Breaking News

Uncategorized

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

ಚಾಮರಾಜನಗರ: ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ …

Read More »

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ  ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್‌ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …

Read More »

ಪ್ರಿಯಕರನ ಹುಟ್ಟುಹಬ್ಬದಂದು ಆತ ಇದ್ದ ಜೈಲಿಗೆ ಹೋಗಿ ರೀಲ್ಸ್​ ಮಾಡಿದ ಗೆಳತಿ

ಭೋಪಾಲ್: ಛತ್ತೀಸ್‌ಗಢದ ಅತ್ಯಂತ ಸುರಕ್ಷಿತ ಕಾರಾಗೃಹಗಳಲ್ಲಿ ರಾಯ್‌ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು ತನ್ನ ಪ್ರಿಯಕರನ ಹುಟ್ಟುಹಬ್ಬದಂದು ಸಂದರ್ಶಕರ ಕೋಣೆಯೊಳಗೆ ಮುಕ್ತವಾಗಿ ವಿಡಿಯೋ ರೆಕಾರ್ಡ್​ ಮಾಡಿದ್ದಾರೆ. ಮೊಬೈಲ್​ನಲ್ಲಿ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಜೈಲಿನ ಭದ್ರತೆ ಮತ್ತು ಅಧಿಕೃತ ಮೇಲ್ವಿಚಾರಣೆಯ ಬಗ್ಗೆ ಗೊಂದಲದ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, …

Read More »

ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ

ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ …

Read More »

ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು

ನವದೆಹಲಿ: 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8%-7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ  ಹೇಳಿದೆ. ಫೆ.1 ರಂದು ಬಜೆಟ್‌ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಇಂದು ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? – ಜಾಗತಿಕ ವ್ಯಾಪಾರ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಭಾರತದ ಒಟ್ಟು ರಫ್ತುಗಳು (ಸರಕು ಮತ್ತು ಸೇವೆಗಳು) 2025ರ ಹಣಕಾಸು ವರ್ಷದಲ್ಲಿ ದಾಖಲೆಯ 825.3 ಬಿಲಿಯನ್‌ ಡಾಲರ್‌ಗೆ …

Read More »

ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ

ಬೆಳಗಾವಿ ನಗರದಲ್ಲಿ ಆಯೋಜನೆಯಾಗಿರುವ ‘ವಿರಾಟ ಹಿಂದೂ ಸಮ್ಮೇಳನ’ದ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಇದರ ಭಾಗವಾಗಿ ಶ್ರೀ ನಗರದ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯು ಸಾರ್ವಜನಿಕರ ಗಮನ ಸೆಳೆಯಿತು. ವಿರಾಟ ಹಿಂದೂ ಸಮ್ಮೇಳನದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ರಂಗೋಲಿ ಸ್ಪರ್ಧೆಯಲ್ಲಿ ಮಾಳಮಾರುತಿ ಬಡಾವಣೆಯ ನೂರಾರು ಮಹಿಳೆಯರು ಹಾಗೂ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಶ್ರೀ ನಗರದ ಶ್ರೀ ಸಾಯಿ ಮಂದಿರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು …

Read More »

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪಾಲ್ಗೊಂಡು ದೇವರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಿಕೆಪಿಎಸ್ (PKPS) ಸದಸ್ಯರು ನನ್ನನ್ನು ಸತ್ಕರಿಸಿ ಮನವಿಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದೇವರ್, ಹಿರಿಯ ನಾಯಕ ಶ್ರೀ ಅಶೋಕ್ ನಾಯಕ್, ಶ್ರೀ ಸುಭಾಷ್ ವಂಟಗೋಡಿ, ಶ್ರೀ ಸುನಿಲ್ …

Read More »

ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು  ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ  ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ …

Read More »

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

ಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು‌ ಮಂಡಿಸಿ, ಅದರಲ್ಲಿನ ಅಂಶವನ್ನು ಓದದೇ ತಾವೇ ಬರೆದು ತಂದ ಪ್ಯಾರಾವನ್ನು ಓದಿ ಸದನದಿಂದ ತೆರಳಿದರು. ಬಳಿಕ ಪುನಾರಂಭಗೊಂಡ ಕಲಾಪದಲ್ಲಿ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಮಂಡನೆ ಮಾಡಿದರು. ಭಾಷಣದ 11 ಪ್ಯಾರಾ ವಿಬಿ ಜಿ ರಾಮ್ ಜಿ ವಿರುದ್ಧ …

Read More »

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. Creadit kannada prabha ಬೆಂಗಳೂರು: ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ …

Read More »