Breaking News

Uncategorized

ಧಾರವಾಡ ಹೈಕೋರ್ಟ್‌ನಲ್ಲಿ ಹೊಸ ಮೈಲಿಗಲ್ಲು – ಮಹಿಳಾ ನ್ಯಾಯಮೂರ್ತಿಗಳಿರುವ ಏಳು ಪೀಠಗಳಿಂದ ಆ.1ರಂದು ವಿಶೇಷ ಕಲಾಪ

ಧಾರವಾಡ: ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ  ವಿಭಾಗೀಯ ಪೀಠದಲ್ಲಿ ಆ.1ರಂದು ಸಂಪೂರ್ಣವಾಗಿ ಮಹಿಳಾ ನ್ಯಾಯಮೂರ್ತಿಗಳನ್ನೊಳಗೊಂಡ ಏಳು ಪೀಠಗಳಿಂದ ವಿಶೇಷ ಕಲಾಪ ಕಾರ್ಯನಿರ್ವಹಿಸಲಿವೆ. ನ್ಯಾಯಾಲಯಗಳ ಇತಿಹಾಸದಲ್ಲೇ ಅಪರೂಪದ ಈ ವಿಶೇಷ ಕಲಾಪವು ಮಹಿಳಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಯಲಿದ್ದು, ನ್ಯಾಯಾಂಗ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಲಿದೆ. ಧಾರವಾಡ ವಕೀಲರ ಸಂಘದ ಮಹಿಳಾ ಪ್ರತಿನಿಧಿ ಸಂಜನಾ ಎಸ್. ಮುಧೋಳ್ ಅವರ ಮನವಿಯ ಮೇರೆಗೆ ಈ ವಿಶೇಷ ಮಹಿಳಾ ಪೀಠಗಳ ಕಲಾಪವನ್ನು ಆಯೋಜಿಸಲಾಗಿದೆ. ಆಗಸ್ಟ್ 1ರ …

Read More »

ಗೂಂಡಾ ಕಾಯ್ದೆಯಡಿ ರೌಡಿ ವಿಘ್ನೇಶ್ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ವಿಘ್ನೇಶ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಬಂಧಿತ ರೌಡಿ ವಿಘ್ನೇಶ್ ವಿರುದ್ಧ ಕೊಲೆ ಯತ್ನ, ಅತ್ಯಾಚಾರ, ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದ ಮೇಲೆಯೂ ಈತ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಭಯದ …

Read More »

ಬೆಂಗಳೂರಲ್ಲಿ ʻನೀಟ್ʼ ಪ್ರತಿಭಟನೆ ವೇಳೆ ವಿವಾದ – 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ ಪರ ಪೋಸ್ಟರ್

ಬೆಂಗಳೂರು: ನೀಟ್ ಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿದ್ದ ವೇಳೆ ಶುಕ್ರವಾರ (ಜು.24) ಕೆಲವರು ಹಿಡಿದಿದ್ದ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್‌ಗಳು ವಿವಾದ ಸೃಷ್ಟಿಸಿವೆ. ಪ್ರತಿಭಟನೆಗೆ ಬಂದಿದ್ದ ಕೆಲವರು ʻUkhad Le BLR Policeʼ ಎಂಬ ಬರಹವಿದ್ದ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ರೆ, ಮತ್ತೊಂದು ಕಡೆ ಉಮರ್‌ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ …

Read More »

ಆಷಾಢ ಮಾಸದ ಸಂಭ್ರಮ – ತಾಯಿ ಚಾಮುಂಡಿಗೆ ಸಪ್ತಮಿ, ಅಶ್ವಿನಿ ಗೌಡ, ಧನ್ವೀರ್ ವಿಶೇಷ ಪೂಜೆ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದಿದ್ದಾರೆ. ಆಷಾಢ ಮಾಸದ ಹಿನ್ನೆಲೆ ಕಾಂತಾರ ಬೆಡಗಿ ಸಪ್ತಮಿ ಗೌಡ , ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ  ಹಾಗೂ ನಟ ಧನ್ವೀರ್‌ ಕೂಡ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸದಸ್ಯರು, ಸ್ನೇಹಿತರ ಜೊತೆಗೆ ಬಾಗೀನ ಸಮೀತವಾಗಿ ಬಂದು ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ನಟ …

Read More »

ಎಸಿಪಿ ರಾಜೇಶ್‌ಗೆ ಡಿಜಿ ಪದಕ ಪ್ರದಾನ

ಬೆಂಗಳೂರು: ಕರ್ನಾಟಕದ ಪೊಲೀಸ್ ಅಧಿಕಾರಿ ಎಸಿಪಿ ಎಲ್.ವೈ ರಾಜೇಶ್  ಅವರಿಗೆ ಡಿಜಿ ಪದಕವನ್ನು ಪ್ರದಾನ ಮಾಡಲಾಯಿತು. ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ಹೆಮ್ಮೆ ಅವರದ್ದು. ಕನ್ನಡದ ಯುವ ನಟ ಭೀಮ ಚಿತ್ರ ಖ್ಯಾತಿಯ ಜಯಸೂರ್ಯ ಅವರ ತಂದೆಯೂ ಆಗಿರುವ ರಾಜೇಶ್ ಅವರು, ಪೊಲೀಸ್ ಸೇವೆಯ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರತಿ ವರ್ಷವೂ ಫೇಲ್ ಆಗಿರುವ …

Read More »

ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡರಿಗೆ ಸಾಂತ್ವನ ಹೇಳಿದ ಗವರ್ನರ್, ಯತ್ನಾಳ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್  ಹೆಚ್‌ಡಿಡಿ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ. ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು. ಇನ್ನೂ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರು ಕೂಡ ಇಂದು (ಜು.24) ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, …

Read More »

ನೇಣು ಬಿಗಿದ ಸ್ಥಿತಿಯಲ್ಲಿ ಪದವೀಧರೆಯ ಶವ ಪತ್ತೆ – ಕೊಲೆ ಶಂಕೆ

ಗದಗ: ಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣುಗಿದ ಸ್ಥಿತಿಯಲ್ಲಿ ಪದವೀಧರೆಯ ಶವ ಪತ್ತೆಯಾಗಿರುವ ಘಟನೆ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ  ಹಾಸ್ಟೆಲ್‌ನಲ್ಲಿ ನಡೆದಿದೆ. ಪದವೀಧರೆಯ ಶವ ನಾಗಾವಿ ಬಳಿ ಹಾಸ್ಟೆಲ್ ನಲ್ಲಿ  ಕಂಡುಬಂದಿದೆ. 25 ವರ್ಷದ ವೀಣಾ ಹಾನಾಪುರ ಮೃತ ಪದವೀಧರೆ. ವೀಣಾ ಆರ್‌ಡಿಪಿಆರ್‌ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆ ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದವಳು. ವೀಣಾ ಸಾವಿನ ಬಗ್ಗೆ ನಿಖರವಾದ ಮಾಹಿತಿ …

Read More »

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿ – ಕೃಷಿ ಅಧಿಕಾರಿಗಳ ದಾಳಿ

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕಗಳನ್ನು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ನಕಲಿ ಕೀಟನಾಶಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 200 ಲೀಟರ್‌ಗೂ ಹೆಚ್ಚು ವಿವಿಧ ಕೃಷಿ ರಾಸಾಯನಿಕಗಳು, ಪ್ಯಾಕಿಂಗ್ ಸಾಮಗ್ರಿ ಹಾಗೂ 11 ರಿಂದ 12 ಕಂಪನಿಗಳ ಹೆಸರಿನ ನಕಲಿ ಲೇಬಲ್‌ಗಳನ್ನ ವಶಪಡಿಸಿಕೊಂಡಿದ್ದಾರೆ. ಆರೋಪಿ ಸೋಮಸುಂದರ್ ತಾನು ʻಬೆಳೆ ತಜ್ಞʼ …

Read More »

ಅಪ್ಪ ಪ್ರಧಾನಿಯಾದಾಗ ಅಮ್ಮ ರಾಜ್ಯ ಬಿಟ್ಟು ಹೋಗ್ಬೇಡಿ, ಇಲ್ಲಿನ ಜನರ ಸೇವೆ ಮಾಡಿ ಅಂದಿದ್ರು: ಚೆನ್ನಮ್ಮ ನೆನೆದು ಪುತ್ರಿಯರ ಮಾತು

ಬೆಂಗಳೂರು: ಅಪ್ಪ ಪ್ರಧಾನಿಯಾದಾಗ ಅಮ್ಮ ರಾಜ್ಯ ಬಿಟ್ಟು ಹೋಗ್ಬೇಡಿ, ಇಲ್ಲಿನ ಜನರ ಸೇವೆ ಮಾಡಿ ಅಂದಿದ್ರು ಎಂದು ದೇವೇಗೌಡರ  ಪುತ್ರಿಯರಾದ ಅನಸೂಯ-ಶೈಲಜಾ ಅವರು ತಾಯಿ ಚೆನ್ನಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಪ್ಪ ಪ್ರಧಾನಿ ಅಭ್ಯರ್ಥಿ ಆದಾಗ ಮೊದಲು ಅಮ್ಮನಿಗೆ ಫೋನ್ ಮಾಡಿ ಹೇಳಿದ್ರು. ಆದರೆ ಅಮ್ಮ ರಾಜ್ಯ ಬಿಟ್ಟು ಹೋಗಬೇಡಿ. ಜನರ ಸೇವೆ ಮಾಡಿ ಅಂದಿದ್ರು. ಅಪ್ಪ ವಿಪಕ್ಷ ನಾಯಕ ಆಗಿದ್ದಾಗ ಅವರೇ ಕಾರ್ ಡ್ರೈವ್ …

Read More »

‘ನೀಟ್’ ಪ್ರತಿಭಟನೆ; ಎನ್‌ಟಿಎ 47 ಸಿಬ್ಬಂದಿಯನ್ನು ಹೊರಹಾಕಿದ ಕೇಂದ್ರ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆಯ ನಡುವೆ ಪರೀಕ್ಷಾ ಸಂಸ್ಥೆಯ 47 NTA ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪರೀಕ್ಷಾ ಸಂಸ್ಥೆಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ ಕೆಲವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಪಾತ್ರಗಳು ಅಥವಾ ಹುದ್ದೆಗಳ ಬಗ್ಗೆ ವಿವರಗಳನ್ನು ನೀಡಿಲ್ಲ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಮುಂದಿನ ತಿಂಗಳಲ್ಲಿ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸಂಪೂರ್ಣವಾಗಿ ಆಧುನೀಕರಿಸಲಿದೆ …

Read More »