ಬೆಂಗಳೂರು: ”ಪೊಲೀಸ್ ವಸತಿ ಗೃಹ- 2025 ಯೋಜನೆಯಡಿ ರಾಜ್ಯದಲ್ಲಿ 10,034 ವಸತಿ ಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ” ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆ ಆರಂಭವಾದ ಪ್ರಶ್ನೋತ್ತರದ ಕಲಾಪದಲ್ಲಿ ಜೆಡಿಎಸ್ ಹಿರಿಯ ಸದಸ್ಯ ಹೆಚ್.ಡಿ. ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ”9524 ಪಿಸಿ ವಸತಿ ಗೃಹಗಳು, 510 ಪಿಎಸ್ಐ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. …
Read More »ಬೆಳಗಾವಿಯಲ್ಲಿ ಶತಕ ಬಾರಿಸಿದ ಟೊಮೆಟೋ, ಮೆಣಸಿನಕಾಯಿ ದರ
ಬೆಳಗಾವಿ: ರಾಜ್ಯದೆಲ್ಲೆಡೆ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಟೊಮೆಟೊ ಮತ್ತು ಮೆಣಸಿನಕಾಯಿ ಬೆಲೆ ನೂರರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ. ಒಂದೆಡೆ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮಳೆರಾಯನ ಆಗಮನಕ್ಕಾಗಿ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ. ಜುಲೈ ತಿಂಗಳ ಮೊದಲ ವಾರ ಮುಗಿಯುತ್ತ ಬಂದರೂ ಜಿಲ್ಲೆಯಲ್ಲಿ …
Read More »ಗ್ಯಾರಂಟಿ ಯೋಜನೆ ನೀಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ: ಬಿಜೆಪಿ ಪ್ರತಿಭಟನೆ
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಧರಣಿ ನಡೆಸಿದ ಬಿಜೆಪಿಗರು, ಕಾಂಗ್ರೆಸ್ ಗ್ಯಾರಂಟಿಗಳನ್ನು ಬೇಷರತ್ತಾಗಿ ಜಾರಿ ಮಾಡಬೇಕು ಎಂದು …
Read More »ಮುಂಗಾರಿನಿಂದ ಜೋಗದಲ್ಲಿ ಜಲಸಿರಿ;
ಶಿವಮೊಗ್ಗ : ಜಿಲ್ಲೆಯಲ್ಲಿ ಮುಂಗಾರು ತಡವಾದರು ಸಹ ಸಣ್ಣದಾಗಿ ಪ್ರಾರಂಭಗೊಂಡಿದೆ. ಆದರೆ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಮಳೆ ಬಾರದೆ ಇದ್ದರೂ ಸಹ ವರುಣನ ಆಗಮನ ಮಲೆನಾಡ ರೈತರಿಗೆ ತುಸು ನೆಮ್ಮದಿ ತರಿಸಿದೆ. ಇನ್ನು ಜಗತ್ ಪ್ರಸಿದ್ಧ ಜೋಗ ಜಲಪಾತಕ್ಕೆ ಮಳೆಯಿಂದ ಜೀವಕಳೆ ಬಂದಂತೆ ಆಗಿದೆ. ಮುಂಗಾರು ಸುಮಾರು 40 ದಿನ ತಡವಾದರೂ ಜೋಗದಲ್ಲಿ ಶರಾವತಿ ಬಳಕುತ್ತಾ ಮೇಲಿಂದ ಧುಮ್ಮಿಕ್ಕುತ್ತಿದ್ದಾಳೆ. ರಾಜಾ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿ 960 ಅಡಿ ಎತ್ತರದಿಂದ …
Read More »ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜೋಶಿ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »ಪ್ರತಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆಸಬೇಕೇ?: ಬಿಜೆಪಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ
ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದೂವರೆ ತಿಂಗಳು ಕಳೆದಿದ್ದರೂ ಪ್ರತಿಪಕ್ಷ ನಾಯಕರ ಆಯ್ಕೆ ಮಾಡದ ಬಿಜೆಪಿ ಕ್ರಮವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರವಾಗಿ ಟೀಕಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರದ ಪ್ರಥಮ ಬಜೆಟ್ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ. ಅಧಿವೇಶನ ಶುರುವಾಗುತ್ತಿದ್ದರೂ ರಾಜ್ಯದ ಅಧಿಕೃತ ಪ್ರತಿ ಪಕ್ಷವಾದ ಬಿಜೆಪಿ ಪ್ರತಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಒಂದು ಸೋಲು ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡದಷ್ಟು ಬಿಜೆಪಿ ನಾಯಕರಿಗೆ ರೇಜಿಗೆ …
Read More »ಅವಧಿ ಮುಗಿದ ಆಹಾರ ಉತ್ಪನ್ನಗಳ ಮರು ಪ್ಯಾಕಿಂಗ್.. ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ
ಬೆಂಗಳೂರು: ಬಳಕೆಯ ಅವಧಿ ಮುಗಿದ ಆಹಾರ ಉತ್ಪನ್ನಗಳನ್ನು ಮರು ಪ್ಯಾಕಿಂಗ್ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿ ಆಗಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾಟನ್ ಪೇಟೆಯ ಖಾಸಗಿ ಟ್ರೇಡಿಂಗ್ ಕಂಪನಿಯ ಗೋದಾಮಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಅವಧಿ ಮುಗಿದ ಆಹಾರಗಳುಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಸೇರಿದ, ಬಳಕೆಯ ಅವಧಿ ಮೀರಿದ ಬಿಸ್ಕೆಟ್ಸ್, ಚಾಕೊಲೇಟ್, ಚಾಕೊಲೇಟ್ ಪೌಡರ್, ಅಡುಗೆ ಎಣ್ಣೆ, …
Read More »ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ ಪಕ್ಷದ ನಾಯಕ ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ: ಕೃಷ್ಣ ಭೈರೇಗೌಡ
ಬೆಳಗಾವಿ: ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ ಎಂದರೆ, ಇದಕ್ಕಿಂತ ರಾಜಕೀಯ ನಾಯಕತ್ವದ ವೈಫಲ್ಯ ಇನ್ಯಾವುದಾದರೂ ಕರ್ನಾಟಕದಲ್ಲಿ ಇದೆಯೇ? ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಟೀಕಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಬೀದಿಗಿಳಿದು, ಒಬ್ಬರಿಗೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ. ಅವರು ಆಡುತ್ತಿರುವ ಮಾತುಗಳನ್ನು …
Read More »ಕಾನೂನು ಸುವ್ಯವಸ್ಥೆ ಪೊಲೀಸ್ ಇನ್ಸ್ಪೆಕ್ಟರ್ಗಳಿಗೂ ಬಾಡಿವೋರ್ನ್ ಕ್ಯಾಮರಾ
ಬೆಂಗಳೂರು: ಪೊಲೀಸ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ನಗರದಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ಬಲಪಡಿಸಲು ಟ್ರಾಫಿಕ್ ಹಾಗೂ ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಬಾಡಿವೋರ್ನ್ ಕ್ಯಾಮರಾವನ್ನು ಇನ್ನು ಮುಂದೆ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ಗಳಿಗೂ ನೀಡಲು ನಗರ ಪೊಲೀಸ್ ಇಲಾಖೆ ನಿರ್ಧರಿಸಿದೆ. ನಗರದಲ್ಲಿರುವ 111 ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ ತಲಾ ಒಂದು ಬಾಡಿವೋರ್ನ್ ಕ್ಯಾಮರಾವನ್ನು ಸೂಕ್ತ ತರಬೇತಿ ನೀಡಿ ಇನ್ನೊಂದು ವಾರದಲ್ಲಿ ವಿತರಿಸಲು ನಗರ ಪೊಲೀಸ್ ಆಯುಕ್ತ …
Read More »
Laxmi News 24×7