮುಂದೆ ಬೆಂಗಳೂರಲ್ಲಿ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕಿದ್ರೆ 50 ಸಾವಿರ ರೂಪಾಯಿ ದಂಡ: ಡಿ .ಕೆ. ಶಿ.
ಬೆಂಗಳೂರು: ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಯಾರೂ ಕೂಡ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕುವ ಹಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕುಮಾರ ಕೃಪಾ ಅತಿಥಿ ಗೃಹದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಇನ್ನು ಬೆಂಗಳೂರಾದ್ಯಂತ ಫ್ಲೆಕ್ಸ್ ಸಂಪೂರ್ಣವಾಗಿ ನಿಷೇಧ ಮಾಡುತ್ತೇವೆ. ಅನಧಿಕೃತ ಫ್ಲೆಕ್ಸ್ಗಳಿಂದ ನನಗೆ ಅಸಹ್ಯ ಆಗುತ್ತಿದೆ. ಕೋರ್ಟ್ನಿಂದ ಕೂಡ ನಿರ್ದೇಶನ ಇದೆ. ಎಲ್ಲಾ ಫ್ಲೆಕ್ಸ್, ಹೋರ್ಡಿಂಗ್ ತೆಗೆಯಲು ಸೂಚನೆ ನೀಡಲಾಗಿದೆ. ಬೆಂಗಳೂರಿನಾದ್ಯಂತ ಆ.15ರೊಳಗೆ ಎಲ್ಲಾ …
Read More »ಕರೆಂಟ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ನನ್ನೇ ಕೊಂದರು!
(ಒಡಿಶಾ): ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಇಂದು (ಸೋಮವಾರ) ಭೀಕರ ಹತ್ಯೆ ನಡೆದಿದೆ. ಅಧಿಕ ಪ್ರಮಾಣದ ಬಿಲ್ ನೀಡುತ್ತಿದ್ದಾನೆ ಎಂಬ ಆರೋಪದ ಮೇಲೆ ವಿದ್ಯುತ್ ಮೀಟರ್ ರೀಡರ್ನನ್ನೇ ಹರಿತವಾದ ಆಯುಧಗಳಿಂದ ಇರಿದು ಹತ್ಯೆ ಮಾಡಲಾಗಿದೆ. ಹಂತಕರು ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಗಂಜಾಂ ಜಿಲ್ಲೆಯ ಕುಪಾಟಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಹತ್ಯೆಯಾಗಿದೆ. ಲಕ್ಷ್ಮೀ ನಾರಾಯಣ ತ್ರಿಪಾಠಿ ಮೃತ ವ್ಯಕ್ತಿ. ಹಲವು ವರ್ಷಗಳಿಂದ ಇವರು ವಿದ್ಯುತ್ ಬಿಲ್ ರೀಡರ್ ಆಗಿ ಕೆಲಸ ಮಾಡುತ್ತಿದ್ದರು. ಪ್ರತಿ ತಿಂಗಳು …
Read More »ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ: ಸಚಿವ ಆರ್.ಬಿ. ತಿಮ್ಮಾಪೂರ ಕಿಡಿ
ಬಾಗಲಕೋಟೆ: ”ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ” ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಕೆಪಿಡಿ ಸಭೆ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ಸಿಂಗಪುರದಲ್ಲಿ ಆಪರೇಷನ್ ಸರ್ಕಾರ ಕೆಡವಲು ಯೋಚನೆ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ”ಬಿಜೆಪಿಯವರಿಗೆ ಜನರ ಆಶೀರ್ವಾದ ದೊರೆತಿಲ್ಲ. ಜನ ತಿರಸ್ಕರಿಸಿದರೂ ಬಿಜೆಪಿಯವರು ಅಧಿಕಾರದ ದಾಹದಿಂದ ಈ ಪ್ರಯತ್ನ ನಡೆದಿರಬಹುದು” ಎಂದು ಹೇಳಿದರು. …
Read More »ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ
ಬಾಗಲಕೋಟೆ: ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರ ಎಸ್. ಸಿ. ಗ್ರಾಮದಲ್ಲಿರುವ ಸರಕಾರಿ ಶಾಲೆ ಇದಾಗಿದೆ. ಮಳೆಯಿಂದ ಸಂಪೂರ್ಣ ಶಾಲೆಯ ಮೇಲ್ಛಾವಣಿ ಜಖಂಗೊಂಡಿದೆ. ಈ ಸರ್ಕಾರಿ ಶಾಲೆಯು 150 ವರ್ಷದ ಹಳೆಯದಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿತ್ತು. ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆ ಹೆಂಚಿನ ಮೇಲ್ಛಾವಣಿ ಕಸಿದುಬಿದ್ದಿದೆ. ಶಾಲೆಯ ಒಟ್ಟು ಐದು ಕೊಠಡಿಗಳು ಹೆಂಚಿನ ಮೇಲ್ಛಾವಣಿ ಹೊಂದಿವೆ. …
Read More »ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ B.J.P.ಹೈಕಮಾಂಡ್, ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ. ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ …
Read More »ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ.
ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …
Read More »ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತಮ್ಮನನ್ನೇ ಕೊಂದ ಪುತ್ರ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಆಸ್ತಿಗಾಗಿ ಹೆತ್ತ ತಾಯಿಯನ್ನು ಮಗ ಕೊಲೆ ಮಾಡಿರುವ ಪ್ರಕರಣ ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ. ಚಿನ್ನಮ್ಮ ಕೊಲೆಗೀಡಾದ ಮಹಿಳೆ. ಚಿನ್ನಮ್ಮನಿಗೆ ಇಬ್ಬರು ಗಂಡು ಮಕ್ಕಳು. ಮೊದಲನೇ ಮಗ ರಾಘವೇಂದ್ರ ಮತ್ತು ಎರಡನೇ ಮಗ ರಾಜೇಶ್. ಮೊದಲ ಮಗ ರಾಘವೇಂದ್ರನಿಗೆ ಸುಧಾ ಎಂಬುವವಳೊಂದಿಗೆ ಮದುವೆ ಆಗಿದೆ. ಕಳೆದ ಒಂದು ವರ್ಷದ ಹಿಂದೆ ಚಿನ್ನಮ್ಮ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಇರೋ ಜಮೀನನ್ನು ಮಾರಿ ಇಬ್ಬರು ಮಕ್ಕಳಿಗೆ ಸಮನಾಗಿ ಹಂಚುವ …
Read More »
Laxmi News 24×7